ಮೈಸೂರು: ನಗರದ ಎಲೆ ತೋಟದ ರಾಜಕಾಲುವೆಯಲ್ಲಿ ಶನಿವಾರ ಮೊಸಳೆಯೊಂದು ಪತ್ತೆಯಾಗಿದ್ದು, ಜನರಲ್ಲಿ ಆತಂಕ ಮೂಡಿಸಿದೆ.
ಜೆಎಲ್ಬಿ ರಸ್ತೆಯ ಚಾಮುಂಡಿಪುರಂ ಸಮೀಪವಿರುವ ರಾಜಕಾಲುವೆಯಲ್ಲಿಮಧ್ಯಾಹ್ನದ ಹೊತ್ತಿಗೆ ಮೊಸಳೆ ಪತ್ತೆಯಾಯಿತು. ಸ್ಥಳೀಯರು ಈ ಬಗ್ಗೆ ಪೊಲೀಸರಿಗೆ ಮತ್ತು ಅರಣ್ಯ ಇಲಾಖೆಗೆ ಮಾಹಿತಿ ನೀಡಿದರು. ಮೊಸಳೆಯನ್ನು ನೋಡಲು ನೂರಾರು ಜನರು ಆಗಮಿಸಿದರು. ಆದರೆ ಪೊಲೀಸರು ಜನರನ್ನು ನಿಯಂತ್ರಿಸಿ ಮೊಸಳೆಯ ಹತ್ತಿರಕ್ಕೆ ಸಾಗದಂತೆ ತಡೆದರು.
ಶುಕ್ರವಾರ ಸುರಿದ ಭಾರೀ ಮಳೆಯಿಂದಾಗಿ ರಾಜಕಾಲುವೆಯಲ್ಲಿ ಹೆಚ್ಚಿನ ನೀರು ಹರಿಯುತ್ತಿದ್ದು, ಮೊಸಳೆ ಈ ನೀರಿನಲ್ಲಿ ಸಾಗಿ ಬಂದಿರಬೇಕೆಂದು ಶಂಕಿಸಲಾಗಿದೆ. ಮೊಸಳೆ ಸಾಧಾರಣ ಗಾತ್ರವಿದ್ದು ಐದರಿಂದ ಆರು ಅಡಿ ಉದ್ದವಿತ್ತು. ಇಲ್ಲಿಗೆ ಸಮೀಪದ ಸೀವೇಜ್ ಫಾರಂ ತ್ಯಾಜ್ಯ ವಿಲೇವಾರಿ ಘಟಕದ ಸಮೀಪ ಈ ಹಿಂದೆಯೂ ಮೊಸಳೆ ಪತ್ತೆಯಾಗಿತ್ತು. ಕಳೆದ ವರ್ಷದ ನವೆಂಬರ್ ತಿಂಗಳಲ್ಲಿ ಫಾರಂ ಸಮೀಪ ಭಾರಿ ಗಾತ್ರದ ಮೊಸಳೆಯೊಂದು ಪತ್ತೆಯಾಗಿತ್ತು. ಅರಣ್ಯ ಇಲಾಖೆ ಸಿಬ್ಬಂದಿ ಬರುವಷ್ಟರಲ್ಲಿ ಅದು ಪೊದೆಗಳ ಮಧ್ಯೆ ಮರೆಯಾಗಿದ್ದರಿಂದ ಸೆರೆ ಹಿಡಿಯಲು ಸಾಧ್ಯವಾಗಿರಲಿಲ್ಲ.
ಎರಡು ವರ್ಷಗಳ ಹಿಂದೆಯೂ ಇಲ್ಲಿ ಮೊಸಳೆ ಪತ್ತೆಯಾಗಿತ್ತು. ಇದೀಗ ಪತ್ತೆಯಾಗಿರುವ ಮೊಸಳೆಯು ಇದೇ ಮೊಸಳೆ ಗುಂಪಿಗೆ ಸೇರಿದ್ದೆಂದು ಶಂಕಿಸಲಾಗಿದೆ. ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದು ಮೊಸಳೆಯನ್ನು ಸೆರೆ ಹಿಡಿಯುವ ಪ್ರಯತ್ನ ನಡೆಸಿದ್ದಾರೆ.
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…