ಜಿಲ್ಲೆಗಳು

ಮೈಸೂರು : ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಅರಮನೆ ಅಂಗಳದಲ್ಲಿ ಸಿದ್ಧತೆ

ಮೈಸೂರು: ದೇಶ-ವಿದೇಶಗಳಲ್ಲಿ ಹೆಸರು ಗಳಿಸಿರುವ ಸಂಗೀತ ವಿದ್ವಾಂಸರು, ಗಾಯಕರು ನಡೆಸಿಕೊಡುವ ಅರಮನೆ ದಸರಾ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ವೇದಿಕೆ ನಿರ್ಮಾಣ ಕಾರ್ಯ ಆರಂಭವಾಗಿದ್ದು ಅಂಬಾವಿಲಾಸ ಅರಮನೆ ಎದುರು ವಿಶಾಲವಾದ ವೇದಿಕೆ ನಿರ್ಮಿಸಲು ಕಾರ್ಮಿಕರು ಕೆಲಸ ಆರಂಭಿಸಿದ್ದಾರೆ.
೧೦*೨೦ ಅಡಿ ಅಗಲದ ವೇದಿಕೆ ನಿರ್ಮಾಣ ಮಾಡಲಿದ್ದು, ದಸರಾ ಮಹೋತ್ಸವದ ಬ್ಯಾಕ್‌ಡ್ರಾಪ್ ಹೊಂದಿರಲಿದೆ. ಪರ್ಯಾಯವಾಗಿ ಮಳೆ ಬಂದರೆ ಕಾರ್ಯಕ್ರಮ ನಡೆಸಿ ಕೊಡಲು ಅನುಕೂಲವಾಗುವಂತಹ ಮತ್ತೊಂದು ವಾಟರ್ ಪ್ರೂಫ್ ವೇದಿಕೆ ನಿರ್ಮಾಣ ಮಾಡಲಾಗುತ್ತದೆ. ವಿವಿಐಪಿ, ವಿಐಪಿಗಳು, ಅಧಿಕಾರಿಗಳು, ಪ್ರಾಯೋಜಕತ್ವ ಹೊಂದಿ ದವರಿಗೆ ಪ್ರತ್ಯೇಕ ಗ್ಯಾಲರಿ ನಿರ್ಮಾಣ ಮಾಡಲಾಗಿದೆ. ಎರಡರಿಂದ ಮೂರು ಸಾವಿರ ಮಂದಿಯಷ್ಟು ಕುಳಿತು ಕಾರ್ಯಕ್ರಮ ವೀಕ್ಷಿಸಲು ಆಸನದ ವ್ಯವಸ್ಥೆ ಮಾಡಲಾಗುತ್ತದೆ.
ವೇದಿಕೆ ನಿರ್ಮಾಣದ ಗುತ್ತಿಗೆ ಪಡೆದಿರುವ ಗುತ್ತಿಗೆದಾರರು ಬೇಕಾದ ಎಲ್ಲ ಮೆಟಿರಿಯಲ್‌ಗಳನ್ನು ಲಾರಿಯಲ್ಲಿ ತಂದಿಳಿಸಿದ್ದಾರೆ. ಗಣ್ಯರು ಕೂರಲು ಹೊಸ ಆಸನಗಳನ್ನು ಶೇಖರಿಸಿ ಡಲಾಗಿದೆ. ಮತ್ತೊಂದು ಬದಿಯಲ್ಲಿ ಬ್ಯಾರಿಕೇಡ್‌ಗಳನ್ನು ಹಾಕಲಾಗುತ್ತದೆ. ನಿಗದಿತ ಗ್ಯಾಲರಿಗೆ ಹೋಗುವಂತೆ ಮಾಡಬೇಕಿರುವ ಕಾರಣ ಪ್ರವೇಶ ದ್ವಾರದಲ್ಲೇ ಮೂರು ಸಾಲು ಗಳನ್ನು ಮಾಡಲಿದ್ದು, ಇದರಿಂದಾಗಿ ಗಣ್ಯರ ಸಾಲಿನಲ್ಲಿ ಸಾರ್ವಜನಿಕರು ಕೂರುವುದನ್ನು ತಡೆಯುವಂತೆ ಮಾಡಲಾಗುತ್ತದೆ ಎಂದು ಹೇಳಿದರು.

