ಕೊಡಗು : ಜಿಲ್ಲೆ ಪೊನ್ನಂಪೇಟೆ ತಾಲ್ಲೂಕಿನ ಟಿ.ಶೆಟ್ಟಿಗೇರಿ ಗ್ರಾಮ ಪಂಚಾಯತಿ ಒಳಪಟ್ಟ ಹರಿಹರ ಗ್ರಾಮದ ಮರಡ ಜಗನ್ ಎಂಬವರ ಗಬ್ಬದ ಹಸುವನ್ನು ನಿನ್ನೆ ರಾತ್ರಿ ಹುಲಿ ದಾಳಿ ಮಾಡಿ ಹಸುವನ್ನು ಕೊಂದು ಹಾಕಿದೆ. ಹರಿಹರ ಭಾಗದಲ್ಲಿ ಸತ್ತತವಾಗಿ ಹುಲಿ ದಾಳಿ ಮಾಡುತ್ತಿರುವುದು, ಹಾಗೂ ಈ ಸಮಯದಲ್ಲಿ ಹುಲಿ ಕಾಡು ಬಿಟ್ಟು ನಾಡಿಗೆ ಬಂದಿರುವುದು ರೈತರಲ್ಲಿ ಭಯದ ವಾತಾವರಣ ಉಂಟುಮಾಡಿದೆ. ಅದು ಅಲ್ಲದೆ ಈವಾಗ ಕಾಫಿ ಫಸಲು ಕೊಯ್ಯೂಲು ರೈತರು ಕಾರ್ಮಿಕರು ತೋಟದಲ್ಲಿ ಕೆಲಸದಲ್ಲಿ ನಿರತರಾಗಿದ್ದಾರೆ. ಈ ನಿಟ್ಟಿನಲ್ಲಿ ಗ್ರಾಮಕ್ಕೆ ಹುಲಿ ಬಂದಿರುವುದು ರೈತರಲ್ಲಿ ಭಯದ ವಾತಾವರಣ ಉಂಟುಮಾಡಿದೆ. ಹಾಗೆ ದಕ್ಷಿಣ ಕೊಡಗಿನ ಸುತ್ತಾ ಮುತ್ತ ಒಬ್ಬರೆ ಓಡಾಡಲು ಕೂಡ ಜನತೆ ಭಯಪಡುವ ಸ್ಥಿತಿ ನಿರ್ಮಾಣವಾಗಿದೆ.
ಈ ಹಿಂದೆ ಕೂತೂರು ಕಾಲೋನಿಯ ಕಾರ್ಮಿಕನ ಮೇಲೆ ದಾಳಿಮಾಡಿ ಕೊಂದು ಹಾಕಿತ್ತು. ಇದೀಗ ಮತ್ತೆ ಅದೇ ಭಾಗದಲ್ಲಿ ಹುಲಿ ದಾಳಿ ನಡೆಸುತ್ತಿದ್ದು ಜನತೆ ಆತಂಕದಲ್ಲೆ ಕಾಲ ಕಳೆಯುವಂತಾಗಿದೆ. ಹಿಗಾಗಿ ಅರಣ್ಯ ಇಲಾಖೆಯ ಅಧಿಕಾರಿಗಳು ಹುಲ್ಲಿಹಾವಳಿ ಸಮಸ್ಯೆಗೆ ಪರಿಹಾರ ನೀಡುವಂತೆ ಹಾಗೂ ಹುಲಿದಾಳಿಗೆ ಬಲಿಯಾದ ಜಾನುವಾರುವಿಗೆ ಸೂಕ್ತ ಪರಿಹಾರ ನೀಡುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ. ಇನ್ನೂ ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ಪರಿಶೀಲನೆ ನಡೆಸಿದ್ದಾರೆ.
ಮೈಸೂರು : ಕರ್ನಾಟಕ ರತ್ನ ಸಾಹಸ ಸಿಂಹ ಡಾ.ವಿಷ್ಣುವರ್ಧನ್ ಅವರ 16 ನೇ ವರ್ಷದ ಸ್ಮರಣೆಯನ್ನು ನಗರದ ವಿವಿಧೆಡೆ ವಿಷ್ಣುವರ್ಧನ್…
ಉತ್ತರಾಖಂಡ: ಇಲ್ಲಿನ ಅಲ್ಮೋರಾದ ಭಿಕಿಯಾಸೈನ್ ಪ್ರದೇಶದಲ್ಲಿ ಪ್ರಯಾಣಿಕರಿದ್ದ ಬಸ್ ಕಂದಕಕ್ಕೆ ಉರುಳಿಬಿದ್ದ ಪರಿಣಾಮ ಏಳು ಮಂದಿ ಸಾವನ್ನಪ್ಪಿದ್ದು, 12 ಮಂದಿ…
ನವದೆಹಲಿ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಹಾಗೂ ಉದ್ಯಮಿ ರಾಬರ್ಟ್ ವಾದ್ರಾ ಪುತ್ರ ರೈಹಾನ್ ವಾದ್ರಾ ತಮ್ಮ ಬಹುಕಾಲದ ಗೆಳತಿ…
ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಆಡಳಿತ ನಡೆಸಲು ಬಿಜೆಪಿಗೆ ಒಂದು ಅವಕಾಶ ಕೊಡಿ. ಭಯ, ಭ್ರಷ್ಟಾಚಾರ ಹಾಗೂ ದುರಾಡಳಿತವನ್ನು ಉತ್ತಮ ಆಡಳಿತದೊಂದಿಗೆ…
ಬೆಂಗಳೂರು: ದೇಶದಾದ್ಯಂತ ಕೇಂದ್ರ ಚುನಾವಣಾ ಆಯೋಗ ಕೈಗೆತ್ತಿಕೊಂಡಿರುವ ವಿಶೇಷ ಮತದಾರರ ಪರಿಷ್ಕರಣೆ (ಎಸ್ಐಆರ್)ಯನ್ನು ಕರ್ನಾಟಕದಲ್ಲೂ ನಡೆಸಬೇಕೆಂದು ಕೇಂದ್ರ ಸಚಿವೆ ಶೋಭಾ…
ಹುಣಸೂರು: ಮೈಸೂರು ಜಿಲ್ಲೆ ಹುಣಸೂರು ಪಟ್ಟಣದಲ್ಲಿ ನಡೆದ ಚಿನ್ನಾಭರಣ ದರೋಡೆ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಮಾಹಿತಿ ಪ್ರಕಾರ…