ಜಿಲ್ಲೆಗಳು

ಕ್ಷೇತ್ರ ಬಿಟ್ಟು ಅಮೇರಿಕಕ್ಕೆ ಹಾರಿದ ಶಾಸಕರ ವಿರುದ್ಧ ಮತದಾರರ ಆಕ್ರೋಶ!

ಮೇಲುಕೋಟೆ: ಮೇಲುಕೋಟೆ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರನ್ನು ಕ್ಷೇತ್ರದ ಜನರು ಹುಡುಕಿ ಹುಡುಕಿ ಸುಸ್ತಾಗಿದ್ದು, ಓಟು ಹಾಕಿದ ತಪ್ಪಿಗೆ ನಾವೇ ನಮ್ಮದನ್ನು ಹೊಡೆದುಕೊಳ್ಳಬೇಕು ಎನ್ನುವ ಆಕ್ರೋಶ ಭರಿತ ಮಾತುಗಳನ್ನು ಆಡಿಕೊಳ್ಳುತ್ತಿದ್ದಾರೆ.

ಈ ಬಾರಿಯ ವಿಧಾನಸಭೆಯಲ್ಲಿ ತಮ್ಮ ತಂದೆಯವರ ಸಾವಿನ ಸಿಂಪತಿಯನ್ನು ಗಿಟ್ಟಿಸಿಕೊಂಡು ಗೆಲುವು ಕಂಡಿರುವ ದರ್ಶನ್ ಪುಟ್ಟಣ್ಣಯ್ಯ ತಮ್ಮ ಶಾಸಕ ಸ್ಥಾನವನ್ನು ಸರಿಯಾಗಿ ನಿಭಾಸುತ್ತಿಲ್ಲ ಎಲ್ಲದಕ್ಕಿಂತ ಹೆಚ್ಚಾಗಿ ಅವರಿಗೆ ಮೇಲುಕೋಟೆ ಕ್ಷೇತ್ರಕ್ಕಿಂತ ಅಮೇರಿಕಾದಲ್ಲಿರುವ ತಮ್ಮ ವ್ಯವಹಾರದ ಮೇಲೆಯೇ ಹೆಚ್ಚು ಪ್ರೀತಿ ಅಂಥ ಹೇಳುತ್ತಿದ್ದಾರೆ.

ಮೇಲುಕೋಟೆ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ ಶಾಸಕರಾಗಿ ಆಯ್ಕೆಯಾದ ಏಳೇ ತಿಂಗಳಲ್ಲಿ ನಾಲ್ಕನೇ ಬಾರಿ ಅಮೇರಿಕಕ್ಕೆ ತೆರಳಿರುವುದು ಈಗ ವಿವಾದಕ್ಕೆ ಕಾರಣವಾಗಿದೆ.

ವಿಧಾನಸಭೆ ಚುನಾವಣೆಗೂ ಮೊದಲು ಅಮೆರಿಕಾದಲ್ಲಿನ ತನ್ನ ಕಂಪನಿ ಮಾರಾಟ ಮಾಡಿ ಹುಟ್ಟೂರಲ್ಲೇ ಇರುವುದಾಗಿ ದರ್ಶನ್ ಪುಟ್ಟಣಯ್ಯ ಭರವಸೆ ನೀಡಿದ್ದರು.

ಆದಾದ ಬಳಿಕ ಅವರು ಅಮೇರಿಕಾಕ್ಕೆ ಹೋಗಿದ್ದರು, ಬಳಿಕ ಜನತೆಯ ಆಕ್ರೋಶಕ್ಕೆ ಕಾರಣವಾಗಿದ್ದರು. ಆದಾದ ಬಳಿಕ ಅವರು ತಮ್ಮ ಜನತೆ ಬಳಿ ಇನ್ಮುಂದೆ ಹೀಗೆ ಆಗುವುದಿಲ್ಲ ಅಂತ ಹೇಳಿದ್ದರು. ಆದರೆ ತಮ್ಮ ಮಾತನ್ನು ಮರೆತಿರುವ ಶಾಸಕರು ಈಗ ಮತ್ತೆ ಅಮೇರಿಕಾಕ್ಕೆ ಹೋಗಿರುವುದು ಜನತೆಯಲ್ಲಿ ಬೇಸರ ಮೂಡಿಸಿದೆ.

