ಜಿಲ್ಲೆಗಳು

ಸಿಪಿಐ ಪರ ಪ್ರತಿಭಟನೆ ಹಿಂದೆ ಶಾಸಕರ ಕೈವಾಡ ಕಮಲ್‌ ನಾಗರಾಜ್ ದೂರು

ಚಾಮರಾಜನಗರ: ಪೊಲೀಸ್ ಜೀಪಿನಿಂದ ಜಿಗಿದು ಯುವಕ ಸಾವು ಪ್ರಕರಣ ಸಂಬಂಧ ಸಿಪಿಐ ಶಿವಮಾದಯ್ಯ ಪರ ನಡೆದ ಪ್ರತಿಭಟನೆ ಹಿಂದೆ ಸ್ಥಳೀಯ ಶಾಸಕರ ಕೈವಾಡವಿದೆ ಎಂದು ಜಿಪಂ ಮಾಜಿ ಸದಸ್ಯ ಕಮಲ್‌ನಾಗರಾಜ್ ದೂರಿದರು.
ಕುಂತೂರುಮೋಳೆ ಗ್ರಾಮದ ಯುವಕ ನಿಂಗರಾಜು ಎಂಬಾತನನ್ನು ಪೊಲೀಸ್ ಜೀಪಿನಲ್ಲಿ ವಿಚಾರಣೆ ಕರೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಆತ ಜೀಪಿನಿಂದ ಹಾರಿ ಮೃತಪಟ್ಟಿರುವ ಘಟನೆ ಹಿಂದೆ ಕಾಣದ ಕೈಗಳ ಕೈವಾಡವಿದೆ ಎಂದು ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.
ಸ್ಥಳೀಯ ಶಾಸಕರು ನೊಂದ ಕುಟುಂಬಕ್ಕೆ ಸಾಂತ್ವನ ಹೇಳಿಲ್ಲ. ಅಲ್ಲದೆ, ಸಿಪಿಐ ಶಿವಮಾದಯ್ಯ ಪರ ನಡೆದ ಪ್ರತಿಭಟನೆಯ ನೇತೃತ್ವವನ್ನು ಶಾಸಕರ ಸಂಬಂಧಿಸಿ ವಹಿಸಿದ್ದು ಈ ಘಟನೆ ಹಿಂದೆ ಶಾಸಕರ ಕೈವಾಡವಿರುವುದು ಕಂಡುಬರುತ್ತದೆ ಎಂದು ಆರೋಪಿಸಿದರು.
ಉಪ್ಪಾರ ಮುಖಂಡ ಬಾಗಳಿ ರೇವಣ್ಣ ಮಾತನಾಡಿ, ಕ್ಷೇತ್ರದಲ್ಲಿ ದಲಿತರು ಹಾಗೂ ಉಪ್ಪಾರ ಜನಾಂಗ ಸೋದರರಂತೆ ಜೀವನ ನಡೆಸುತ್ತಿದ್ದು ಕೆಲ ಕಿಡಿಗೇಡಿಗಳಿಂದ ಪ್ರಕರಣದಲ್ಲಿ ಜಾತಿ ಬೆರೆಸಲಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಕುಟುಂಬಕ್ಕೆ ಆಧಾರವಾಗಿದ್ದ ಯುವಕ ಮೃತಪಟ್ಟಿದ್ದರಿಂದ ಕುಟುಂಬ ಸಂಕಷ್ಟದಲ್ಲಿ ಸಿಲುಕಿದೆ. ಕೂಡಲೇ ಸರ್ಕಾರದ ವತಿಯಿಂದ ಕುಟುಂಬಕ್ಕೆ 30 ಲಕ್ಷ ರೂ. ಪರಿಹಾರ ಕೊಡಿಸಬೇಕು. ಅಲ್ಲದೇ ಪ್ರಕರಣ ಸಂಬಂಧ ಉನ್ನತ ತನಿಖೆ ನಡೆಸಬೇಕು. ಶಾಸಕರು ಕುಟುಂಬಕ್ಕೆ ಸಾಂತ್ವನ ಹೇಳಲು ಬಾರದಿರುವುದು ಖಂಡನೀಯ ಎಂದರು.
ಮುಖಂಡರಾದ ಮಣಿ, ಶಿವಣ್ಣ, ಸಿದ್ದರಾಜು, ಶಿವಶಂಕರ್, ರವಿಕುಮಾರ್ ಹಾಜರಿದ್ದರು.

andolanait

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಫೆ.14 ಶನಿವಾರ

12 mins ago

ಪೂರ್ಣ ಸಿದ್ಧವಾಗದ ಎಕ್ಸ್‌ಪ್ರೇಸ್‌ ವೇ : ಟೋಲ್‌ ಕಡಿತ

ಹೊಸದಿಲ್ಲಿ : ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ಸಾರ್ವಜನಿಕರಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಮಹತ್ವದ ಸುದ್ದಿಯೊಂದನ್ನು ನೀಡಿದೆ.…

10 hours ago

ಸೇವಾ ತೀರ್ಥ ಸಂಕೀರ್ಣ ಉದ್ಘಾಟಿಸಿದ ಪ್ರಧಾನಿ ಮೋದಿ

ಹೊಸದಿಲ್ಲಿ : ಪ್ರಧಾನ ಮಂತ್ರಿ ಕಾರ್ಯಾಲಯ (ಪಿಎಂಒ), ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯ ಮತ್ತು ಸಂಪುಟ ಸಚಿವಾಲಯಗಳನ್ನು ಒಳಗೊಂಡಿರುವ ‘ಸೇವಾ…

11 hours ago

T20 World Cup | ಕೆನಡಾ ವಿರುದ್ಧ ಯುಎಇಗೆ ರೋಚಕ ಜಯ

ಹೊಸದಿಲ್ಲಿ : ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ‘ಡಿ’ಗುಂಪಿನ ಪಂದ್ಯದಲ್ಲಿ ಯುಎಇ ಕ್ರಿಕೆಟ್ ತಂಡವು ಕೆನಡಾ ತಂಡವನ್ನು ಐದು…

11 hours ago

ದಳಪತಿ ವಿಜಯ್‌ ರ‍್ಯಾಲಿಯಲ್ಲಿ ನಿಲ್ಲದ ದುರಂತ : ಮತ್ತೊಬ್ಬನ ಸಾವು

ಸೇಲಂ : ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ರ‍್ಯಾಲಿ ವೇಳೆ ಕುಸಿದು ಬಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗದ ಮಧ್ಯೆ…

12 hours ago

ರೈಲ್‌ಒನ್‌ ಆಪ್‌ : ಒಂದೇ ಕಡೆ ಸಿಗಲಿದೆ ರೈಲು ಸೌಲಭ್ಯಗಳು

ಬೆಂಗಳೂರು : ಭಾರತೀಯ ರೈಲ್ವೆಯು ತನ್ನ ಅಧಿಕೃತ ಆಪ್ ‘ರೈಲ್‌ಒನ್’ ಅನ್ನು ಇತ್ತೀಚೆಗೆ ಬಿಡುಗಡೆ ಮಾಡಿದೆ. ಇದರಲ್ಲಿ ರೈಲ್ವೆ ಸೇವೆಗಳೆಲ್ಲವೂ…

12 hours ago