ಜಿಲ್ಲೆಗಳು

ಬಿರ್ಸಾ ಮುಂಡಾ ಅವರ ಜನ್ಮಜಯಂತಿ ಅಂಗವಾಗಿ ಸಾಂಸ್ಕೃತಿಕ ಮೆರವಣಿಗೆ

ಮೈಸೂರು: ಬುಡಕಟ್ಟು ಜನರ ಸಾಂಪ್ರದಾಯ ನೃತ್ಯ.., ಗೊರವನ ವೇಶ.., ಕೋಣದ ಮುಖವಾಡ…, ಕೋವಿ ಹಿಡಿದ ಆದಿವಾಸಿಗಳು…, ಭೂತ ಕುಣಿತ.., ರಾಜ್ಯದ ವಿವಿದೆಡೆಗಳಿಂದ ಆಗಮಿಸಿದ್ದ ಬುಡಕಟ್ಟು ಜನರು ತಮ್ಮ ಕಲೆಯನ್ನು ಸಾರ್ವಜನಿಕವಾಗಿ ಪ್ರದರ್ಶಿಸಿದರು.

ಬುಡಕಟ್ಟು ಜನಾಂಗದ ಹೋರಾಟಗಾರ ಬಿರ್ಸಾ ಮುಂಡಾ ಅವರ ಜನ್ಮಜಯಂತಿ ಹಾಗೂ ಜನ ಜಾತೀಯ ಗೌರವ ದಿವಸ್ ಅಂಗವಾಗಿ ನಗರದ ಅರಮನೆ ಮುಂಭಾಗ ಏರ್ಪಡಿಸಲಾಗಿದ್ದ ಬುಡಕಟ್ಟು ಜನರ ಸಾಂಸ್ಕೃತಿಕ ಮೆರವಣಿಗೆಯಲ್ಲಿ ಈ ದೃಷ್ಯಗಳು ಕಂಡುಬಂದವು. ಮೆರವಣಿಗೆಗೆ ವಿಧಾನಪರಿಷತ್ ಸದಸ್ಯ ಸಿ.ಎನ್.ಮಂಜೇಗೌಡ, ಶಾಸಕ ಅಶ್ವಿನ್‌ಕುಮಾರ್ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಅವರು, ನಾನು ನನ್ನ ಜೀವನದ ಕೆಲ ಸಮಯವನ್ನು ಬುಡಕಟ್ಟು ಜನಾಂಗದ ಸೋದರ-ಸೋದರಿಯರು ಮತ್ತು ಮಕ್ಕಳೊಂದಿಗೆ ಕಳೆದಿದ್ದೇನೆ. ಅವರ ಜೀವನದ ಸುಖ-ಸಂತೋಷಗಳು, ದೈನಂದಿನ ಜೀವನ ಮತ್ತು ಅವರ ಜೀವನದ ಅವಶ್ಯಕತೆಗಳನ್ನು ನೋಡಿದ್ದೇನೆ ಎಂದು ಹೇಳಿದರು.
ಬುಡಕಟ್ಟು ಹಾಗೂ ಆದಿವಾಸಿಗಳ ಜೀವನ ಇಂದಿಗೂ ಸಂಕಷ್ಟದಲ್ಲಿದೆ. ಅವರು ಇಂದಿಗೂ ಕನಿಷ್ಠ ಜೀವನ ನಡೆಸುತ್ತಿದ್ದಾರೆ. ಸರ್ಕಾರ ಅವರುಗಳನ್ನು ಮುಖ್ಯವಾಹಿನಿಗೆ ತರಲು ಯೋಜನೆಗಳನ್ನು ರೂಪಿಸಬೇಕು ಎಂದು ಹೇಳಿದರು.

