ಮೈಸೂರು: ದೇಶ-ವಿದೇಶಗಳಲ್ಲಿ ಹೆಸರು ಗಳಿಸಿರುವ ಸಂಗೀತ ವಿದ್ವಾಂಸರು, ಗಾಯಕರು ನಡೆಸಿಕೊಡುವ ಅರಮನೆ ದಸರಾ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ವೇದಿಕೆ ನಿರ್ಮಾಣ ಕಾರ್ಯ ಆರಂಭವಾಗಿದ್ದು ಅಂಬಾವಿಲಾಸ ಅರಮನೆ ಎದುರು ವಿಶಾಲವಾದ ವೇದಿಕೆ ನಿರ್ಮಿಸಲು ಕಾರ್ಮಿಕರು ಕೆಲಸ ಆರಂಭಿಸಿದ್ದಾರೆ.
೧೦*೨೦ ಅಡಿ ಅಗಲದ ವೇದಿಕೆ ನಿರ್ಮಾಣ ಮಾಡಲಿದ್ದು, ದಸರಾ ಮಹೋತ್ಸವದ ಬ್ಯಾಕ್ಡ್ರಾಪ್ ಹೊಂದಿರಲಿದೆ. ಪರ್ಯಾಯವಾಗಿ ಮಳೆ ಬಂದರೆ ಕಾರ್ಯಕ್ರಮ ನಡೆಸಿ ಕೊಡಲು ಅನುಕೂಲವಾಗುವಂತಹ ಮತ್ತೊಂದು ವಾಟರ್ ಪ್ರೂಫ್ ವೇದಿಕೆ ನಿರ್ಮಾಣ ಮಾಡಲಾಗುತ್ತದೆ. ವಿವಿಐಪಿ, ವಿಐಪಿಗಳು, ಅಧಿಕಾರಿಗಳು, ಪ್ರಾಯೋಜಕತ್ವ ಹೊಂದಿ ದವರಿಗೆ ಪ್ರತ್ಯೇಕ ಗ್ಯಾಲರಿ ನಿರ್ಮಾಣ ಮಾಡಲಾಗಿದೆ. ಎರಡರಿಂದ ಮೂರು ಸಾವಿರ ಮಂದಿಯಷ್ಟು ಕುಳಿತು ಕಾರ್ಯಕ್ರಮ ವೀಕ್ಷಿಸಲು ಆಸನದ ವ್ಯವಸ್ಥೆ ಮಾಡಲಾಗುತ್ತದೆ.
ವೇದಿಕೆ ನಿರ್ಮಾಣದ ಗುತ್ತಿಗೆ ಪಡೆದಿರುವ ಗುತ್ತಿಗೆದಾರರು ಬೇಕಾದ ಎಲ್ಲ ಮೆಟಿರಿಯಲ್ಗಳನ್ನು ಲಾರಿಯಲ್ಲಿ ತಂದಿಳಿಸಿದ್ದಾರೆ. ಗಣ್ಯರು ಕೂರಲು ಹೊಸ ಆಸನಗಳನ್ನು ಶೇಖರಿಸಿ ಡಲಾಗಿದೆ. ಮತ್ತೊಂದು ಬದಿಯಲ್ಲಿ ಬ್ಯಾರಿಕೇಡ್ಗಳನ್ನು ಹಾಕಲಾಗುತ್ತದೆ. ನಿಗದಿತ ಗ್ಯಾಲರಿಗೆ ಹೋಗುವಂತೆ ಮಾಡಬೇಕಿರುವ ಕಾರಣ ಪ್ರವೇಶ ದ್ವಾರದಲ್ಲೇ ಮೂರು ಸಾಲು ಗಳನ್ನು ಮಾಡಲಿದ್ದು, ಇದರಿಂದಾಗಿ ಗಣ್ಯರ ಸಾಲಿನಲ್ಲಿ ಸಾರ್ವಜನಿಕರು ಕೂರುವುದನ್ನು ತಡೆಯುವಂತೆ ಮಾಡಲಾಗುತ್ತದೆ ಎಂದು ಹೇಳಿದರು.
ವಾಷಿಂಗ್ಟನ್ : ಇವತ್ತಿನ ರಾತ್ರಿ ಇರಾನ್ನ ಇಡೀ ನಾಗರಿಕತೆಯೇ ನಾಶವಾಗಲಿದೆ ಎಂದು ಬೆದರಿಕೆ ಒಡ್ಡಿದ ಕೆಲವೇ ಹೊತ್ತಲ್ಲಿ ಅಮೆರಿಕ ಅಧ್ಯಕ್ಷ…
ಬೆಂಗಳೂರು: ಮುಂಬರುವ 2028ರ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಹೇಳಲಾಗಿರುವ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ…
ಇಂಪಾಲ: ಮಣಿಪುರದಲ್ಲಿ ಮನೆಯೊಂದರ ಮೇಲೆ ಬಾಂಬ್ ದಾಳಿ ನಡೆದಿದ್ದು, ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಮಣಿಪುರದ ಬಿಷ್ಣುಪುರ ಜಿಲ್ಲೆಯ…
ಹುಬ್ಬಳ್ಳಿ: ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂಬ ಸಚಿವ ಜಮೀರ್ ಅಹ್ಮಮದ್ ಖಾನ್ ಹೇಳಿಕೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.…
ಬೆಂಗಳೂರು: ನಮ್ಮ ಅಣ್ಣ ಸಿಎಂ ಆಗಬೇಕು ಎಂಬ ಆಸೆ ಇದೆ. ಆದರೆ ಇವತ್ತೇ ಸಿಎಂ ಆಗಬೇಕು ಅಂತೇನಿಲ್ಲ. ಇನ್ನೂ ಸಮಯವಿದೆ…
ಮಡಿಕೇರಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಏಪ್ರಿಲ್.17ರಂದು ಕೊಡಗು ಜಿಲ್ಲೆಗೆ ಭೇಟಿ ನೀಡುವ ಸಾಧ್ಯತೆ ಇದ್ದು, ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಸಂಬಂಧಪಟ್ಟ…