ಕೊಡಗು : ಜಿಲ್ಲೆ ಪೊನ್ನಂಪೇಟೆ ತಾಲ್ಲೂಕಿನ ಟಿ.ಶೆಟ್ಟಿಗೇರಿ ಗ್ರಾಮ ಪಂಚಾಯತಿ ಒಳಪಟ್ಟ ಹರಿಹರ ಗ್ರಾಮದ ಮರಡ ಜಗನ್ ಎಂಬವರ ಗಬ್ಬದ ಹಸುವನ್ನು ನಿನ್ನೆ ರಾತ್ರಿ ಹುಲಿ ದಾಳಿ ಮಾಡಿ ಹಸುವನ್ನು ಕೊಂದು ಹಾಕಿದೆ. ಹರಿಹರ ಭಾಗದಲ್ಲಿ ಸತ್ತತವಾಗಿ ಹುಲಿ ದಾಳಿ ಮಾಡುತ್ತಿರುವುದು, ಹಾಗೂ ಈ ಸಮಯದಲ್ಲಿ ಹುಲಿ ಕಾಡು ಬಿಟ್ಟು ನಾಡಿಗೆ ಬಂದಿರುವುದು ರೈತರಲ್ಲಿ ಭಯದ ವಾತಾವರಣ ಉಂಟುಮಾಡಿದೆ. ಅದು ಅಲ್ಲದೆ ಈವಾಗ ಕಾಫಿ ಫಸಲು ಕೊಯ್ಯೂಲು ರೈತರು ಕಾರ್ಮಿಕರು ತೋಟದಲ್ಲಿ ಕೆಲಸದಲ್ಲಿ ನಿರತರಾಗಿದ್ದಾರೆ. ಈ ನಿಟ್ಟಿನಲ್ಲಿ ಗ್ರಾಮಕ್ಕೆ ಹುಲಿ ಬಂದಿರುವುದು ರೈತರಲ್ಲಿ ಭಯದ ವಾತಾವರಣ ಉಂಟುಮಾಡಿದೆ. ಹಾಗೆ ದಕ್ಷಿಣ ಕೊಡಗಿನ ಸುತ್ತಾ ಮುತ್ತ ಒಬ್ಬರೆ ಓಡಾಡಲು ಕೂಡ ಜನತೆ ಭಯಪಡುವ ಸ್ಥಿತಿ ನಿರ್ಮಾಣವಾಗಿದೆ.
ಈ ಹಿಂದೆ ಕೂತೂರು ಕಾಲೋನಿಯ ಕಾರ್ಮಿಕನ ಮೇಲೆ ದಾಳಿಮಾಡಿ ಕೊಂದು ಹಾಕಿತ್ತು. ಇದೀಗ ಮತ್ತೆ ಅದೇ ಭಾಗದಲ್ಲಿ ಹುಲಿ ದಾಳಿ ನಡೆಸುತ್ತಿದ್ದು ಜನತೆ ಆತಂಕದಲ್ಲೆ ಕಾಲ ಕಳೆಯುವಂತಾಗಿದೆ. ಹಿಗಾಗಿ ಅರಣ್ಯ ಇಲಾಖೆಯ ಅಧಿಕಾರಿಗಳು ಹುಲ್ಲಿಹಾವಳಿ ಸಮಸ್ಯೆಗೆ ಪರಿಹಾರ ನೀಡುವಂತೆ ಹಾಗೂ ಹುಲಿದಾಳಿಗೆ ಬಲಿಯಾದ ಜಾನುವಾರುವಿಗೆ ಸೂಕ್ತ ಪರಿಹಾರ ನೀಡುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ. ಇನ್ನೂ ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…
ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್ಪೋಸ್ಟ್ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…