ಮೇಲುಕೋಟೆ: ಮೇಲುಕೋಟೆ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರನ್ನು ಕ್ಷೇತ್ರದ ಜನರು ಹುಡುಕಿ ಹುಡುಕಿ ಸುಸ್ತಾಗಿದ್ದು, ಓಟು ಹಾಕಿದ ತಪ್ಪಿಗೆ ನಾವೇ ನಮ್ಮದನ್ನು ಹೊಡೆದುಕೊಳ್ಳಬೇಕು ಎನ್ನುವ ಆಕ್ರೋಶ ಭರಿತ ಮಾತುಗಳನ್ನು ಆಡಿಕೊಳ್ಳುತ್ತಿದ್ದಾರೆ.
ಈ ಬಾರಿಯ ವಿಧಾನಸಭೆಯಲ್ಲಿ ತಮ್ಮ ತಂದೆಯವರ ಸಾವಿನ ಸಿಂಪತಿಯನ್ನು ಗಿಟ್ಟಿಸಿಕೊಂಡು ಗೆಲುವು ಕಂಡಿರುವ ದರ್ಶನ್ ಪುಟ್ಟಣ್ಣಯ್ಯ ತಮ್ಮ ಶಾಸಕ ಸ್ಥಾನವನ್ನು ಸರಿಯಾಗಿ ನಿಭಾಸುತ್ತಿಲ್ಲ ಎಲ್ಲದಕ್ಕಿಂತ ಹೆಚ್ಚಾಗಿ ಅವರಿಗೆ ಮೇಲುಕೋಟೆ ಕ್ಷೇತ್ರಕ್ಕಿಂತ ಅಮೇರಿಕಾದಲ್ಲಿರುವ ತಮ್ಮ ವ್ಯವಹಾರದ ಮೇಲೆಯೇ ಹೆಚ್ಚು ಪ್ರೀತಿ ಅಂಥ ಹೇಳುತ್ತಿದ್ದಾರೆ.
ಮೇಲುಕೋಟೆ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ ಶಾಸಕರಾಗಿ ಆಯ್ಕೆಯಾದ ಏಳೇ ತಿಂಗಳಲ್ಲಿ ನಾಲ್ಕನೇ ಬಾರಿ ಅಮೇರಿಕಕ್ಕೆ ತೆರಳಿರುವುದು ಈಗ ವಿವಾದಕ್ಕೆ ಕಾರಣವಾಗಿದೆ.
ವಿಧಾನಸಭೆ ಚುನಾವಣೆಗೂ ಮೊದಲು ಅಮೆರಿಕಾದಲ್ಲಿನ ತನ್ನ ಕಂಪನಿ ಮಾರಾಟ ಮಾಡಿ ಹುಟ್ಟೂರಲ್ಲೇ ಇರುವುದಾಗಿ ದರ್ಶನ್ ಪುಟ್ಟಣಯ್ಯ ಭರವಸೆ ನೀಡಿದ್ದರು.
ಆದಾದ ಬಳಿಕ ಅವರು ಅಮೇರಿಕಾಕ್ಕೆ ಹೋಗಿದ್ದರು, ಬಳಿಕ ಜನತೆಯ ಆಕ್ರೋಶಕ್ಕೆ ಕಾರಣವಾಗಿದ್ದರು. ಆದಾದ ಬಳಿಕ ಅವರು ತಮ್ಮ ಜನತೆ ಬಳಿ ಇನ್ಮುಂದೆ ಹೀಗೆ ಆಗುವುದಿಲ್ಲ ಅಂತ ಹೇಳಿದ್ದರು. ಆದರೆ ತಮ್ಮ ಮಾತನ್ನು ಮರೆತಿರುವ ಶಾಸಕರು ಈಗ ಮತ್ತೆ ಅಮೇರಿಕಾಕ್ಕೆ ಹೋಗಿರುವುದು ಜನತೆಯಲ್ಲಿ ಬೇಸರ ಮೂಡಿಸಿದೆ.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…