ಜಿಲ್ಲೆಗಳು

ಮಂಗಳವಾರ ಕೂಡ ಮೊಸಳೆ ಪ್ರತ್ಯಕ್ಷ

ಮೈಸೂರು: ನಗರದ ಎಲೆ ತೋಟದ ಬಳಿ ಮಂಗಳವಾರ ಕೂಡ ಮೊಸಳೆ ಪ್ರತ್ಯಕ್ಷವಾಗಿದ್ದು, ಜನರು ಇದು ಮಾಮೂಲು ಎಂದು ಸುಮ್ಮನಾಗಿದ್ದಾರೆ. ಮೊಸಳೆ ಹಿಡಿಯಲು ಬಂದ ಅರಣ್ಯ ಇಲಾಖೆಯ ಸಿಬ್ಬಂದಿ ಕೆಸರಿನ ಕಾರಣ ಬರಿಗೈಲಿ ವಾಪಸ್ಸಾಗಿದ್ದಾರೆ.

ಎಲೆತೋಟದಲ್ಲಿ ಒಂದಕ್ಕಿಂತ ಹೆಚ್ಚು ಮೊಸಳೆಗಳಿವೆ. ಎಂಬದು ಸಾರ್ವಜನಿಕರ ಅರಿವಿಗೆ ಬಂದಿದೆ. ಮಂಗಳವಾರ ಕೂಡ ಮೋರಿಯಲ್ಲಿ ಇದ್ದ ತೆಂಗಿನ ಮರದ ಮೇಲೆ ಕೆಲಕಾಲ ಕುಳಿತ ಮೊಸಳೆ ನಂತರ ಅಲ್ಲಿಂದ ನಾಪತೆಯಾಗಿದೆ. ಇದನ್ನು ಕಂಡ ಸಾರ್ವಜನಿಕರು ಇದು ಮಾಮೂಲು ಎಂಬಂತೆ ಸುಮ್ಮನಾಗಿದ್ದಾರೆ.

ಆದರೆ, ಇಲ್ಲಿನ ಅಡಿಕೆ ತೋಟದ ಮಧ್ಯೆ ವೀಳ್ಯದೆಲೆ ಬೆಳೆಯುವ ಜನರು ಈಗ ತೋಟಕ್ಕೆ ಹೋಗಲು ಹೆದರುತ್ತಿದ್ದಾರೆ. ಮೊಸಳೆ ಆಗಾಗ ಇಲ್ಲಿನ ಸಣ್ಣ ಸೇತುವೆ ಮೇಲೆ ಬಂದು ಮಲಗಿರುತ್ತದೆ. ಮನುಷ್ಯರ ಹೆಜ್ಜೆ ಸಪ್ಪಳವಾದ ತಕ್ಷಣ ಚರಂಡಿಗೆ ಹಾರಿ ಮಾಯವಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಮಂಗಳವಾರ ಬೆಳಿಗ್ಗೆ ಅರಣ್ಯ ಇಲಾಖೆಯ ಐದು ಮಂದಿ ಸಿಬ್ಬಂದಿ ಎಲೆ ತೋಟದ ಬಳಿಗೆ ಬಂದು ಪರಿಶೀಲನೆ ನಡೆಸಿದರು. ಮೋರಿ ಹಾಗೂ ಕೆಸರಿನ ನಡುವೆ ಮೊಸಳೆ ಅಡ್ಡಾಡುತ್ತಿರುವ ಕಾರಣ ಹಿಡಿಯುವುದು ಕಷ್ಟ ಎಂದು ಹೇಳಿ ವಾಪಸ್ಸಾಗಿದ್ದಾರೆ.

andolana

Recent Posts

ಮೈಸೂರು: ಬೈಕ್‌ ಕಳ್ಳನ ಬಂಧನ

ಮೈಸೂರು: ಇಬ್ಬರು ಬೈಕ್ ಕಳ್ಳರನ್ನು ಬಂಧಿಸಿರುವ ಲಷ್ಕರ್ ಠಾಣೆ ಪೊಲೀಸರು, ಬಂಧಿತರಿಂದ 2.5 ಲಕ್ಷ ರೂ. ವೌಲ್ಯದ 3 ದ್ವಿಚಕ್ರ…

12 mins ago

ಮೈಸೂರು| ಅಂತರಾಜ್ಯ ಮನೆಗಳ್ಳನ ಬಂಧನ

ಮೈಸೂರು: ಅಂತರಾಜ್ಯ ಮನೆಗಳ್ಳನನ್ನು ಕುವೆಂಪು ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ 2.6 ಲಕ್ಷ ರೂ. ವೌಲ್ಯದ 20 ಗ್ರಾಂ…

15 mins ago

ಹನೂರು| ವಿದ್ಯುತ್‌ ಟವರ್‌ ದುರಸ್ತಿ ಕಾರ್ಯ ಪ್ರಗತಿಯಲ್ಲಿ: ಹಲವು ಗ್ರಾಮಗಳಲ್ಲಿ ವಿದ್ಯುತ್‌ ವ್ಯತ್ಯಯ

ಹನೂರು: ವಿದ್ಯುತ್ 66/11 ಕೆವಿ ಟವರ್ ದುರಸ್ತಿ, ವಿವಿಧ ಭಾಗದಲ್ಲಿ ವಿದ್ಯುತ್ ನಿಲುಗಡೆ ದುರಸ್ತಿಕಾರ್ಯ ಪ್ರಗತಿಯಲ್ಲಿರುವುದರಿಂದ ಹಲವು ಗ್ರಾಮಗಳಲ್ಲಿ ವಿದ್ಯುತ್…

21 mins ago

ವಿರಾಜಪೇಟೆ: ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ

ವಿರಾಜಪೇಟೆ: ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿರಾಜಪೇಟೆಯಲ್ಲಿ ನಡೆದಿದೆ. ವಿರಾಜಪೇಟೆ ಹೊರವಲಯದ ಅರಮೇರಿ ಬಳಿಯ ನಾಲ್ಕನೇ ರಸ್ತೆಯಲ್ಲಿ…

2 hours ago

ಟಾಕ್ಸಿಕ್‌ ಚಿತ್ರಕ್ಕೆ ಮತ್ತೊಂದು ಸಂಕಷ್ಟ: ಮಕ್ಕಳ ಹಕ್ಕುಗಳ ಆಯೋಗಕ್ಕೆ ದೂರು ಸಲ್ಲಿಕೆ

ಬೆಂಗಳೂರು: ರಾಕಿಂಗ್‌ ಸ್ಟಾರ್‌ ಯಶ್‌ ನಟನೆಯ ಟಾಕ್ಸಿಕ್‌ ಚಿತ್ರಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಟಾಕ್ಸಿಕ್‌ ಚಿತ್ರದ ವಿರುದ್ಧ ಮಕ್ಕಳ ಹಕ್ಕುಗಳ…

2 hours ago

ಬೆಂಗಳೂರಿನಲ್ಲಿ ಜೈ ಬಾಂಗ್ಲಾ ಎಂದು ಘೋಷಣೆ ಕೂಗಿದ್ದ ಮಹಿಳೆ ಬಂಧನ

ಬೆಂಗಳೂರು: ಬೆಂಗಳೂರಿನಲ್ಲಿ ಜೈ ಬಾಂಗ್ಲಾ ಎಂದು ದೇಶ ವಿರೋಧ ಘೋಷಣೆ ಕೂಗಿದ್ದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಹೆಬ್ಬಗೋಡಿ ಠಾಣೆ ಪೊಲೀಸರು…

3 hours ago