ಜಿಲ್ಲೆಗಳು

ಚರ್ಮಗಂಟು ರೋಗದಿಂದ ಹಸು ಸಾವು

ಭಾರತೀನಗರ: ಚರ್ಮಗಂಟು ರೋಗ ಕಾಣಿಸಿಕೊಂಡು ನಾಟಿ ಹಸುವೊಂದು ಮೃತಪಟ್ಟಿರುವ ಘಟನೆ ಸಮೀಪದ ಅಣ್ಣೂರು ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಕೃಷ್ಣಪ್ಪ (ಗುಡ್ಡಪ್ಪ) ಎಂಬುವವರಿಗೆ ಸೇರಿದ ನಾಟಿ ಹಸುವಿಗೆ ಕಳೆದ ೧೦ ದಿನಗಳಿಂದ ಚರ್ಮಗಂಟು ರೋಗ ಕಾಣಿಸಿಕೊಂಡಿತು. ಚಿಕಿತ್ಸೆ ಕೊಡಿಸಿದರೂ ಫಲಕಾರಿಯಾಗದೆ ಶನಿವಾರ ಮೃತಪಟ್ಟಿದೆ. ಸ್ಥಳಕ್ಕೆ ಕೆ.ಎಂ.ದೊಡ್ಡಿ ಪಶುವೈದ್ಯಾಧಿಕಾರಿ ಶಿವಶಂಕರ್, ಪಶುವೈದ್ಯ ಪರೀಕ್ಷಕ ಚನ್ನಪ್ಪ ಭೇಟಿ ನೀಡಿ ಪರಿಶೀಲಿಸಿ ಸರ್ಕಾರದಿಂದ ಸಿಗುವ ಪರಿಹಾರವನ್ನು ಒದಗಿಸಿಕೊಡುವ ಭರವಸೆಯನ್ನು ನೀಡಿ ಅಂತ್ಯಸಂಸ್ಕಾರ ನಡೆಸಿದ್ದಾರೆ.

ಸೋಂಕಿತ ರಾಸುಗಳಿಗೆ ನಿರ್ಧಿಷ್ಟ ಚಿಕಿತ್ಸೆ ಇಲ್ಲ. ಆದರೂ ಆಂಟಿ ಬಾಂಟಿಕ್ ಮತ್ತು ನೋವು ನಿವಾರಕ ಲಸಿಕೆ ನೀಡಬಹುದು. ಹೊರ ರಾಜ್ಯಗಳಿಂದ ಚರ್ಮಗಂಟು ರೋಗ ಹರಡುತ್ತಿದೆ. ಉತ್ತರ ಕರ್ನಾಟಕ ಜಿಲ್ಲೆಗಳ ರೋಗ ಪೀಡಿತ ರಾಸುಗಳನ್ನು ಈ ಭಾಗದ ರೈತರು ಖರೀದಿಸಿ ತಂದಾಗ ಚರ್ಮಗಂಟು ಸ್ಥಳೀಯ ರಾಸುಗಳಿಗೆ ಹರಡುತ್ತಿವೆ. ಸೊಳ್ಳೆಗಳ ಕಡಿತದಿಂದ ಮಾತ್ರವಲ್ಲದೆ ಗಾಳಿ ಮೂಲಕವು ಚರ್ಮಗಂಟು ರೋಗದ ವೈರಾಣುಗಳು ರಾಸುಗಳಿಂದ ರಾಸುಗಳಿಗೆ ಹರಡುತ್ತಿವೆ ಎಂದು ಪಶುವೈದ್ಯಾಧಿಕಾರಿ ಶಿವಶಂಕರ್ ತಿಳಿಸಿದರು.

