ಜಿಲ್ಲೆಗಳು

ಸಾ.ರಾ.ಮಹೇಶ್ ಕುರಿತು ಟೀಕೆ ಖಂಡನೀಯ

ಕೆ.ಆರ್.ನಗರ: ಮಿರ್ಲೆ ಗ್ರಾಮ ಸುಮಾರು 25 ವರ್ಷಗಳಿಂದ ಶಾಂತಿ ನೆಮ್ಮದಿಯಿಂದ ವಿಶ್ವಾಸದ ರಾಜಕಾರಣ ಮಾಡುತ್ತ ಬಂದಿದ್ದು ಗ್ರಾಮದಲ್ಲಿ ವಾಸವಿಲ್ಲದೆ ವರ್ಷಕ್ಕೆ ಒಂದು-ಎರಡು ಬಾರಿ ಬಂದು ಹೋಗುವ ಎಂ.ಹೆಚ್.ನಂದೀಶ್ ಅವರು ಶಾಸಕ ಸಾ.ರಾ.ಮಹೇಶ್ ಅವರನ್ನು ಟೀಕಿಸುತ್ತಿರುವುದು ಖಂಡನೀಯ ಎಂದು ಮಿರ್ಲೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ನೇತ್ರಾವತಿ ತಿಳಿಸಿದರು.
ಪಟ್ಟಣದ ಪತ್ರಿಕಾ ಭವನದಲ್ಲಿ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂತಹ ಹೇಳಿಕೆಯಿಂದ ಗ್ರಾಮದಲ್ಲಿ ದ್ವೇಷ ಉಂಟಾಗಿ ಅಶಾಂತಿ ಎದುರಾಗುವ ಸಾಧ್ಯತೆ ಇದೆ. ಇಂತಹ ಕೀಳು ಮಟ್ಟದ ಹೇಳಿಕೆ ಸಮಾಜಕ್ಕೆ ಮಾರಕವಾಗಿದೆ ಎಂದರು.
ಇದೇ ಸಂದರ್ಭದಲ್ಲಿ ಮಿರ್ಲೆ ಗ್ರಾಮಕ್ಕೆ ಏನೇನು ಅಭಿವೃದ್ಧಿ ಕಾರ್ಯ ನಡೆದಿರುವ ಕಿರುಹೊತ್ತಿಗೆಯನ್ನು ಪ್ರಕಟಿಸಿದರು. ಗ್ರಾ.ಪಂ.ಉಪಾಧ್ಯಕ್ಷೆ ಮಂಜುಳಾ, ಮಾಜಿ ಉಪಾಧ್ಯಕ್ಷ ರಾಧಾಕೃಷ್ಣ, ವಿಎಸ್‌ಎಸ್‌ಎನ್ ಬ್ಯಾಂಕ್‌ನ ಮಾಜಿ ಅಧ್ಯಕ್ಷ ಮಂಜುನಾಥ್, ಹೊಸಟ್ಟಿ ರಘು, ತುಕರಾಮ್, ಪ್ರಕಾಶ್, ದಿವಕಾರ್, ನಾಗರಾಜ್, ನಾಗೇಶ್, ಮೋಹನ ಹಾಜರಿದ್ದರು.

andolanait

Recent Posts

24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆ

ನವದೆಹಲಿ: ಕರ್ನಾಟಕ ನಾಲ್ಕು ಸೇರಿದಂತೆ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆಯಾಗಿದೆ. ಮಲ್ಲಿಕಾರ್ಜುನ ಖರ್ಗೆ, ಎಚ್.ಡಿ.ದೇವೇಗೌಡ, ಈರಣ್ಣ ಕಡಾಡಿ,…

16 mins ago

ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಗುಡುಗು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ…

60 mins ago

ಬಲಮುರಿ ಕಾವೇರಿ ನದಿಯಲ್ಲಿ ಇಬ್ಬರು ಯುವಕರು ಸಾವು

ಮಂಡ್ಯ: ಕಾವೇರಿ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಬಲಮುರಿಯಲ್ಲಿ ನಡೆದಿದೆ. ಚಾಮರಾಜನಗರ…

1 hour ago

ಓದುಗರ ಪತ್ರ: ಮಾನಸ ಗಂಗೋತ್ರಿ ಕ್ಯಾಂಟೀನ್‌ಗಳಲ್ಲಿ ದರ ಏರಿಕೆಗೆ ಕಡಿವಾಣ ಹಾಕಿ

ಮೈಸೂರು ವಿಶ್ವವಿದ್ಯಾನಿಲಯದ ಮಾನಸ ಗಂಗೋತ್ರಿಯಲ್ಲಿರುವ ಖಾಸಗಿ ಹೋಟೆಲ್‌ಗಳಲ್ಲಿ ಕಾಫಿ,ತಿಂಡಿ, ಹಣ್ಣಿನ ಪಾನೀಯ ದರ ದುಬಾರಿಯಾಗಿದ್ದು, ಉನ್ನತ ಶಿಕ್ಷಣ ವ್ಯಾಸಂಗಕ್ಕಾಗಿ ಬರುವ…

3 hours ago

ಓದುಗರ ಪತ್ರ: ಶಾಲಾ ಶಿಕ್ಷಕರ ಮಾದರಿ ನಡೆ

ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಶಾಲೆಗಳಿಗೆ ದಾಖಲಾಗುವ ಮಕ್ಕಳ ಸಂಖ್ಯೆ ದಿನೇ ದಿನೇ ಕಡಿಮೆಯಾಗುತ್ತಿದ್ದು, ಶಾಲೆಗಳನ್ನು ಮುಚ್ಚುವ ಪರಿಸ್ಥಿತಿ ಉಂಟಾಗಿದೆ. ಗದಗ…

3 hours ago

ಓದುಗರ ಪತ್ರ: ರೇಷ್ಮೆ ನೂಲು ಘಟಕಕ್ಕೆ ಹೊಸ ಯಂತ್ರ ಅಳವಡಿಕೆ ಶ್ಲಾಘನೀಯ

ತಿ. ನರಸೀಪುರ ಪಟ್ಟಣದ ರೇಷ್ಮೆ ನೂಲು ತಯಾರಿಕಾ ಘಟಕಕ್ಕೆ ಹೊಸದಾಗಿ ಎರಡು ಯಂತ್ರಗಳನ್ನು ಅಳವಡಿಸಲು ಕ್ರಮ ಕೈಗೊಂಡಿರುವುದು ಘಟಕದ ಅಭಿವೃದ್ಧಿಯ…

3 hours ago