ಬುಡಕಟ್ಟು ಸಮುದಾಯದ ನಾಯಕರಾದ ಬಿರ್ಸಾ ಮುಂಡಾ ಅಂದಿನ ಬಂಗಾಳ ಹಾಗೂ ಇಂದಿನ ಜಾರ್ಖಂಡ್‌ನಲ್ಲಿ ಬ್ರಿಟಿಷರ ವಿರುದ್ಧ ದಂಗೆ ಏಳುವ ಮೂಲಕ ಬುಡುಕಟ್ಟು ಸಮುದಾಯದಲ್ಲಿ ಪ್ರಖ್ಯಾತಿಯನ್ನು ಪಡೆದಿದ್ದರು. ನಂತರ ಸಾಕಷ್ಟು ಹೋರಾಟಗಳಲ್ಲಿ ಅವರು ಹೆಸರುವಾಸಿಯಾಗಿದ್ದರು ಎಂದರು.

ಅವರ ಜಯಂತಿಯಂದು ಬುಡಕಟ್ಟು ಜನರನ್ನು ಬಳಸಿಕೊಂಡು ಕಾರ್ಯಕ್ರಮ ರೂಪಿಸಿರುವುದು ಸಂತಸದ ಸಂಗತಿ. ಅವರಿಗೂ ಕೂಡ ನಾಗರೀಕ ಪ್ರಪಂಚತ ಬಗ್ಗೆ ಅರಿವು ಮೂಡಿಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಬುಡಕಟ್ಟು ವ್ಯವಹಾರಗಳ ಇಲಾಖೆಯ ಕಾರ್ಯವೈಖರಿ ಪ್ರಶಂಸನೀಯ ಎಂದರು.

ಅರಮನೆ ಮುಂಭಾಗದಿಂದ ಆರಂಭವಾದ ಸಾಂಸ್ಕೃತಿಕ ಮೆರವಣಿಗೆ ನಗರದ ದೇವರಾಜ ಅರಸು ರಸ್ತೆಯ ಮೂಲಕ ಸಾಗಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಅಂತ್ಯಗೊಂಡಿತು. ಬುಡಕಟ್ಟು ಜನರ ಮೆರವಣಿಗೆ ಅಕ್ಷರಶಃ ದಸರಾ ಮೆರವಣಿಗೆಯನ್ನು ನೆನಪಿಸುವಂತಿತ್ತು.

ಕಾರ್ಯಕ್ರಮದಲ್ಲಿ ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಮಿರ್ಲೆ ಶ್ರೀನಿವಾಸಗೌಡ, ಉಪ ಮಹಾಪೌರರಾದ ಡಾ.ಜಿ.ರೂಪ, ಅಧಿಕಾರಿಗಳಾದ ಕಾಂತರಾಜು, ರಾಜೇಶ್ ಜಿ ಗೌಡ ಮುಂತಾದವರು ಭಾಗವಹಿಸಿದ್ದರು.

 

andolana

Recent Posts

ಶೂಟೌಟ್ ಪ್ರಕರಣ | ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆ : ಸಿಎಂ ಡಿ.ಕೆ.ಶಿವಕುಮಾರ್

ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…

5 hours ago

ಮುಂದಿನ ಆಗಸ್ಟ್‌ ಒಳಗೆ ಮೇಕೆದಾಟುಗೆ ಶಂಕುಸ್ಥಾಪನೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…

10 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ

ಮೈಸೂರು: ಮೂವರು ಬೇಟೆಗಾರರ ಎನ್‌ಕೌಂಟರ್‌ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…

11 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಚಿವ ಪುಟ್ಟರಂಗಶೆಟ್ಟಿ ಪ್ರತಿಕ್ರಿಯೆ

ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…

11 hours ago

ಕಾಡಿನಲ್ಲಿ ಗುಂಡಿನ ಮೊರೆತ: ಮೂವರು ಸ್ಥಳದಲ್ಲೇ ಸಾವು- ಉದ್ರಿಕ್ತರಿಂದ ಕಚೇರಿ ಪೀಠೋಪಕರಣ ಧ್ವಂಸ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…

12 hours ago

ಕಾವೇರಿ ಅಭಯಾರಣ್ಯದಲ್ಲಿ ಎನ್‌ಕೌಂಟರ್: ಅಕ್ರಮ ಬೇಟೆ ವೇಳೆ ಗುಂಡಿನ ದಾಳಿ, 3 ಮಂದಿ ಮೃತ್ಯು

ಮಹಾದೇಶ್‌ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…

12 hours ago