andolanait

Recent Posts

ಕೊಲೆ | ಶವವನ್ನು ಪಾಳು ಮನೆ ಮುಂದೆ ಎಸೆದು ಹೋದ ದುಷ್ಕರ್ಮಿ

ಮಳವಳ್ಳಿ : ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿರುವ ದುಷ್ಕರ್ಮಿಗಳು ಶವವನ್ನು ಆತನ ಪಾಳು ಮನೆ ಮುಂದೆ ಎಸೆದು ಹೋಗಿರುವ ದುಷ್ಕೃತ್ಯವೊಂದು ಮಳವಳ್ಳಿ…

6 hours ago

ಟಿ-20 ವಿಶ್ವಕಪ್‌ : ಇಟಲಿ ಮಣಿಸಿ ದಾಖಲೆ ಬರೆದ ಸ್ಕಾಟ್ಲೆಂಡ್‌

ಕೋಲ್ಕತ್ತಾ : ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಸೋಮವಾರ ನಡೆದ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಸ್ಕಾಟ್ಲೆಂಡ್ ತಂಡ ಇಟಲಿ ವಿರುದ್ಧ…

6 hours ago

ಈ ಊರಲ್ಲಿ ಕುಡಿದು ಗಲಾಟೆ ಮಾಡಿದ್ರೆ, ಹೆಣ್ಣು ಮಕ್ಕಳ ವಿಡಿಯೋ ಮಾಡಿದೆ ಬೀಳುತ್ತೆ 30 ಸಾವಿರ ದಂಡ

ನಂಜನಗೂಡು : ಗ್ರಾಮದೇವತೆ ಜಾತ್ರೇಲಿ ಕುಡಿದು ಗಲಾಟೆ ಮಾಡಿದ್ರೆ, ಹೆಣ್ಣು ಮಕ್ಕಳ ವಿಡಿಯೋ ಮಾಡಿದ್ರೆ 30 ಸಾವಿರ ದಂಡ ವಿಧಿಸುವ…

6 hours ago

2027 ಸೆ.3ಕ್ಕೆ ಅಟ್ಲಾಂಟಾದಲ್ಲಿ 9ನೇ ನಾವಿಕ ವಿಶ್ವ ಸಮ್ಮೇಳನ

ಬೆಂಗಳೂರು : ದುಬೈನ ಕರ್ನಾಟಕ ಸಂಘದೊಂದಿಗೆ ನವೆಂಬರ್ 22 ರಂದು ನಾವಿಕ ರಾಜ್ಯೋತ್ಸವ ಮತ್ತು ನಾಟಕೋತ್ಸವವನ್ನು ಆಯೋಜಿಸಲಾಗಿದೆ ಎಂದು ನಾವು…

7 hours ago

ಉಕ್ಕು ಉದ್ಯಮಕ್ಕೆ ಮತ್ತಷ್ಟು ಬಲ ; ₹11,887 ಕೋಟಿ ಹೂಡಿಕೆ

ಹೊಸದಿಲ್ಲಿ : ಭಾರತ ಸರ್ಕಾರವು ಸ್ಪೆಶಾಲಿಟಿ ಸ್ಟೀಲ್ (ವಿಶೇಷ ಉಕ್ಕು) ಉತ್ಪಾದನೆಗೆ ಸಂಬಂಧಿಸಿ ಹೊಸದಾಗಿ ಉತ್ತೇಜನಾ (ಪಿಎಲ್ಐ) ಯೋಜನೆ 1.2…

7 hours ago

ಬಂಡೀಪುರದಲ್ಲಿ ಅಂತರಾಷ್ಟ್ರೀಯ ಬಿಗ್‌ ಕ್ಯಾಟ್‌ ಶೃಂಗಸಭೆ : 23 ದೇಶದ ವಿಜ್ಞಾನಿಗಳು ಭಾಗಿ

ಚಾಮರಾಜನಗರ : ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿಯಲ್ಲಿ ಅಂತರಾಷ್ಟ್ರೀಯ ಬಿಗ್ ಕ್ಯಾಟ್ಸ್ ಅಲಯನ್ಸ್ ಶೃಂಗಸಭೆಯಲ್ಲಿಂದು…

8 hours ago