ಭಾರತೀನಗರ: ಚರ್ಮಗಂಟು ರೋಗ ಕಾಣಿಸಿಕೊಂಡು ನಾಟಿ ಹಸುವೊಂದು ಮೃತಪಟ್ಟಿರುವ ಘಟನೆ ಸಮೀಪದ ಅಣ್ಣೂರು ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಕೃಷ್ಣಪ್ಪ (ಗುಡ್ಡಪ್ಪ) ಎಂಬುವವರಿಗೆ ಸೇರಿದ ನಾಟಿ ಹಸುವಿಗೆ ಕಳೆದ ೧೦ ದಿನಗಳಿಂದ ಚರ್ಮಗಂಟು ರೋಗ ಕಾಣಿಸಿಕೊಂಡಿತು. ಚಿಕಿತ್ಸೆ ಕೊಡಿಸಿದರೂ ಫಲಕಾರಿಯಾಗದೆ ಶನಿವಾರ ಮೃತಪಟ್ಟಿದೆ. ಸ್ಥಳಕ್ಕೆ ಕೆ.ಎಂ.ದೊಡ್ಡಿ ಪಶುವೈದ್ಯಾಧಿಕಾರಿ ಶಿವಶಂಕರ್, ಪಶುವೈದ್ಯ ಪರೀಕ್ಷಕ ಚನ್ನಪ್ಪ ಭೇಟಿ ನೀಡಿ ಪರಿಶೀಲಿಸಿ ಸರ್ಕಾರದಿಂದ ಸಿಗುವ ಪರಿಹಾರವನ್ನು ಒದಗಿಸಿಕೊಡುವ ಭರವಸೆಯನ್ನು ನೀಡಿ ಅಂತ್ಯಸಂಸ್ಕಾರ ನಡೆಸಿದ್ದಾರೆ.
ಸೋಂಕಿತ ರಾಸುಗಳಿಗೆ ನಿರ್ಧಿಷ್ಟ ಚಿಕಿತ್ಸೆ ಇಲ್ಲ. ಆದರೂ ಆಂಟಿ ಬಾಂಟಿಕ್ ಮತ್ತು ನೋವು ನಿವಾರಕ ಲಸಿಕೆ ನೀಡಬಹುದು. ಹೊರ ರಾಜ್ಯಗಳಿಂದ ಚರ್ಮಗಂಟು ರೋಗ ಹರಡುತ್ತಿದೆ. ಉತ್ತರ ಕರ್ನಾಟಕ ಜಿಲ್ಲೆಗಳ ರೋಗ ಪೀಡಿತ ರಾಸುಗಳನ್ನು ಈ ಭಾಗದ ರೈತರು ಖರೀದಿಸಿ ತಂದಾಗ ಚರ್ಮಗಂಟು ಸ್ಥಳೀಯ ರಾಸುಗಳಿಗೆ ಹರಡುತ್ತಿವೆ. ಸೊಳ್ಳೆಗಳ ಕಡಿತದಿಂದ ಮಾತ್ರವಲ್ಲದೆ ಗಾಳಿ ಮೂಲಕವು ಚರ್ಮಗಂಟು ರೋಗದ ವೈರಾಣುಗಳು ರಾಸುಗಳಿಂದ ರಾಸುಗಳಿಗೆ ಹರಡುತ್ತಿವೆ ಎಂದು ಪಶುವೈದ್ಯಾಧಿಕಾರಿ ಶಿವಶಂಕರ್ ತಿಳಿಸಿದರು.
ಚೆನ್ನೈ : ತಮಿಳಿನ ಖ್ಯಾತ ನಿರ್ದೇಶಕ, ಪದ್ಮಶ್ರೀ ಭಾರತಿರಾಜ್ ನಿಧನಕ್ಕೆ ಹೆಸರಾಂತ ನಟರು ಕಂಬನಿ ಮಿಡಿದಿದ್ದಾರೆ. ಅವರ ಅಂತಿಮ ದರ್ಶನಕ್ಕೆ…
ವರುಣ : ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪನವರಿಗೆ ಸಚಿವ ಸ್ಥಾನ ನೀಡಬೇಕು ಎಂದು ವರುಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ದಲಿತ ಸಂಘಟನೆಗಳ…
ಮೈಸೂರು : ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಚಿವರು ಕೇಂದ್ರ ಸರ್ಕಾರದೊಂದಿಗೆ ಸೌಹಾರ್ದದಿಂದ ಸಂಪರ್ಕ ಸಾಧಿಸಿ ರಾಜ್ಯದ ಅಭಿವೃದ್ಧಿ…
ಬೆಂಗಳೂರು: ರಾಜ್ಯಸಭಾ ಸ್ಥಾನಕ್ಕೆ ಟಿಕೆಟ್ ತಪ್ಪಿದೆ ಎಂಬ ಕಾರಣದಿಂದ ನನ್ನ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ನಡುವಿನ ಸಂಬಂಧ…
ಚೆನ್ನೈ: ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ಇಂದು ವಿಧಿವಶರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು. ಕೆಲ…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಂದು ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ದೀರ್ಘಕಾಲ ನಿರಂತರ ಅಧಿಕಾರ ನಡೆಸಿದ ಪ್ರಧಾನಿ ಎಂಬ ಹೊಸ…