ಮಡಿಕೇರಿ: ಅಕ್ರಮವಾಗಿ ಬೀಟೆ ಮರವನ್ನು ಕಡಿದು ನಾಟಾಗಳಾಗಿ ಪರಿವರ್ತಿಸಿ ತೊಗಟೆ ತೆಗೆಯುತ್ತಿದ್ದ ಪ್ರಕರಣವನ್ನು ಭೇದಿಸಿರುವ ಅರಣ್ಯ ಇಲಾಖೆ ಸಿಬ್ಬಂದಿಗಳು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಗೋಣಿಕೊಪ್ಪಲು ಕಾಳಪ್ಪ ಕಾಲೋನಿ ನಿವಾಸಿ ಸಾಜನ್, ತಿತಿಮತಿ ನೆಹರು ಕಾಲೋನಿ ನಿವಾಸಿ ಚಾತ, ಮಡಿಕೇರಿ ತಾಲ್ಲೂಕು ಕಡಗದಾಳು ನಿವಾಸಿ ಬಿ.ಎಸ್. ಕೃಷ್ಣಪ್ಪ ಬಂಧಿತ ಆರೋಪಿಗಳು.
ಪೊನ್ನಂಪೇಟೆ ವಲಯ ವ್ಯಾಪ್ತಿಯ ಬಾಳೆಲೆ ಹೋಬಳಿ ಬೆಸಗೂರು ಗ್ರಾಮದ ಪಾರುವಂಗಡ ಡಾಲುರವರ ತೋಟದಲ್ಲಿ ಅಕ್ರಮವಾಗಿ ಬೀಟಿಮರವನ್ನು ಕಡಿದು ನಾಟಾಗಳಾಗಿ ಪರಿವರ್ತಿಸಿ ತೊಗಟೆಯನ್ನು ತೆಗೆಯುತ್ತಿರುವ ಸಂದರ್ಭದಲ್ಲಿ ಪೊನ್ನಂಪೇಟೆ, ವಲಯ ಅರಣ್ಯ ಇಲಾಖೆ ಸಿಬ್ಬಂದಿಗಳು ದಾಳಿಮಾಡಿ ಸ್ಥಳದಲ್ಲಿದ್ದ ಆರೋಪಿಗಳನ್ನು ಬಂಧಿಸಿದ್ದಾರೆ. ಸ್ಥಳದಲ್ಲಿದ್ದ ೧೦ ಬೀಟೆ ನಾಟ, ಕೃತ್ಯಕ್ಕೆ ಬಳಸಲಾದ ೦೨ ಕೊಡಲಿಗಳು ಸೇರಿ ಒಟ್ಟು ಅಂದಾಜು ೫.೦೦ ಲಕ್ಷ ರೂ ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಚಕ್ರಪಾಣಿ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕೆ.ಎ. ನೆಹರು, ವಲಯ ಅರಣ್ಯಾಧಿಕಾರಿ ಬಿ.ಎಂ. ಶಂಕರ್ ಹಾಗೂ ಉಪವಲಯ ಅರಣ್ಯಾಧಿಕಾರಿಗಳಾದ ದಿವಾಕರ್, ಗಣೇಶ್ ನಾಗರಾಜ್ ಶೇಟ್, ರಕ್ಷಿತ್, ಅರಣ್ಯ ರಕ್ಷಕರಾದ ಪೊನ್ನಪ್ಪ, ಅಂಟೋನಿ, ಪ್ರಕಾಶ್, ಚೇತನ್ ಇತರರು ಪಾಲ್ಗೊಂಡಿದ್ದರು.
ಸಾರ್ಥಕ ಬದುಕಿನ ಸಾಧಕ! ಗಹನ ಆರ್ಥಿಕ ಚಿಂತನೆಗಳನು ಎಳೆಎಳೆಯಾಗಿ ಬಿಡಿಸಿ ನೀಡಿದ ನಾಡ ಅಪ್ಪಟ ಆರ್ಥಿಕ ಚಿಂತಕ! ಶಿಷ್ಯರ ಮನದ…
ತೆಲಂಗಾಣದಲ್ಲಿ ೩೦,೦೦೦ ಕೆ.ಜಿ. ನಕಲಿ ಮಸಾಲೆ ಜಪ್ತಿಯಾಗಿರುವುದು ಕೇವಲ ಎಚ್ಚರಿಕೆಯಲ್ಲ ನಮಗಿದು ನೇರ ಬೆದರಿಕೆ! ಮಸಾಲೆ, ಹಾಲು, ಎಣ್ಣೆ ಹಾಗೂ…
ಮೈಸೂರು ಮಹಾನಗರ ಪಾಲಿಕೆಯು ಹೊರಾಂಗಣ ಸಂಗೀತ ವಾದ್ಯಗಳ ಜೋಡಣೆ ಎಂಬ ಹೆಸರಿನಲ್ಲಿ ಉದ್ಯಾನವನಗಳಲ್ಲಿ ಸಂಗೀತ ವಾದ್ಯಗಳನ್ನು ಜೋಡಿಸುವ ವಿನೂತನ ಪ್ರಯೋಗವನ್ನು…
ಶಿವಾಜಿ ಗಣೇಶನ್ ಅವರ ವಾರದ ಅಂಕಣ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿಸಿ ದೇಶದಲ್ಲಿ ದಿಢೀರನೆ ಹುಟ್ಟಿಕೊಂಡ ಕಾಕ್ರೋಚ್ ಜನತಾ…
ಬಿ.ಎಸ್.ವಿನಯ್ ಇಲ್ಲಿಯವರೆಗೆ ನಮ್ಮಂತಹ ಅಂಕಲ್ -ಆಂಟಿಗಳು ಜೆನ್ ಝೀಗಳ ಬಗ್ಗೆ ಒಳ್ಳೆಯ ಮಾತಾಡಿದ್ದಕ್ಕಿಂತ ಮೂಗು ಮುರಿದದ್ದೇ ಹೆಚ್ಚು. ಈ ಹುಡುಗರಿಗೆ…
ಸ್ವಾಮಿ ಪೊನ್ನಾಚಿ ನಾನು ಸಾಹಿತ್ಯವನ್ನು ಗಂಭೀರವಾಗಿ ಓದಿಕೊಳ್ಳುವ ಕಾಲಕ್ಕೆ ಹೆಚ್ಚು ಕಡಿಮೆ ಚಳವಳಿಗಳ ಕಾವು ನಿಂತೇ ಹೋಗಿತ್ತು. ಜೋರು ಗಾಳಿ…