ಜಿಲ್ಲೆಗಳು

ಚರ್ಮಗಂಟು ರೋಗದಿಂದ ಹಸು ಸಾವು

ಭಾರತೀನಗರ: ಚರ್ಮಗಂಟು ರೋಗ ಕಾಣಿಸಿಕೊಂಡು ನಾಟಿ ಹಸುವೊಂದು ಮೃತಪಟ್ಟಿರುವ ಘಟನೆ ಸಮೀಪದ ಅಣ್ಣೂರು ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಕೃಷ್ಣಪ್ಪ (ಗುಡ್ಡಪ್ಪ) ಎಂಬುವವರಿಗೆ ಸೇರಿದ ನಾಟಿ ಹಸುವಿಗೆ ಕಳೆದ ೧೦ ದಿನಗಳಿಂದ ಚರ್ಮಗಂಟು ರೋಗ ಕಾಣಿಸಿಕೊಂಡಿತು. ಚಿಕಿತ್ಸೆ ಕೊಡಿಸಿದರೂ ಫಲಕಾರಿಯಾಗದೆ ಶನಿವಾರ ಮೃತಪಟ್ಟಿದೆ. ಸ್ಥಳಕ್ಕೆ ಕೆ.ಎಂ.ದೊಡ್ಡಿ ಪಶುವೈದ್ಯಾಧಿಕಾರಿ ಶಿವಶಂಕರ್, ಪಶುವೈದ್ಯ ಪರೀಕ್ಷಕ ಚನ್ನಪ್ಪ ಭೇಟಿ ನೀಡಿ ಪರಿಶೀಲಿಸಿ ಸರ್ಕಾರದಿಂದ ಸಿಗುವ ಪರಿಹಾರವನ್ನು ಒದಗಿಸಿಕೊಡುವ ಭರವಸೆಯನ್ನು ನೀಡಿ ಅಂತ್ಯಸಂಸ್ಕಾರ ನಡೆಸಿದ್ದಾರೆ.

ಸೋಂಕಿತ ರಾಸುಗಳಿಗೆ ನಿರ್ಧಿಷ್ಟ ಚಿಕಿತ್ಸೆ ಇಲ್ಲ. ಆದರೂ ಆಂಟಿ ಬಾಂಟಿಕ್ ಮತ್ತು ನೋವು ನಿವಾರಕ ಲಸಿಕೆ ನೀಡಬಹುದು. ಹೊರ ರಾಜ್ಯಗಳಿಂದ ಚರ್ಮಗಂಟು ರೋಗ ಹರಡುತ್ತಿದೆ. ಉತ್ತರ ಕರ್ನಾಟಕ ಜಿಲ್ಲೆಗಳ ರೋಗ ಪೀಡಿತ ರಾಸುಗಳನ್ನು ಈ ಭಾಗದ ರೈತರು ಖರೀದಿಸಿ ತಂದಾಗ ಚರ್ಮಗಂಟು ಸ್ಥಳೀಯ ರಾಸುಗಳಿಗೆ ಹರಡುತ್ತಿವೆ. ಸೊಳ್ಳೆಗಳ ಕಡಿತದಿಂದ ಮಾತ್ರವಲ್ಲದೆ ಗಾಳಿ ಮೂಲಕವು ಚರ್ಮಗಂಟು ರೋಗದ ವೈರಾಣುಗಳು ರಾಸುಗಳಿಂದ ರಾಸುಗಳಿಗೆ ಹರಡುತ್ತಿವೆ ಎಂದು ಪಶುವೈದ್ಯಾಧಿಕಾರಿ ಶಿವಶಂಕರ್ ತಿಳಿಸಿದರು.

andolanait

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

11 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

20 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

20 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

20 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

22 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

22 hours ago