ಮೇಲುಕೋಟೆ: ಮೇಲುಕೋಟೆ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರನ್ನು ಕ್ಷೇತ್ರದ ಜನರು ಹುಡುಕಿ ಹುಡುಕಿ ಸುಸ್ತಾಗಿದ್ದು, ಓಟು ಹಾಕಿದ ತಪ್ಪಿಗೆ ನಾವೇ ನಮ್ಮದನ್ನು ಹೊಡೆದುಕೊಳ್ಳಬೇಕು ಎನ್ನುವ ಆಕ್ರೋಶ ಭರಿತ ಮಾತುಗಳನ್ನು ಆಡಿಕೊಳ್ಳುತ್ತಿದ್ದಾರೆ.
ಈ ಬಾರಿಯ ವಿಧಾನಸಭೆಯಲ್ಲಿ ತಮ್ಮ ತಂದೆಯವರ ಸಾವಿನ ಸಿಂಪತಿಯನ್ನು ಗಿಟ್ಟಿಸಿಕೊಂಡು ಗೆಲುವು ಕಂಡಿರುವ ದರ್ಶನ್ ಪುಟ್ಟಣ್ಣಯ್ಯ ತಮ್ಮ ಶಾಸಕ ಸ್ಥಾನವನ್ನು ಸರಿಯಾಗಿ ನಿಭಾಸುತ್ತಿಲ್ಲ ಎಲ್ಲದಕ್ಕಿಂತ ಹೆಚ್ಚಾಗಿ ಅವರಿಗೆ ಮೇಲುಕೋಟೆ ಕ್ಷೇತ್ರಕ್ಕಿಂತ ಅಮೇರಿಕಾದಲ್ಲಿರುವ ತಮ್ಮ ವ್ಯವಹಾರದ ಮೇಲೆಯೇ ಹೆಚ್ಚು ಪ್ರೀತಿ ಅಂಥ ಹೇಳುತ್ತಿದ್ದಾರೆ.
ಮೇಲುಕೋಟೆ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ ಶಾಸಕರಾಗಿ ಆಯ್ಕೆಯಾದ ಏಳೇ ತಿಂಗಳಲ್ಲಿ ನಾಲ್ಕನೇ ಬಾರಿ ಅಮೇರಿಕಕ್ಕೆ ತೆರಳಿರುವುದು ಈಗ ವಿವಾದಕ್ಕೆ ಕಾರಣವಾಗಿದೆ.
ವಿಧಾನಸಭೆ ಚುನಾವಣೆಗೂ ಮೊದಲು ಅಮೆರಿಕಾದಲ್ಲಿನ ತನ್ನ ಕಂಪನಿ ಮಾರಾಟ ಮಾಡಿ ಹುಟ್ಟೂರಲ್ಲೇ ಇರುವುದಾಗಿ ದರ್ಶನ್ ಪುಟ್ಟಣಯ್ಯ ಭರವಸೆ ನೀಡಿದ್ದರು.
ಆದಾದ ಬಳಿಕ ಅವರು ಅಮೇರಿಕಾಕ್ಕೆ ಹೋಗಿದ್ದರು, ಬಳಿಕ ಜನತೆಯ ಆಕ್ರೋಶಕ್ಕೆ ಕಾರಣವಾಗಿದ್ದರು. ಆದಾದ ಬಳಿಕ ಅವರು ತಮ್ಮ ಜನತೆ ಬಳಿ ಇನ್ಮುಂದೆ ಹೀಗೆ ಆಗುವುದಿಲ್ಲ ಅಂತ ಹೇಳಿದ್ದರು. ಆದರೆ ತಮ್ಮ ಮಾತನ್ನು ಮರೆತಿರುವ ಶಾಸಕರು ಈಗ ಮತ್ತೆ ಅಮೇರಿಕಾಕ್ಕೆ ಹೋಗಿರುವುದು ಜನತೆಯಲ್ಲಿ ಬೇಸರ ಮೂಡಿಸಿದೆ.
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…
ಚಂದ್ರಶೇಖರ್ ಮೂರ್ತಿ ಕೆ.ಎಸ್. ಊರಿಂದ ಊರಿಗೆ ಬಸ್ ಹತ್ತಿ ಇಳಿದು ದುಡಿಮೆ ಮಾಡೋದು ಇದೆಯಲ್ಲ ಅದು ಅನುಭವಿಸುವ ಊರು ಬಿಟ್ಟ…