ಜಿಲ್ಲೆಗಳು

ಮೈಸೂರು : ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಅರಮನೆ ಅಂಗಳದಲ್ಲಿ ಸಿದ್ಧತೆ

ಮೈಸೂರು: ದೇಶ-ವಿದೇಶಗಳಲ್ಲಿ ಹೆಸರು ಗಳಿಸಿರುವ ಸಂಗೀತ ವಿದ್ವಾಂಸರು, ಗಾಯಕರು ನಡೆಸಿಕೊಡುವ ಅರಮನೆ ದಸರಾ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ವೇದಿಕೆ ನಿರ್ಮಾಣ ಕಾರ್ಯ ಆರಂಭವಾಗಿದ್ದು ಅಂಬಾವಿಲಾಸ ಅರಮನೆ ಎದುರು ವಿಶಾಲವಾದ ವೇದಿಕೆ ನಿರ್ಮಿಸಲು ಕಾರ್ಮಿಕರು ಕೆಲಸ ಆರಂಭಿಸಿದ್ದಾರೆ.
೧೦*೨೦ ಅಡಿ ಅಗಲದ ವೇದಿಕೆ ನಿರ್ಮಾಣ ಮಾಡಲಿದ್ದು, ದಸರಾ ಮಹೋತ್ಸವದ ಬ್ಯಾಕ್‌ಡ್ರಾಪ್ ಹೊಂದಿರಲಿದೆ. ಪರ್ಯಾಯವಾಗಿ ಮಳೆ ಬಂದರೆ ಕಾರ್ಯಕ್ರಮ ನಡೆಸಿ ಕೊಡಲು ಅನುಕೂಲವಾಗುವಂತಹ ಮತ್ತೊಂದು ವಾಟರ್ ಪ್ರೂಫ್ ವೇದಿಕೆ ನಿರ್ಮಾಣ ಮಾಡಲಾಗುತ್ತದೆ. ವಿವಿಐಪಿ, ವಿಐಪಿಗಳು, ಅಧಿಕಾರಿಗಳು, ಪ್ರಾಯೋಜಕತ್ವ ಹೊಂದಿ ದವರಿಗೆ ಪ್ರತ್ಯೇಕ ಗ್ಯಾಲರಿ ನಿರ್ಮಾಣ ಮಾಡಲಾಗಿದೆ. ಎರಡರಿಂದ ಮೂರು ಸಾವಿರ ಮಂದಿಯಷ್ಟು ಕುಳಿತು ಕಾರ್ಯಕ್ರಮ ವೀಕ್ಷಿಸಲು ಆಸನದ ವ್ಯವಸ್ಥೆ ಮಾಡಲಾಗುತ್ತದೆ.
ವೇದಿಕೆ ನಿರ್ಮಾಣದ ಗುತ್ತಿಗೆ ಪಡೆದಿರುವ ಗುತ್ತಿಗೆದಾರರು ಬೇಕಾದ ಎಲ್ಲ ಮೆಟಿರಿಯಲ್‌ಗಳನ್ನು ಲಾರಿಯಲ್ಲಿ ತಂದಿಳಿಸಿದ್ದಾರೆ. ಗಣ್ಯರು ಕೂರಲು ಹೊಸ ಆಸನಗಳನ್ನು ಶೇಖರಿಸಿ ಡಲಾಗಿದೆ. ಮತ್ತೊಂದು ಬದಿಯಲ್ಲಿ ಬ್ಯಾರಿಕೇಡ್‌ಗಳನ್ನು ಹಾಕಲಾಗುತ್ತದೆ. ನಿಗದಿತ ಗ್ಯಾಲರಿಗೆ ಹೋಗುವಂತೆ ಮಾಡಬೇಕಿರುವ ಕಾರಣ ಪ್ರವೇಶ ದ್ವಾರದಲ್ಲೇ ಮೂರು ಸಾಲು ಗಳನ್ನು ಮಾಡಲಿದ್ದು, ಇದರಿಂದಾಗಿ ಗಣ್ಯರ ಸಾಲಿನಲ್ಲಿ ಸಾರ್ವಜನಿಕರು ಕೂರುವುದನ್ನು ತಡೆಯುವಂತೆ ಮಾಡಲಾಗುತ್ತದೆ ಎಂದು ಹೇಳಿದರು.

