ಮಡಿಕೇರಿ: ಅಕ್ರಮವಾಗಿ ಬೀಟೆ ಮರವನ್ನು ಕಡಿದು ನಾಟಾಗಳಾಗಿ ಪರಿವರ್ತಿಸಿ ತೊಗಟೆ ತೆಗೆಯುತ್ತಿದ್ದ ಪ್ರಕರಣವನ್ನು ಭೇದಿಸಿರುವ ಅರಣ್ಯ ಇಲಾಖೆ ಸಿಬ್ಬಂದಿಗಳು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಗೋಣಿಕೊಪ್ಪಲು ಕಾಳಪ್ಪ ಕಾಲೋನಿ ನಿವಾಸಿ ಸಾಜನ್, ತಿತಿಮತಿ ನೆಹರು ಕಾಲೋನಿ ನಿವಾಸಿ ಚಾತ, ಮಡಿಕೇರಿ ತಾಲ್ಲೂಕು ಕಡಗದಾಳು ನಿವಾಸಿ ಬಿ.ಎಸ್. ಕೃಷ್ಣಪ್ಪ ಬಂಧಿತ ಆರೋಪಿಗಳು.
ಪೊನ್ನಂಪೇಟೆ ವಲಯ ವ್ಯಾಪ್ತಿಯ ಬಾಳೆಲೆ ಹೋಬಳಿ ಬೆಸಗೂರು ಗ್ರಾಮದ ಪಾರುವಂಗಡ ಡಾಲುರವರ ತೋಟದಲ್ಲಿ ಅಕ್ರಮವಾಗಿ ಬೀಟಿಮರವನ್ನು ಕಡಿದು ನಾಟಾಗಳಾಗಿ ಪರಿವರ್ತಿಸಿ ತೊಗಟೆಯನ್ನು ತೆಗೆಯುತ್ತಿರುವ ಸಂದರ್ಭದಲ್ಲಿ ಪೊನ್ನಂಪೇಟೆ, ವಲಯ ಅರಣ್ಯ ಇಲಾಖೆ ಸಿಬ್ಬಂದಿಗಳು ದಾಳಿಮಾಡಿ ಸ್ಥಳದಲ್ಲಿದ್ದ ಆರೋಪಿಗಳನ್ನು ಬಂಧಿಸಿದ್ದಾರೆ. ಸ್ಥಳದಲ್ಲಿದ್ದ ೧೦ ಬೀಟೆ ನಾಟ, ಕೃತ್ಯಕ್ಕೆ ಬಳಸಲಾದ ೦೨ ಕೊಡಲಿಗಳು ಸೇರಿ ಒಟ್ಟು ಅಂದಾಜು ೫.೦೦ ಲಕ್ಷ ರೂ ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಚಕ್ರಪಾಣಿ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕೆ.ಎ. ನೆಹರು, ವಲಯ ಅರಣ್ಯಾಧಿಕಾರಿ ಬಿ.ಎಂ. ಶಂಕರ್ ಹಾಗೂ ಉಪವಲಯ ಅರಣ್ಯಾಧಿಕಾರಿಗಳಾದ ದಿವಾಕರ್, ಗಣೇಶ್ ನಾಗರಾಜ್ ಶೇಟ್, ರಕ್ಷಿತ್, ಅರಣ್ಯ ರಕ್ಷಕರಾದ ಪೊನ್ನಪ್ಪ, ಅಂಟೋನಿ, ಪ್ರಕಾಶ್, ಚೇತನ್ ಇತರರು ಪಾಲ್ಗೊಂಡಿದ್ದರು.
- ಮುಖಪುಟ
- ಮೈಸೂರು
- ಜಿಲ್ಲೆಗಳು
- ರಾಜ್ಯ
- ದೇಶ- ವಿದೇಶ
- ರಾಜಕೀಯ
- ಅಪರಾಧ
- ಮಹಿಳೆ
- ಕೃಷಿ
- ವಿಜ್ಞಾನ ತಂತ್ರಜ್ಞಾನ
- ಕ್ರೀಡೆ
- ವಾಣಿಜ್ಯ
- ಚಿತ್ರಸಂತೆ
- ವಿಶೇಷ
- ಆಂದೋಲನ ಪುರವಣಿ
- ಎಡಿಟೋರಿಯಲ್
- ಆಂದೋಲನ 50
- ಜಾಹೀರಾತು
- Cricket
Subscribe to Updates
Get the latest creative news from FooBar about art, design and business.
Previous Articleಬಿಜೆಪಿ ಜನ ಸಂಕಲ್ಪ ಯಾತ್ರೆ ಬೆನ್ನಲ್ಲೇ ಜೆಡಿಎಸ್ ನಿಂದ ಪಂಚರತ್ನ ರಥಯಾತ್ರೆ