ಜಿಲ್ಲೆಗಳು

ವಸ್ತುಪ್ರದರ್ಶನ ಪ್ರಾಧಿಕಾರದಲ್ಲಿ ಸಾಂಸ್ಕೃತಿಕ ಹಬ್ಬ

ಮೈಸೂರು: ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರ ವತಿಯಿಂದ ಡಿಸೆಂಬರ್ ನಾಲ್ಕರವರೆಗೆ ನಾನಾ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮಗಳ ವಿವರ
ನ.30ರಂದು 7ರಿಂದ 8ಗಂಟೆವರೆಗೆ ದತ್ತಗಿರಿಯ ಅಲೆಕ್ಸಾಂಡರ್ ಅವರಿಂದ ಸುಗಮ ಸಂಗೀತ, 8 ರಿಂದ 9.30 ಗಂಟೆಯವರೆಗೆ ಶ್ರೀ ರೇಣುಕಾಂಬ ಕಲಾಸಂಘ ಬೆಂಗಳೂರಿನ ನಾಗರಾಜ ಅವರಿಂದ ನಾಟಕ, ಡಿ.1ರಂದು ಸಂಜೆ 7 ರಿಂದ 8ರವರೆಗೆ ಬಸವೇಶ್ವರ ರಸ್ತೆಯ ಎಂ.ಎನ್.ವೈಷ್ಣವಿ ಅವರಿಂದ ಸುಗಮಸಂಗೀತ, 8 ರಿಂದ 9.30 ರವರೆಗೆ ರಾಮಾನುಜ ರಸ್ತೆ ಮೈಸೂರು ರಾಘವೇಂದ್ರ ರತ್ನಾಕರ್ ಅವರಿಂದ ಚಲನಚಿತ್ರಗೀತೆ, ಡಿ.2 ರಂದು ಸಂಜೆ 7 ರಿಂದ 8ರವರೆಗೆ ಮೈಸೂರಿನ ವಿ.ನಂಜುಂಡ ಅವರಿಂದ ರಸಮಂಜರಿ, 8 ರಿಂದ 9.30ರವರೆಗೆ ಸರಸ್ವತಿ ಕೃಪಾ ಪೋಷಿತ ನಾಟಕ ಮಂಡಳಿ ಮೈಸೂರಿನ ಧ್ರುವಕುಮಾರ್ ಎಸ್. ಗೋಪಾಲ್ ಅವರಿಂದ ನಾಟಕ, ಡಿ.3ರಂದು ಸಂಜೆ 7ರಿಂದ 10ರವರೆಗೆ ಬೆಂಗಳೂರಿನ ಖ್ಯಾತ ಹಾಸ್ಯ ಸಾಹಿತಿ ಸುಧಾ ಬರಗೂರು ಅವರಿಂದ ನಗೆಹಬ್ಬ, ಡಿ.4 ರಂದು ಸಂಜೆ 7 ರಿಂದ 10ರವರೆಗೆ ಕಲ್ಪವೃಕ್ಷ ಟ್ರಸ್ಟ್ ಬೆಂಗಳೂರಿನ ಭೀಷ್ಮರಾವ್ ಅವರಿಂದ ನಾಟಕ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

andolana

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

10 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

10 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

11 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

13 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

16 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

16 hours ago