ಮೇಲುಕೋಟೆ: ಮೇಲುಕೋಟೆ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರನ್ನು ಕ್ಷೇತ್ರದ ಜನರು ಹುಡುಕಿ ಹುಡುಕಿ ಸುಸ್ತಾಗಿದ್ದು, ಓಟು ಹಾಕಿದ ತಪ್ಪಿಗೆ ನಾವೇ ನಮ್ಮದನ್ನು ಹೊಡೆದುಕೊಳ್ಳಬೇಕು ಎನ್ನುವ ಆಕ್ರೋಶ ಭರಿತ ಮಾತುಗಳನ್ನು ಆಡಿಕೊಳ್ಳುತ್ತಿದ್ದಾರೆ.
ಈ ಬಾರಿಯ ವಿಧಾನಸಭೆಯಲ್ಲಿ ತಮ್ಮ ತಂದೆಯವರ ಸಾವಿನ ಸಿಂಪತಿಯನ್ನು ಗಿಟ್ಟಿಸಿಕೊಂಡು ಗೆಲುವು ಕಂಡಿರುವ ದರ್ಶನ್ ಪುಟ್ಟಣ್ಣಯ್ಯ ತಮ್ಮ ಶಾಸಕ ಸ್ಥಾನವನ್ನು ಸರಿಯಾಗಿ ನಿಭಾಸುತ್ತಿಲ್ಲ ಎಲ್ಲದಕ್ಕಿಂತ ಹೆಚ್ಚಾಗಿ ಅವರಿಗೆ ಮೇಲುಕೋಟೆ ಕ್ಷೇತ್ರಕ್ಕಿಂತ ಅಮೇರಿಕಾದಲ್ಲಿರುವ ತಮ್ಮ ವ್ಯವಹಾರದ ಮೇಲೆಯೇ ಹೆಚ್ಚು ಪ್ರೀತಿ ಅಂಥ ಹೇಳುತ್ತಿದ್ದಾರೆ.
ಮೇಲುಕೋಟೆ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ ಶಾಸಕರಾಗಿ ಆಯ್ಕೆಯಾದ ಏಳೇ ತಿಂಗಳಲ್ಲಿ ನಾಲ್ಕನೇ ಬಾರಿ ಅಮೇರಿಕಕ್ಕೆ ತೆರಳಿರುವುದು ಈಗ ವಿವಾದಕ್ಕೆ ಕಾರಣವಾಗಿದೆ.
ವಿಧಾನಸಭೆ ಚುನಾವಣೆಗೂ ಮೊದಲು ಅಮೆರಿಕಾದಲ್ಲಿನ ತನ್ನ ಕಂಪನಿ ಮಾರಾಟ ಮಾಡಿ ಹುಟ್ಟೂರಲ್ಲೇ ಇರುವುದಾಗಿ ದರ್ಶನ್ ಪುಟ್ಟಣಯ್ಯ ಭರವಸೆ ನೀಡಿದ್ದರು.
ಆದಾದ ಬಳಿಕ ಅವರು ಅಮೇರಿಕಾಕ್ಕೆ ಹೋಗಿದ್ದರು, ಬಳಿಕ ಜನತೆಯ ಆಕ್ರೋಶಕ್ಕೆ ಕಾರಣವಾಗಿದ್ದರು. ಆದಾದ ಬಳಿಕ ಅವರು ತಮ್ಮ ಜನತೆ ಬಳಿ ಇನ್ಮುಂದೆ ಹೀಗೆ ಆಗುವುದಿಲ್ಲ ಅಂತ ಹೇಳಿದ್ದರು. ಆದರೆ ತಮ್ಮ ಮಾತನ್ನು ಮರೆತಿರುವ ಶಾಸಕರು ಈಗ ಮತ್ತೆ ಅಮೇರಿಕಾಕ್ಕೆ ಹೋಗಿರುವುದು ಜನತೆಯಲ್ಲಿ ಬೇಸರ ಮೂಡಿಸಿದೆ.
ಮೈಸೂರು: ಬದಲಿ ನಿವೇಶನ ಹಂಚಿಕೆ, ೫೦:೫೦ ಅನುಪಾತದಲ್ಲಿ ನಿವೇಶನ ಅಕ್ರಮ ಹಂಚಿಕೆ ಹಗರಣದಿಂದಾಗಿ ಇಡೀ ರಾಜ್ಯದ ಗಮನ ಸೆಳೆದಿರುವ ಮೈಸೂರು…
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜುಂಬೂ ಸವಾರಿ ಸಾಗುವ ಮಾರ್ಗದಲ್ಲಿ ಕಳೆದ ಎರಡೂ ವರ್ಷಗಳಿಂದ ಬಿದ್ದಿದ್ದ ಬೃಹತ್ ಮರದ ಕಾಂಡವನ್ನು…
ಮೈಸೂರು: ಈ ಬಾರಿಯ ದಸರಾ ಮಹೋತ್ಸವದ ಜಂಬೂ ಸವಾರಿಯನ್ನು ವೀಕ್ಷಿಸಲು ಆಗಮಿಸಿದ ಎಲ್ಲರಿಗೂ ಚಿನ್ನದ ಅಂಬಾರಿ ನೋಡುವ ಅವಕಾಶ ಸಿಗಬೇಕು…
ಮೈಸೂರು: ಸಾಂಸ್ಕೃತಿಕ ರಾಜಧಾನಿ, ಅರಮನೆಗಳ ನಗರಿ ಎಂದು ಕರೆಯುವ ಮೈಸೂರನ್ನು ಗರಡಿ ಮನೆಗಳ ನಗರಿ ಎಂದೂ ಇತ್ತೀಚಿನ ವರ್ಷಗಳಲ್ಲಿ ಕರೆಯುವುದು…
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…