ಜಿಲ್ಲೆಗಳು

ಬಿರ್ಸಾ ಮುಂಡಾ ಅವರ ಜನ್ಮಜಯಂತಿ ಅಂಗವಾಗಿ ಸಾಂಸ್ಕೃತಿಕ ಮೆರವಣಿಗೆ

ಮೈಸೂರು: ಬುಡಕಟ್ಟು ಜನರ ಸಾಂಪ್ರದಾಯ ನೃತ್ಯ.., ಗೊರವನ ವೇಶ.., ಕೋಣದ ಮುಖವಾಡ…, ಕೋವಿ ಹಿಡಿದ ಆದಿವಾಸಿಗಳು…, ಭೂತ ಕುಣಿತ.., ರಾಜ್ಯದ ವಿವಿದೆಡೆಗಳಿಂದ ಆಗಮಿಸಿದ್ದ ಬುಡಕಟ್ಟು ಜನರು ತಮ್ಮ ಕಲೆಯನ್ನು ಸಾರ್ವಜನಿಕವಾಗಿ ಪ್ರದರ್ಶಿಸಿದರು.

ಬುಡಕಟ್ಟು ಜನಾಂಗದ ಹೋರಾಟಗಾರ ಬಿರ್ಸಾ ಮುಂಡಾ ಅವರ ಜನ್ಮಜಯಂತಿ ಹಾಗೂ ಜನ ಜಾತೀಯ ಗೌರವ ದಿವಸ್ ಅಂಗವಾಗಿ ನಗರದ ಅರಮನೆ ಮುಂಭಾಗ ಏರ್ಪಡಿಸಲಾಗಿದ್ದ ಬುಡಕಟ್ಟು ಜನರ ಸಾಂಸ್ಕೃತಿಕ ಮೆರವಣಿಗೆಯಲ್ಲಿ ಈ ದೃಷ್ಯಗಳು ಕಂಡುಬಂದವು. ಮೆರವಣಿಗೆಗೆ ವಿಧಾನಪರಿಷತ್ ಸದಸ್ಯ ಸಿ.ಎನ್.ಮಂಜೇಗೌಡ, ಶಾಸಕ ಅಶ್ವಿನ್‌ಕುಮಾರ್ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಅವರು, ನಾನು ನನ್ನ ಜೀವನದ ಕೆಲ ಸಮಯವನ್ನು ಬುಡಕಟ್ಟು ಜನಾಂಗದ ಸೋದರ-ಸೋದರಿಯರು ಮತ್ತು ಮಕ್ಕಳೊಂದಿಗೆ ಕಳೆದಿದ್ದೇನೆ. ಅವರ ಜೀವನದ ಸುಖ-ಸಂತೋಷಗಳು, ದೈನಂದಿನ ಜೀವನ ಮತ್ತು ಅವರ ಜೀವನದ ಅವಶ್ಯಕತೆಗಳನ್ನು ನೋಡಿದ್ದೇನೆ ಎಂದು ಹೇಳಿದರು.
ಬುಡಕಟ್ಟು ಹಾಗೂ ಆದಿವಾಸಿಗಳ ಜೀವನ ಇಂದಿಗೂ ಸಂಕಷ್ಟದಲ್ಲಿದೆ. ಅವರು ಇಂದಿಗೂ ಕನಿಷ್ಠ ಜೀವನ ನಡೆಸುತ್ತಿದ್ದಾರೆ. ಸರ್ಕಾರ ಅವರುಗಳನ್ನು ಮುಖ್ಯವಾಹಿನಿಗೆ ತರಲು ಯೋಜನೆಗಳನ್ನು ರೂಪಿಸಬೇಕು ಎಂದು ಹೇಳಿದರು.

ಬುಡಕಟ್ಟು ಸಮುದಾಯದ ನಾಯಕರಾದ ಬಿರ್ಸಾ ಮುಂಡಾ ಅಂದಿನ ಬಂಗಾಳ ಹಾಗೂ ಇಂದಿನ ಜಾರ್ಖಂಡ್‌ನಲ್ಲಿ ಬ್ರಿಟಿಷರ ವಿರುದ್ಧ ದಂಗೆ ಏಳುವ ಮೂಲಕ ಬುಡುಕಟ್ಟು ಸಮುದಾಯದಲ್ಲಿ ಪ್ರಖ್ಯಾತಿಯನ್ನು ಪಡೆದಿದ್ದರು. ನಂತರ ಸಾಕಷ್ಟು ಹೋರಾಟಗಳಲ್ಲಿ ಅವರು ಹೆಸರುವಾಸಿಯಾಗಿದ್ದರು ಎಂದರು.

