ಜಿಲ್ಲೆಗಳು

ಬಿರ್ಸಾ ಮುಂಡಾ ಅವರ ಜನ್ಮಜಯಂತಿ ಅಂಗವಾಗಿ ಸಾಂಸ್ಕೃತಿಕ ಮೆರವಣಿಗೆ

ಮೈಸೂರು: ಬುಡಕಟ್ಟು ಜನರ ಸಾಂಪ್ರದಾಯ ನೃತ್ಯ.., ಗೊರವನ ವೇಶ.., ಕೋಣದ ಮುಖವಾಡ…, ಕೋವಿ ಹಿಡಿದ ಆದಿವಾಸಿಗಳು…, ಭೂತ ಕುಣಿತ.., ರಾಜ್ಯದ ವಿವಿದೆಡೆಗಳಿಂದ ಆಗಮಿಸಿದ್ದ ಬುಡಕಟ್ಟು ಜನರು ತಮ್ಮ ಕಲೆಯನ್ನು ಸಾರ್ವಜನಿಕವಾಗಿ ಪ್ರದರ್ಶಿಸಿದರು.

ಬುಡಕಟ್ಟು ಜನಾಂಗದ ಹೋರಾಟಗಾರ ಬಿರ್ಸಾ ಮುಂಡಾ ಅವರ ಜನ್ಮಜಯಂತಿ ಹಾಗೂ ಜನ ಜಾತೀಯ ಗೌರವ ದಿವಸ್ ಅಂಗವಾಗಿ ನಗರದ ಅರಮನೆ ಮುಂಭಾಗ ಏರ್ಪಡಿಸಲಾಗಿದ್ದ ಬುಡಕಟ್ಟು ಜನರ ಸಾಂಸ್ಕೃತಿಕ ಮೆರವಣಿಗೆಯಲ್ಲಿ ಈ ದೃಷ್ಯಗಳು ಕಂಡುಬಂದವು. ಮೆರವಣಿಗೆಗೆ ವಿಧಾನಪರಿಷತ್ ಸದಸ್ಯ ಸಿ.ಎನ್.ಮಂಜೇಗೌಡ, ಶಾಸಕ ಅಶ್ವಿನ್‌ಕುಮಾರ್ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಅವರು, ನಾನು ನನ್ನ ಜೀವನದ ಕೆಲ ಸಮಯವನ್ನು ಬುಡಕಟ್ಟು ಜನಾಂಗದ ಸೋದರ-ಸೋದರಿಯರು ಮತ್ತು ಮಕ್ಕಳೊಂದಿಗೆ ಕಳೆದಿದ್ದೇನೆ. ಅವರ ಜೀವನದ ಸುಖ-ಸಂತೋಷಗಳು, ದೈನಂದಿನ ಜೀವನ ಮತ್ತು ಅವರ ಜೀವನದ ಅವಶ್ಯಕತೆಗಳನ್ನು ನೋಡಿದ್ದೇನೆ ಎಂದು ಹೇಳಿದರು.
ಬುಡಕಟ್ಟು ಹಾಗೂ ಆದಿವಾಸಿಗಳ ಜೀವನ ಇಂದಿಗೂ ಸಂಕಷ್ಟದಲ್ಲಿದೆ. ಅವರು ಇಂದಿಗೂ ಕನಿಷ್ಠ ಜೀವನ ನಡೆಸುತ್ತಿದ್ದಾರೆ. ಸರ್ಕಾರ ಅವರುಗಳನ್ನು ಮುಖ್ಯವಾಹಿನಿಗೆ ತರಲು ಯೋಜನೆಗಳನ್ನು ರೂಪಿಸಬೇಕು ಎಂದು ಹೇಳಿದರು.

ಬುಡಕಟ್ಟು ಸಮುದಾಯದ ನಾಯಕರಾದ ಬಿರ್ಸಾ ಮುಂಡಾ ಅಂದಿನ ಬಂಗಾಳ ಹಾಗೂ ಇಂದಿನ ಜಾರ್ಖಂಡ್‌ನಲ್ಲಿ ಬ್ರಿಟಿಷರ ವಿರುದ್ಧ ದಂಗೆ ಏಳುವ ಮೂಲಕ ಬುಡುಕಟ್ಟು ಸಮುದಾಯದಲ್ಲಿ ಪ್ರಖ್ಯಾತಿಯನ್ನು ಪಡೆದಿದ್ದರು. ನಂತರ ಸಾಕಷ್ಟು ಹೋರಾಟಗಳಲ್ಲಿ ಅವರು ಹೆಸರುವಾಸಿಯಾಗಿದ್ದರು ಎಂದರು.

ಅವರ ಜಯಂತಿಯಂದು ಬುಡಕಟ್ಟು ಜನರನ್ನು ಬಳಸಿಕೊಂಡು ಕಾರ್ಯಕ್ರಮ ರೂಪಿಸಿರುವುದು ಸಂತಸದ ಸಂಗತಿ. ಅವರಿಗೂ ಕೂಡ ನಾಗರೀಕ ಪ್ರಪಂಚತ ಬಗ್ಗೆ ಅರಿವು ಮೂಡಿಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಬುಡಕಟ್ಟು ವ್ಯವಹಾರಗಳ ಇಲಾಖೆಯ ಕಾರ್ಯವೈಖರಿ ಪ್ರಶಂಸನೀಯ ಎಂದರು.

