ಜಿಲ್ಲೆಗಳು

ಸಿಪಿಐ ಪರ ಪ್ರತಿಭಟನೆ ಹಿಂದೆ ಶಾಸಕರ ಕೈವಾಡ ಕಮಲ್‌ ನಾಗರಾಜ್ ದೂರು

ಚಾಮರಾಜನಗರ: ಪೊಲೀಸ್ ಜೀಪಿನಿಂದ ಜಿಗಿದು ಯುವಕ ಸಾವು ಪ್ರಕರಣ ಸಂಬಂಧ ಸಿಪಿಐ ಶಿವಮಾದಯ್ಯ ಪರ ನಡೆದ ಪ್ರತಿಭಟನೆ ಹಿಂದೆ ಸ್ಥಳೀಯ ಶಾಸಕರ ಕೈವಾಡವಿದೆ ಎಂದು ಜಿಪಂ ಮಾಜಿ ಸದಸ್ಯ ಕಮಲ್‌ನಾಗರಾಜ್ ದೂರಿದರು.
ಕುಂತೂರುಮೋಳೆ ಗ್ರಾಮದ ಯುವಕ ನಿಂಗರಾಜು ಎಂಬಾತನನ್ನು ಪೊಲೀಸ್ ಜೀಪಿನಲ್ಲಿ ವಿಚಾರಣೆ ಕರೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಆತ ಜೀಪಿನಿಂದ ಹಾರಿ ಮೃತಪಟ್ಟಿರುವ ಘಟನೆ ಹಿಂದೆ ಕಾಣದ ಕೈಗಳ ಕೈವಾಡವಿದೆ ಎಂದು ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.
ಸ್ಥಳೀಯ ಶಾಸಕರು ನೊಂದ ಕುಟುಂಬಕ್ಕೆ ಸಾಂತ್ವನ ಹೇಳಿಲ್ಲ. ಅಲ್ಲದೆ, ಸಿಪಿಐ ಶಿವಮಾದಯ್ಯ ಪರ ನಡೆದ ಪ್ರತಿಭಟನೆಯ ನೇತೃತ್ವವನ್ನು ಶಾಸಕರ ಸಂಬಂಧಿಸಿ ವಹಿಸಿದ್ದು ಈ ಘಟನೆ ಹಿಂದೆ ಶಾಸಕರ ಕೈವಾಡವಿರುವುದು ಕಂಡುಬರುತ್ತದೆ ಎಂದು ಆರೋಪಿಸಿದರು.
ಉಪ್ಪಾರ ಮುಖಂಡ ಬಾಗಳಿ ರೇವಣ್ಣ ಮಾತನಾಡಿ, ಕ್ಷೇತ್ರದಲ್ಲಿ ದಲಿತರು ಹಾಗೂ ಉಪ್ಪಾರ ಜನಾಂಗ ಸೋದರರಂತೆ ಜೀವನ ನಡೆಸುತ್ತಿದ್ದು ಕೆಲ ಕಿಡಿಗೇಡಿಗಳಿಂದ ಪ್ರಕರಣದಲ್ಲಿ ಜಾತಿ ಬೆರೆಸಲಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಕುಟುಂಬಕ್ಕೆ ಆಧಾರವಾಗಿದ್ದ ಯುವಕ ಮೃತಪಟ್ಟಿದ್ದರಿಂದ ಕುಟುಂಬ ಸಂಕಷ್ಟದಲ್ಲಿ ಸಿಲುಕಿದೆ. ಕೂಡಲೇ ಸರ್ಕಾರದ ವತಿಯಿಂದ ಕುಟುಂಬಕ್ಕೆ 30 ಲಕ್ಷ ರೂ. ಪರಿಹಾರ ಕೊಡಿಸಬೇಕು. ಅಲ್ಲದೇ ಪ್ರಕರಣ ಸಂಬಂಧ ಉನ್ನತ ತನಿಖೆ ನಡೆಸಬೇಕು. ಶಾಸಕರು ಕುಟುಂಬಕ್ಕೆ ಸಾಂತ್ವನ ಹೇಳಲು ಬಾರದಿರುವುದು ಖಂಡನೀಯ ಎಂದರು.
ಮುಖಂಡರಾದ ಮಣಿ, ಶಿವಣ್ಣ, ಸಿದ್ದರಾಜು, ಶಿವಶಂಕರ್, ರವಿಕುಮಾರ್ ಹಾಜರಿದ್ದರು.

andolanait

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

6 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

6 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

6 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

6 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

6 hours ago