ಅವರ ಜಯಂತಿಯಂದು ಬುಡಕಟ್ಟು ಜನರನ್ನು ಬಳಸಿಕೊಂಡು ಕಾರ್ಯಕ್ರಮ ರೂಪಿಸಿರುವುದು ಸಂತಸದ ಸಂಗತಿ. ಅವರಿಗೂ ಕೂಡ ನಾಗರೀಕ ಪ್ರಪಂಚತ ಬಗ್ಗೆ ಅರಿವು ಮೂಡಿಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಬುಡಕಟ್ಟು ವ್ಯವಹಾರಗಳ ಇಲಾಖೆಯ ಕಾರ್ಯವೈಖರಿ ಪ್ರಶಂಸನೀಯ ಎಂದರು.

ಅರಮನೆ ಮುಂಭಾಗದಿಂದ ಆರಂಭವಾದ ಸಾಂಸ್ಕೃತಿಕ ಮೆರವಣಿಗೆ ನಗರದ ದೇವರಾಜ ಅರಸು ರಸ್ತೆಯ ಮೂಲಕ ಸಾಗಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಅಂತ್ಯಗೊಂಡಿತು. ಬುಡಕಟ್ಟು ಜನರ ಮೆರವಣಿಗೆ ಅಕ್ಷರಶಃ ದಸರಾ ಮೆರವಣಿಗೆಯನ್ನು ನೆನಪಿಸುವಂತಿತ್ತು.

ಕಾರ್ಯಕ್ರಮದಲ್ಲಿ ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಮಿರ್ಲೆ ಶ್ರೀನಿವಾಸಗೌಡ, ಉಪ ಮಹಾಪೌರರಾದ ಡಾ.ಜಿ.ರೂಪ, ಅಧಿಕಾರಿಗಳಾದ ಕಾಂತರಾಜು, ರಾಜೇಶ್ ಜಿ ಗೌಡ ಮುಂತಾದವರು ಭಾಗವಹಿಸಿದ್ದರು.

 

andolana

Recent Posts

ಪ್ರಮಾಣ ವಚನ ಸಮಾರಂಭಕ್ಕೆ ವಿಜಯ್‌ ಪತ್ನಿ, ಮಕ್ಕಳು ಗೈರು

ಚೆನ್ನೈ : ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮಾರಂಭದಲ್ಲಿ ಅನೇಕ ಗಣ್ಯರು ಸೇರಿದ್ದರು.…

16 mins ago

ಮಡಿಕೇರಿ | ನೀರಿನಲ್ಲಿ ಮುಳುಗಿ ಯುವಕ ಸಾವು

ಮಡಿಕೇರಿ : ಸ್ನಾನಕ್ಕೆ ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಇಲ್ಲಿಗೆ ಸಮೀಪದ ಬಲಮುರಿ ಗ್ರಾಮದಲ್ಲಿ ಭಾನುವಾರ ನಡೆದಿದೆ.…

30 mins ago

ಗಡಿ ಜಿಲ್ಲೆಯಲ್ಲೂ ತಮಿಳು ಸಿಎಂ ವಿಜಯ್‌ ಹವಾ!

ಹನೂರು : ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ.ಜೋಸೆಫ್ ವಿಜಯ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆ ಪಟ್ಟಣದಲ್ಲಿ…

42 mins ago

ಪ್ರಧಾನಿ ಸಂಚಾರ ಮಾರ್ಗದಲ್ಲಿ ಜಿಲಿಟೆನ್ ಕಡ್ಡಿ ಪತ್ತೆ ; ಕೆಲಕಾಲ ಆತಂಕ ; ಓರ್ವ ವಶಕ್ಕೆ

ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಗರಕ್ಕೆ ಬಂದಿದ್ದ ವೇಳೆ ಜಿಲಿಟಿನ್ ಕಡ್ಡಿಗಳು ಪತ್ತೆಯಾಗಿ ಕೆಲಕಾಲ…

1 hour ago

ತಮಿಳುನಾಡು | ತಿರುಚಿರಾಪಳ್ಳಿ ಕ್ಷೇತ್ರಕ್ಕೆ ವಿಜಯ್ ರಾಜೀನಾಮೆ

ಚೆನ್ನೈ : ಟಿವಿಕೆ ಮುಖ್ಯಸ್ಥ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಭಾನುವಾರ ತಿರುಚಿರಾಪಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ…

2 hours ago

ಹುಣಸೂರು | ಭಾರೀ ಗಾಳಿ-ಮಳೆಗೆ ಹಾರಿಹೋದ ಚಾವಣಿ

ಹುಣಸೂರು : ಬಿರುಗಾಳಿ ಮಳೆಗೆ ತಾಲ್ಲೂಕಿನ ಹನಗೋಡು ಹೋಬಳಿಯ ವದ್ಲಿ ಮನುಗನಹಳ್ಳಿಯಲ್ಲಿ ಮನೆಯ ಚಾವಣಿಗೆ ಹಾಕಿದ್ದ ಕಲ್ನಾರ್ ಶೀಟ್ ಹಾರಿಹೋಗಿದ್ದು,…

3 hours ago