ಮೈಸೂರು: ಬುಡಕಟ್ಟು ಜನರ ಸಾಂಪ್ರದಾಯ ನೃತ್ಯ.., ಗೊರವನ ವೇಶ.., ಕೋಣದ ಮುಖವಾಡ…, ಕೋವಿ ಹಿಡಿದ ಆದಿವಾಸಿಗಳು…, ಭೂತ ಕುಣಿತ.., ರಾಜ್ಯದ ವಿವಿದೆಡೆಗಳಿಂದ ಆಗಮಿಸಿದ್ದ ಬುಡಕಟ್ಟು ಜನರು ತಮ್ಮ ಕಲೆಯನ್ನು ಸಾರ್ವಜನಿಕವಾಗಿ ಪ್ರದರ್ಶಿಸಿದರು.
ಬುಡಕಟ್ಟು ಜನಾಂಗದ ಹೋರಾಟಗಾರ ಬಿರ್ಸಾ ಮುಂಡಾ ಅವರ ಜನ್ಮಜಯಂತಿ ಹಾಗೂ ಜನ ಜಾತೀಯ ಗೌರವ ದಿವಸ್ ಅಂಗವಾಗಿ ನಗರದ ಅರಮನೆ ಮುಂಭಾಗ ಏರ್ಪಡಿಸಲಾಗಿದ್ದ ಬುಡಕಟ್ಟು ಜನರ ಸಾಂಸ್ಕೃತಿಕ ಮೆರವಣಿಗೆಯಲ್ಲಿ ಈ ದೃಷ್ಯಗಳು ಕಂಡುಬಂದವು. ಮೆರವಣಿಗೆಗೆ ವಿಧಾನಪರಿಷತ್ ಸದಸ್ಯ ಸಿ.ಎನ್.ಮಂಜೇಗೌಡ, ಶಾಸಕ ಅಶ್ವಿನ್ಕುಮಾರ್ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಅವರು, ನಾನು ನನ್ನ ಜೀವನದ ಕೆಲ ಸಮಯವನ್ನು ಬುಡಕಟ್ಟು ಜನಾಂಗದ ಸೋದರ-ಸೋದರಿಯರು ಮತ್ತು ಮಕ್ಕಳೊಂದಿಗೆ ಕಳೆದಿದ್ದೇನೆ. ಅವರ ಜೀವನದ ಸುಖ-ಸಂತೋಷಗಳು, ದೈನಂದಿನ ಜೀವನ ಮತ್ತು ಅವರ ಜೀವನದ ಅವಶ್ಯಕತೆಗಳನ್ನು ನೋಡಿದ್ದೇನೆ ಎಂದು ಹೇಳಿದರು.
ಬುಡಕಟ್ಟು ಹಾಗೂ ಆದಿವಾಸಿಗಳ ಜೀವನ ಇಂದಿಗೂ ಸಂಕಷ್ಟದಲ್ಲಿದೆ. ಅವರು ಇಂದಿಗೂ ಕನಿಷ್ಠ ಜೀವನ ನಡೆಸುತ್ತಿದ್ದಾರೆ. ಸರ್ಕಾರ ಅವರುಗಳನ್ನು ಮುಖ್ಯವಾಹಿನಿಗೆ ತರಲು ಯೋಜನೆಗಳನ್ನು ರೂಪಿಸಬೇಕು ಎಂದು ಹೇಳಿದರು.
ಬುಡಕಟ್ಟು ಸಮುದಾಯದ ನಾಯಕರಾದ ಬಿರ್ಸಾ ಮುಂಡಾ ಅಂದಿನ ಬಂಗಾಳ ಹಾಗೂ ಇಂದಿನ ಜಾರ್ಖಂಡ್ನಲ್ಲಿ ಬ್ರಿಟಿಷರ ವಿರುದ್ಧ ದಂಗೆ ಏಳುವ ಮೂಲಕ ಬುಡುಕಟ್ಟು ಸಮುದಾಯದಲ್ಲಿ ಪ್ರಖ್ಯಾತಿಯನ್ನು ಪಡೆದಿದ್ದರು. ನಂತರ ಸಾಕಷ್ಟು ಹೋರಾಟಗಳಲ್ಲಿ ಅವರು ಹೆಸರುವಾಸಿಯಾಗಿದ್ದರು ಎಂದರು.