andolanait

Recent Posts

ಜೆಡಿಎಸ್‌ : ಪಕ್ಷ ಸಂಘಟನೆಗೆ ಫೆ.18 ರಿಂದ ʻಜನರೊಂದಿಗೆ ಜನತಾದಳʻ ಕಾರ್ಯಕ್ರಮ

ಮೈಸೂರು : ಪಕ್ಷ ಸಂಘಟನೆಗಾಗಿ ಯುವ ಜಾ.ದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಫೆ.18 ರಿಂದ ಫೆ.24ರ ವರೆಗೆ ಮೈಸೂರು…

8 mins ago

ರಾಜ್ಯದಲ್ಲಿ ನಾಯಕತ್ವದ ಬದಲಾವಣೆ ಗೊಂದಲಗಳಿಲ್ಲ: ಸಚಿವ ಎಚ್.ಸಿ.ಮಹದೇವಪ್ಪ

ಬೆಂಗಳೂರು: ನಾಯಕತ್ವ ಬದಲಾವಣೆ ಬಗ್ಗೆ ಬಹಿರಂಗ ಹೇಳಿಕೆ ನೀಡದಂತೆ ಕಾಂಗ್ರೆಸ್‌ ಹೈಕಮಾಂಡ್‌ ತಾಕೀತು ಮಾಡಿದರೂ ಕ್ಯಾರೇ ಎನ್ನದ ಸಚಿವರು ಹಾಗೂ…

2 hours ago

ಬಾಗೇಪಲ್ಲಿ ಶಾಸಕ ಎಸ್.ಎನ್‌.ಸುಬ್ಬಾರೆಡ್ಡಿ ಆಯ್ಕೆ ಅಸಿಂಧು: ಹೈಕೋರ್ಟ್‌ ಆದೇಶ

ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ಕಾಂಗ್ರೆಸ್‌ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಅವರಿಗೆ ಹೈಕೋರ್ಟ್‌ನಲ್ಲಿ ಭಾರೀ ಹಿನ್ನಡೆಯಾಗಿದೆ. ಅವರ ಚುನಾವಣಾ ಆಯ್ಕೆಯನ್ನು ಪ್ರಶ್ನಿಸಿ…

2 hours ago

ನಾಳೆ ವರ್ಷದ ಮೊದಲ ಕಂಕಣ ಸೂರ್ಯಗ್ರಹಣ: ಎಲ್ಲೆಲ್ಲಿ ಗೋಚರ?

ಬೆಂಗಳೂರು: ವರ್ಷದ ಮೊದಲ ಕಂಕಣ ಸೂರ್ಯಗ್ರಹಣ ನಾಳೆ ಸಂಭವಿಸಲಿದೆ.. ಇದನ್ನ ರಿಂಗ್ ಆಫ್ ಫೈರ್ ಎಂದು ಕರೆಯಲಾಗುತ್ತದೆ. ಭಾರತದಲ್ಲಿ ಕಂಕಣ…

2 hours ago

ಶಬರಿಮಲೆ ವಿವಾದ: ವಿಚಾರಣೆಗೆ ಸಾಂವಿಧಾನಿಕ ಪೀಠ ರಚನೆ

ನವದೆಹಲಿ: ಕೇರಳದ ಪ್ರಸಿದ್ಧ ಶಬರಿಮಲೆ ದೇವಸ್ಥಾನ ಸೇರಿದಂತೆ ಧಾರ್ಮಿಕ ಸ್ಥಳಗಳಿಗೆ ಮಹಿಳೆಯರ ಪ್ರವೇಶದ ವಿರುದ್ಧ ಮತ್ತು ಧರ್ಮಗಳಲ್ಲಿ ಮಹಿಳೆಯರ ಮೇಲಿನ…

2 hours ago

ಗುಂಡ್ಲುಪೇಟೆ| ಕಾಡಿನಿಂದ‌ ದಾರಿ ತಪ್ಪಿ ಮನೆಗೆ ನುಗ್ಗಿದ ಜಿಂಕೆ ರಕ್ಷಣೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಕಾಡಿನಿಂದ ದಾರಿತಪ್ಪಿ ಬಂದು ಮನೆಗೆ ನುಗ್ಗಿದ್ದ ಜಿಂಕೆಯನ್ನು ರಕ್ಷಣೆ ಮಡುವಲ್ಲಿ ಅರಣ್ಯ…

3 hours ago