ಜಿಲ್ಲೆಗಳು

ಬೀಟೆ ಮರ ಕಡಿದು ನಾಟಾಗಳಾಗಿ ಪರಿವರ್ತನೆ: ಮೂವರ ಬಂಧನ

ಮಡಿಕೇರಿ: ಅಕ್ರಮವಾಗಿ ಬೀಟೆ ಮರವನ್ನು ಕಡಿದು ನಾಟಾಗಳಾಗಿ ಪರಿವರ್ತಿಸಿ ತೊಗಟೆ ತೆಗೆಯುತ್ತಿದ್ದ ಪ್ರಕರಣವನ್ನು ಭೇದಿಸಿರುವ ಅರಣ್ಯ ಇಲಾಖೆ ಸಿಬ್ಬಂದಿಗಳು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಗೋಣಿಕೊಪ್ಪಲು ಕಾಳಪ್ಪ ಕಾಲೋನಿ ನಿವಾಸಿ ಸಾಜನ್, ತಿತಿಮತಿ ನೆಹರು ಕಾಲೋನಿ ನಿವಾಸಿ ಚಾತ, ಮಡಿಕೇರಿ ತಾಲ್ಲೂಕು ಕಡಗದಾಳು ನಿವಾಸಿ ಬಿ.ಎಸ್. ಕೃಷ್ಣಪ್ಪ ಬಂಧಿತ ಆರೋಪಿಗಳು.
ಪೊನ್ನಂಪೇಟೆ ವಲಯ ವ್ಯಾಪ್ತಿಯ ಬಾಳೆಲೆ ಹೋಬಳಿ ಬೆಸಗೂರು ಗ್ರಾಮದ ಪಾರುವಂಗಡ ಡಾಲುರವರ ತೋಟದಲ್ಲಿ ಅಕ್ರಮವಾಗಿ ಬೀಟಿಮರವನ್ನು ಕಡಿದು ನಾಟಾಗಳಾಗಿ ಪರಿವರ್ತಿಸಿ ತೊಗಟೆಯನ್ನು ತೆಗೆಯುತ್ತಿರುವ ಸಂದರ್ಭದಲ್ಲಿ ಪೊನ್ನಂಪೇಟೆ, ವಲಯ ಅರಣ್ಯ ಇಲಾಖೆ ಸಿಬ್ಬಂದಿಗಳು ದಾಳಿಮಾಡಿ ಸ್ಥಳದಲ್ಲಿದ್ದ ಆರೋಪಿಗಳನ್ನು ಬಂಧಿಸಿದ್ದಾರೆ. ಸ್ಥಳದಲ್ಲಿದ್ದ ೧೦ ಬೀಟೆ ನಾಟ, ಕೃತ್ಯಕ್ಕೆ ಬಳಸಲಾದ ೦೨ ಕೊಡಲಿಗಳು ಸೇರಿ ಒಟ್ಟು ಅಂದಾಜು ೫.೦೦ ಲಕ್ಷ ರೂ ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಚಕ್ರಪಾಣಿ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕೆ.ಎ. ನೆಹರು, ವಲಯ ಅರಣ್ಯಾಧಿಕಾರಿ ಬಿ.ಎಂ. ಶಂಕರ್ ಹಾಗೂ ಉಪವಲಯ ಅರಣ್ಯಾಧಿಕಾರಿಗಳಾದ ದಿವಾಕರ್, ಗಣೇಶ್ ನಾಗರಾಜ್ ಶೇಟ್, ರಕ್ಷಿತ್, ಅರಣ್ಯ ರಕ್ಷಕರಾದ ಪೊನ್ನಪ್ಪ, ಅಂಟೋನಿ, ಪ್ರಕಾಶ್, ಚೇತನ್ ಇತರರು ಪಾಲ್ಗೊಂಡಿದ್ದರು.

andolanait

Recent Posts

ಮುಂದಿನ ಒಂದು ವಾರಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಗಾಳಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ,…

22 mins ago

ಸಾಲಬಾಧೆ; ರೈತ ಆತ್ಮಹತ್ಯೆ

ರಾವಂದೂರು: ರೈತರೊಬ್ಬರು ತಾವು ಬೆಳೆದ ತಂಬಾಕಿಗೆ ಸೂಕ್ತ ಬೆಲೆ ಸಿಗದೆ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.…

2 hours ago

ಹರಿಹರದಲ್ಲಿ ಶಂಕಿತ ಉಗ್ರನ ಬಂಧನ: ಪೊಲೀಸರಿಂದ ಸ್ಫೋಟಕ ಮಾಹಿತಿ ಬಹಿರಂಗ

ಬೆಂಗಳೂರು: ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ಬಂಧನಕ್ಕೊಳಗಾಗಿರುವ ಶಂಕಿತ ಉಗ್ರ ಸುಹೈಲ್ ಉತ್ತರಪ್ರದೇಶದ ಅಯೋಧ್ಯೆಯಲ್ಲಿರುವ ರಾಮ ಮಂದಿರವನ್ನು ಸ್ಫೋಟಿಸಲು ಸಂಚು ನಡೆಸಿದ್ದ…

2 hours ago

ಮುಂಗಾರು ಮಳೆ ಹಿನ್ನಡೆ ; ರಾಜ್ಯದ ಹಲವೆಡೆ ಕೃಷಿ ಕುಂಠಿತ

ಬೆಂಗಳೂರು : ಮುಂಗಾರು ಮಳೆ ಹಿನ್ನಡೆಯಿಂದ ರಾಜ್ಯದ ಹಲವು ಕಡೆ ಕೃಷಿ ಚಟುವಟಿಕೆಗಳು ಕುಂಟುತ್ತಾ ಸಾಗುತ್ತಿದ್ದು, ದಾವಣಗೆರೆ, ಕಲಬುರಗಿ, ಬೆಳಗಾವಿ, ಹಾವೇರಿ,…

3 hours ago

ಮುಂಬೈನಲ್ಲಿ ಭಾರೀ ಮಳೆ: ಜನಜೀವನ ಅಸ್ತವ್ಯಸ್ತ

ಮುಂಬೈ: ಮುಂಬೈನಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಭಾರೀ ಮಳೆಯಿಂದ ರಸ್ತೆಗಳಲ್ಲಿ ನೀರು ನಿಂತಿದ್ದು, ವಾಹನ ಸಂಚಾರಕ್ಕೆ ತೊಂದರೆಯಾಗಿದೆ.…

3 hours ago

ಓದುಗರ ಪತ್ರ | ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂದೆ ಕಸವೋ ಕಸ!

ಕೊಳ್ಳೇಗಾಲ ತಾಲ್ಲೂಕಿನ ದೊಡ್ಡಿಂದುವಾಡಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸುತ್ತಮುತ್ತಲಿನ ಅನೇಕ ಗ್ರಾಮಗಳಿಂದ ಅನಾರೋಗ್ಯಕ್ಕೊಳಗಾದವರು ಚಿಕಿತ್ಸೆ ಪಡೆಯಲು ಬರುತ್ತಾರೆ. ಆದರೆ…

6 hours ago