andolanait

Recent Posts

ಓದುಗರ ಪತ್ರ: ಅಸಂಘಟಿತ ಕಾರ್ಮಿಕರಿಗೆ ಜೀವನ ಭದ್ರತೆ ಕಲ್ಪಿಸಿ

ದೇಶದ ಸಾವಿರಾರು ಮಂದಿ ಅಸಂಘಟಿತ ಕಾರ್ಮಿಕರು ಹೊಟ್ಟೆಪಾಡಿಗಾಗಿ ಮಾಡುವ ಉದ್ಯೋಗವೇ ಅವರ ಜೀವಕ್ಕೆ ಮುಳುವಾಗುತ್ತಿದೆ. ಭಾನುವಾರ ಉತ್ತರ ಕನ್ನಡ ಜಿಲ್ಲೆಯ…

4 hours ago

ಓದುಗರ ಪತ್ರ: ರೌಂಡ್ ಕ್ಯಾಂಟೀನ್ ಶೀಘ್ರ ಪುನರಾರಂಭವಾಗಲಿ

ಮೈಸೂರಿನ ಮಾನಸ ಗಂಗೋತ್ರಿಯ ರೌಂಡ್ ಕ್ಯಾಂಟೀನ್ ಕಳೆದ ೫೦ ವರ್ಷಗಳಿಂದ ವಿದ್ಯಾರ್ಥಿಗಳನ್ನು, ಬೋಧಕ -ಬೋಧಕೇತರ ಸಿಬ್ಬಂದಿಗಳನ್ನು ಭಾವನಾತ್ಮಕವಾಗಿ ಬೆಸೆದುಕೊಂಡಿದೆ. ಇದು…

4 hours ago

ಓದುಗರ ಪತ್ರ: ದೇವನೂರರ ಸಲಹೆಗಳು ಅನುಷ್ಠಾನಗೊಳ್ಳಲಿ

ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ಕೆ.ಪಿ.ಎಸ್. ಶಾಲೆಗಳ ರೂಪರೇಷೆ ಹಾಗೂ ಸರ್ಕಾರ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಅಗತ್ಯವಿರುವ…

4 hours ago

ಓದುಗರ ಪತ್ರ: ಮಹಿಳೆಯರಿಗೂ ಪ್ರಾತಿನಿಧ್ಯ ದೊರಕಲಿ

ಇತ್ತೀಚಿನ ದಿನಗಳಲ್ಲಿ ನಡೆಯುವ ಸಾರ್ವಜನಿಕ ಸಭೆ ಸಮಾರಂಭಗಳು, ವಿಶ್ವವಿದ್ಯಾನಿಲಯ, ಶಾಲಾ ಕಾಲೇಜು ಮೊದಲಾದ ಕಡೆ ನಡೆಯುವ ಚರ್ಚಾಗೋಷ್ಠಿ , ವಿಚಾರಸಂಕಿರಣಗಳಲ್ಲಿ…

4 hours ago

ಇಂಧನ ಬೆಲೆ ಏರಿಕೆ-ಮೊಸಳೆ ಬಂತು ಮೊಸಳೆ ಕಥೆ!

ರಾಜಾರಾಂ ತಲ್ಲೂರು ಇಂದು ದೇಶ ಅನುಭವಿಸುತ್ತಿರುವ ತೈಲ ಶಾಕ್‌ಗೆ ಸರ್ಕಾರದ ಅನಧಿಕೃತ ಹಸ್ತಕ್ಷೇಪ ಕಾರಣ ಸುವ್ಯವಸ್ಥೆಗೆಂದು ರೂಪಿಸಲಾದ ನಿಯಮಗಳನ್ನು, ಆ…

4 hours ago

‘ಬೇಡು ಹಬ್ಬದ ಹೆಸರಿನಲ್ಲಿ ತೊಂದರೆ ನೀಡಿದಲ್ಲಿ ಕಾನೂನು ಕ್ರಮ’

ನವೀನ್ ಡಿಸೋಜ ಕಂಡ ಕಂಡವರನ್ನು ನಿಂದಿಸಿ, ಹಣ ಸಂಗ್ರಹಿಸುವ ವಿಭಿನ್ನ ಹಬ್ಬ; ಕಾನೂನು ಪಾಲಿಸಲು ಪೊಲೀಸ್ ಇಲಾಖೆ ಸೂಚನೆ  ಮಡಿಕೇರಿ: ಅಶ್ಲೀಲ…

4 hours ago