ಅವರ ಜಯಂತಿಯಂದು ಬುಡಕಟ್ಟು ಜನರನ್ನು ಬಳಸಿಕೊಂಡು ಕಾರ್ಯಕ್ರಮ ರೂಪಿಸಿರುವುದು ಸಂತಸದ ಸಂಗತಿ. ಅವರಿಗೂ ಕೂಡ ನಾಗರೀಕ ಪ್ರಪಂಚತ ಬಗ್ಗೆ ಅರಿವು ಮೂಡಿಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಬುಡಕಟ್ಟು ವ್ಯವಹಾರಗಳ ಇಲಾಖೆಯ ಕಾರ್ಯವೈಖರಿ ಪ್ರಶಂಸನೀಯ ಎಂದರು.
ಅರಮನೆ ಮುಂಭಾಗದಿಂದ ಆರಂಭವಾದ ಸಾಂಸ್ಕೃತಿಕ ಮೆರವಣಿಗೆ ನಗರದ ದೇವರಾಜ ಅರಸು ರಸ್ತೆಯ ಮೂಲಕ ಸಾಗಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಅಂತ್ಯಗೊಂಡಿತು. ಬುಡಕಟ್ಟು ಜನರ ಮೆರವಣಿಗೆ ಅಕ್ಷರಶಃ ದಸರಾ ಮೆರವಣಿಗೆಯನ್ನು ನೆನಪಿಸುವಂತಿತ್ತು.
ಕಾರ್ಯಕ್ರಮದಲ್ಲಿ ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಮಿರ್ಲೆ ಶ್ರೀನಿವಾಸಗೌಡ, ಉಪ ಮಹಾಪೌರರಾದ ಡಾ.ಜಿ.ರೂಪ, ಅಧಿಕಾರಿಗಳಾದ ಕಾಂತರಾಜು, ರಾಜೇಶ್ ಜಿ ಗೌಡ ಮುಂತಾದವರು ಭಾಗವಹಿಸಿದ್ದರು.
ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…
ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕು ಕಚೇರಿ ಆಡಳಿತ ಸೌಧದಲ್ಲಿ ಇರುವ ನೆಮ್ಮದಿ ಕೇಂದ್ರದ ಮೂಲಕ ಜಾತಿ ಪ್ರಮಾಣ ಪತ್ರ, ಆದಾಯ…
ನಗರ ಪ್ರದೇಶಗಳ ಹೋಟೆಲ್ಗಳಲ್ಲಿ ನೀಡಲಾಗುವ ಆಹಾರ ಪಾರ್ಸೆಲ್ಗಳು ಹಾಗೂ ಆನ್ ಲೈನ್ ಮೂಲಕ ಸರಬರಾಜಾಗುವ ಶೇ.೯೦ ಕ್ಕಿಂತ ಹೆಚ್ಚು ಆಹಾರ…
ಸಾಮಾಜಿಕ ಮಾಧ್ಯಮ ಬಳಕೆದಾರರು ಬೆಂಗಳೂರಿನ ನಂತರ ಅತಿ ಹೆಚ್ಚು ಕ್ರಿಯಾಶೀಲರಾಗಿರುವುದು ಮೈಸೂರು ನಗರದಲ್ಲಿ. ಆದರೆ ಬೇಸರದ ಸಂಗತಿ ಎಂದರೆ ಇಲ್ಲಿನ…
ರಾಜ್ಯದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್)ಪ್ರಕ್ರಿಯೆ ಜೂ.೩೦ರಿಂದ ಆರಂಭವಾಗಿದೆ. ಆದರೆ ಮತದಾರರು ಈ ಪ್ರಕ್ರಿಯೆಯಲ್ಲಿ ಯಾವ ದಾಖಲೆಗಳನ್ನು…
ಪಂಜು ಗಂಗೊಳ್ಳಿ ಬಡಕಟ್ಟು ಜನರಿಗೆ ಅಕ್ಷರ ಕಲಿಸಿ ಬದುಕು ರೂಪಿಸಿದ ಕರುಣಾಮಯಿ ೧೯೯೦ರಲ್ಲಿ ಅಸ್ಸಾಮಿನ ಹೊಜಾಯ್ ಜಿಲ್ಲೆಯ ಲುಮ್ಡಿಂಗ್ ಗ್ರಾಮದ…