ಚಾಮರಾಜನಗರ :ಡಾ. ಬಿ. ಆರ್. ಅಂಬೇಡ್ಕರ್ ಭವನದ ರಸ್ತೆಯಲ್ಲಿ ಹುಲಿ ಉಗುರುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ನಗರದ ಸೈಬರ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ನಗರದ ಕೆಪಿ ಮೋಹಲ್ಲಾದ ಫರ್ಹಾದ್ ಉರ್ ರೆಹಮಾನ್(33) ಮತ್ತು ಯಾಸಿರ್ ಅರಾಫತ್ (19) ಬಂದಿದ್ದರು ಇವರಿಂದ ಎಂಟು ಹುಲಿ ಉಗುರುಗಳನ್ನು ವಶಕೆ ಪಡೆಯಲಾಗಿದೆ.
ಬುಧವಾರ ಬೆಳಗ್ಗೆ ಖಚಿತ ಮಾಹಿತಿ ಆಧರಿಸಿ ನಗರದ ಸೈಬರ್ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಮಹದೇವ ಶೆಟ್ಟಿ, ಸಬ್ ಇನ್ಸ್ ಪೆಕ್ಟರ್ ಮಾದೇಶ ಹಾಗೂ ಸಿಬ್ಬಂದಿ ಖರೀದಿದಾರರಂತೆ ನಟಿಸಿ ದಾಳಿ ಮಾಡಿದರು. ಬಳಿಕ ಆರೋಪಿಗಳನ್ನು ವಸತಿ ಪಡೆದು 3.50 ಲಕ್ಷ ಬೆಲೆಬಾಳುವ ಎಂಟು ಹುಲಿ ಉಗುರುಗಳನ್ನು ವಶಪಡಿಸಿಕೊಂಡರು. ಈ ಸಂಬಂಧ ಪ್ರಕರಣ ದಾಖಲಿಸಿ ಆರೋಪಿಗಳನ್ನು ಚಾಮರಾಜನಗರ ವಲಯಾರಣ್ಯಾಧಿಕಾರಿ ವಸಕ್ಕೆ ನೀಡಿದ್ದಾರೆ. ಕಾರ್ಯಚರಣೆಯಲ್ಲಿ ಸೈಬರ್ ಠಾಣೆಯ ಸಿಬ್ಬಂದಿ ರಾಜು, ಮಂಜುನಾಥ್, ಜಗದೀಶ್ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿಯಾದ ಹೇಮಂತ್ ಕುಮಾರ್, ಜಗದೀಶ್ ಪಾಲ್ಗೊಂಡಿದ್ದರು.
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…