andolanait

Recent Posts

ಮೇ-1ರಿಂದ ಮೈಸೂರು-ಹೈದರಾಬಾದ್‌ಗೆ ಮತ್ತೊಂದು ವಿಮಾನ ಸಂಚಾರ: ಯದುವೀರ್

ಮೈಸೂರು : ಸಾಂಸ್ಕ ತಿಕ ನಗರಿಯ ಜನತೆಯ ಅನುಕೂಲಕ್ಕಾಗಿ ಮೈಸೂರಿನಿಂದ ಮುತ್ತಿನ ನಗರಿ ಹೈದರಾಬಾದ್‌ಗೆ ಮತ್ತೊಂದು ವಿಮಾನ ಸಂಚಾರ ಅತಿ…

8 hours ago

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ತಿದ್ದುಪಡಿ ಮಸೂದೆಗೆ ಸೋಲು

ನವದೆಹಲಿ : ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ.33 ಮೀಸಲಾತಿ ನೀಡುವ ಮಹಿಳಾ ಮೀಸಲಾತಿ ತಿದ್ದುಪಡಿ ಮಸೂದೆ (Women’s Reservation Bill) ಭಾರೀ…

9 hours ago

ಹೊರ್ಮುಜ್ ಜಲಸಂಧಿ ಹಡಗುಗಳ ಸಂಚಾರಕ್ಕೆ ಮುಕ್ತ ; ಇರಾನ್‌ ಮಹತ್ವದ ಘೋಷಣೆ,

ಟೆಹ್ರಾರ್‌ : ಇರಾನ್ ಹೊರ್ಮುಜ್ ಜಲಸಂಧಿಯಲ್ಲಿ ವಾಣಿಜ್ಯ ಹಡಗುಗಳ ಸಂಚಾರಕ್ಕೆ ಪೂರ್ಣ ಮುಕ್ತಿ ನೀಡಿದೆ ಎಂದು ಮಹತ್ವದ ಘೋಷಣೆ ಮಾಡಿದೆ.…

9 hours ago

ಹನೂರು | ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬೃಹತ್‌ ಪ್ರತಿಭಟನೆ

ಹನೂರು : ಕುಡಿಯುವ ನೀರು, ಇ-ಸ್ವತ್ತು, ಪೋಡಿ ಹಾಗೂ ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ಸೇರಿ ಹಲವು ಬೇಡಿಕೆಗಳನ್ನು ಈಡೇರಿಸುವಂತೆ…

10 hours ago

ಮೈಸೂರಿನ ರೈಲ್ವೆ ಗೂಡ್ಸ್‌ ಶೆಡ್‌ ಸ್ಥಾಳಾಂತಕ್ಕೆ ಹುನ್ನಾರ : ಎಂ.ಲಕ್ಷ್ಮಣ್‌ ಆರೋಪ

ಮೈಸೂರು : ನಗರದಲ್ಲಿರುವ ರೈಲ್ವೇ ಗೂಡ್ಸ್‌ ಶೆಡನ್ನು ಪಾಂಡವಪುರಕ್ಕೆ ಸ್ಥಳಾಂತರಿಸಲು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ವಿ.ಸೋಮಣ್ಣ ಅವರು ಹುನ್ನಾರ…

10 hours ago

ಮಹಿಳಾ ಮೀಸಲಾತಿ ಕಾಯ್ದೆ ಏ.16 ರಿಂದಲೇ ಜಾರಿ

ಕಾನೂನು ಸಚಿವಾಲಯದಿಂದ ಅಧಿಸೂಚನೆ ಪ್ರಕಟ ನವದೆಹಲಿ: ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಸ್ಥಾನ ಒದಗಿಸುವ ಮಹಿಳಾ ಮೀಸಲಾತಿ…

10 hours ago