ಮೈಸೂರು: ನಗರದ ಎಲೆ ತೋಟದ ಬಳಿ ಮಂಗಳವಾರ ಕೂಡ ಮೊಸಳೆ ಪ್ರತ್ಯಕ್ಷವಾಗಿದ್ದು, ಜನರು ಇದು ಮಾಮೂಲು ಎಂದು ಸುಮ್ಮನಾಗಿದ್ದಾರೆ. ಮೊಸಳೆ ಹಿಡಿಯಲು ಬಂದ ಅರಣ್ಯ ಇಲಾಖೆಯ ಸಿಬ್ಬಂದಿ ಕೆಸರಿನ ಕಾರಣ ಬರಿಗೈಲಿ ವಾಪಸ್ಸಾಗಿದ್ದಾರೆ.
ಎಲೆತೋಟದಲ್ಲಿ ಒಂದಕ್ಕಿಂತ ಹೆಚ್ಚು ಮೊಸಳೆಗಳಿವೆ. ಎಂಬದು ಸಾರ್ವಜನಿಕರ ಅರಿವಿಗೆ ಬಂದಿದೆ. ಮಂಗಳವಾರ ಕೂಡ ಮೋರಿಯಲ್ಲಿ ಇದ್ದ ತೆಂಗಿನ ಮರದ ಮೇಲೆ ಕೆಲಕಾಲ ಕುಳಿತ ಮೊಸಳೆ ನಂತರ ಅಲ್ಲಿಂದ ನಾಪತೆಯಾಗಿದೆ. ಇದನ್ನು ಕಂಡ ಸಾರ್ವಜನಿಕರು ಇದು ಮಾಮೂಲು ಎಂಬಂತೆ ಸುಮ್ಮನಾಗಿದ್ದಾರೆ.
ಆದರೆ, ಇಲ್ಲಿನ ಅಡಿಕೆ ತೋಟದ ಮಧ್ಯೆ ವೀಳ್ಯದೆಲೆ ಬೆಳೆಯುವ ಜನರು ಈಗ ತೋಟಕ್ಕೆ ಹೋಗಲು ಹೆದರುತ್ತಿದ್ದಾರೆ. ಮೊಸಳೆ ಆಗಾಗ ಇಲ್ಲಿನ ಸಣ್ಣ ಸೇತುವೆ ಮೇಲೆ ಬಂದು ಮಲಗಿರುತ್ತದೆ. ಮನುಷ್ಯರ ಹೆಜ್ಜೆ ಸಪ್ಪಳವಾದ ತಕ್ಷಣ ಚರಂಡಿಗೆ ಹಾರಿ ಮಾಯವಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ಮಂಗಳವಾರ ಬೆಳಿಗ್ಗೆ ಅರಣ್ಯ ಇಲಾಖೆಯ ಐದು ಮಂದಿ ಸಿಬ್ಬಂದಿ ಎಲೆ ತೋಟದ ಬಳಿಗೆ ಬಂದು ಪರಿಶೀಲನೆ ನಡೆಸಿದರು. ಮೋರಿ ಹಾಗೂ ಕೆಸರಿನ ನಡುವೆ ಮೊಸಳೆ ಅಡ್ಡಾಡುತ್ತಿರುವ ಕಾರಣ ಹಿಡಿಯುವುದು ಕಷ್ಟ ಎಂದು ಹೇಳಿ ವಾಪಸ್ಸಾಗಿದ್ದಾರೆ.
ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…
ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…
ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…