ಅರಮನೆ ಮುಂಭಾಗದಿಂದ ಆರಂಭವಾದ ಸಾಂಸ್ಕೃತಿಕ ಮೆರವಣಿಗೆ ನಗರದ ದೇವರಾಜ ಅರಸು ರಸ್ತೆಯ ಮೂಲಕ ಸಾಗಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಅಂತ್ಯಗೊಂಡಿತು. ಬುಡಕಟ್ಟು ಜನರ ಮೆರವಣಿಗೆ ಅಕ್ಷರಶಃ ದಸರಾ ಮೆರವಣಿಗೆಯನ್ನು ನೆನಪಿಸುವಂತಿತ್ತು.

ಕಾರ್ಯಕ್ರಮದಲ್ಲಿ ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಮಿರ್ಲೆ ಶ್ರೀನಿವಾಸಗೌಡ, ಉಪ ಮಹಾಪೌರರಾದ ಡಾ.ಜಿ.ರೂಪ, ಅಧಿಕಾರಿಗಳಾದ ಕಾಂತರಾಜು, ರಾಜೇಶ್ ಜಿ ಗೌಡ ಮುಂತಾದವರು ಭಾಗವಹಿಸಿದ್ದರು.

 

andolana

Recent Posts

ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಕುಡಿಯುವ ನೀರಿಗೆ ಅಭಾವ

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಕಪಿಲಾ ನದಿ ಪಕ್ಕದಲ್ಲೇ ಇದ್ದರೂ ಜನತೆಗೆ ಕುಡಿಯುವ ನೀರಿನ ಅಭಾವ ಎದುರಾಗಿದೆ. ಹಳ್ಳಿಗಳಿಗೆ ನದಿ…

45 mins ago

ರಾಜ್ಯದಲ್ಲಿ ಇನ್ನೂ ಒಂದು ವಾರಗಳ ಕಾಲ ಭಾರೀ ಮಳೆ

ಬೆಂಗಳೂರು: ರಾಜ್ಯದಲ್ಲಿ ಇನ್ನೂ ಒಂದು ವಾರಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪೂರ್ವವ ಮಧ್ಯ…

1 hour ago

ಓದುಗರ ಪತ್ರ: ಸರಗಳ್ಳತನಕ್ಕೆ ಕಡಿವಾಣ ಹಾಕಿ

ಇತ್ತೀಚೆಗೆ ಮೈಸೂರಿನಲ್ಲಿ ಸರಗಳ್ಳತನ ಪ್ರಕರಣಗಳು ವರದಿಯಾಗುತ್ತಿದ್ದು, ಮಹಿಳೆಯರು ಒಂಟಿಯಾಗಿ ರಸ್ತೆಯಲ್ಲಿ ಓಡಾಡಲು ಹೆದರುವಂತಾಗಿದೆ. ಎರಡು ದಿನಗಳ ಹಿಂದಷ್ಟೇ ನಮ್ಮ ಸಂಬಂಧಿಕರೊಬ್ಬರು…

1 hour ago

ಓದುಗರ ಪತ್ರ: ಬಿಗ್‌ಬಾಸ್ ಕಾರ್ಯಕ್ರಮ ನಿಲ್ಲಲಿ

ಕನ್ನಡದ ಖಾಸಗಿ ಚಾನೆಲ್‌ವೊಂದರಲ್ಲಿ ಪ್ರಸಾರವಾಗುತ್ತಿರುವ ಬಿಗ್‌ಬಾಸ್ ಸೀಸನ್-11 ವಿವಾದಗಳಿಂದಲೇ ಸುದ್ದಿಯಾಗುತ್ತಿದ್ದು, ಸ್ಪರ್ಧಿಗಳು ನಿತ್ಯ ಜಗಳವಾಡುತ್ತಿರುವುದರಿಂದ ಕಾರ್ಯಕ್ರಮ ವೀಕ್ಷಿಸುವವರಿಗೆ ಕಿರಿಕಿರಿಯಾಗುತ್ತಿದೆ. ವಿವಿಧ…

1 hour ago

ಓದುಗರ ಪತ್ರ: ಪೊಲೀಸರಿಗೆ ಧನ್ಯವಾದಗಳು

ನಾಡಹಬ್ಬ ದಸರಾ ಮಹೋತ್ಸವದಲ್ಲಿ ಈ ಬಾರಿ ಜನ ಸಾಗರವೇ ಹರಿದು ಬಂದಿತ್ತು. ದಸರಾ ಅಂಗವಾಗಿ ಆಯೋಜಿಸಿದ್ದ ಯುವ ಸಂಭ್ರಮ, ಯುವ…

1 hour ago

ಓದುಗರ ಪತ್ರ: ಮುಷ್ಕರ ಮುಂದುವರಿದಿದೆ

ಸರ್ಕಾರವೇ ನಮ್ಮ ದೇವರಾಗಿದೆ ಮೇಲಾಧಿಕಾರಿಗಳ ಮೇಲೆ ಗೌರವವಿದೆ ಜನರ ಸಮಸ್ಯೆಗಳ ಅರಿವಿದೆ ಅವರಿಗಾದ ಅಡಚಣೆಗೆ ವಿಷಾದವಿದೆ ನಮಗೂ ಬದುಕಿದೆ. ನಮ್ಮದೂ…

1 hour ago