Mysore
25
overcast clouds

Social Media

ಸೋಮವಾರ, 11 ಮೇ 2026
Light
Dark

ಡಿ ಎಸ್ ರಮೇಶ್ ಚಾ.ನಗರ ನೂತನ ಜಿಲ್ಲಾಧಿಕಾರಿ

ಚಾಮರಾಜನಗರ: ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದ್ದು, ನೂತನ ಜಿಲ್ಲಾಧಿಕಾರಿಯಾಗಿ ಡಿ. ಎಸ್. ರಮೇಶ್ ನೇಮಕವಾಗಿದ್ದಾರೆ.
ಡಿ.ಎಸ್. ರಮೇಶ್ ಪ್ರಸ್ತುತ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅವರನ್ನು ಚಾಮರಾಜನಗರ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ. ರಮೇಶ್ ಅವರು 2010ನೇ ಬ್ಯಾಚಿನ ಕರ್ನಾಟಕ ಕೇಡರ್ ಐಎಎಸ್ ಅಧಿಕಾರಿ.
ಪಸ್ತುತ ಜಿಲ್ಲಾಧಿಕಾರಿ ಚಾರುಲತಾ ಅವರಿಗೆ ಇನ್ನೂ ಸ್ಥಳ ತೋರಿಸಿಲ್ಲ. ಚಾರುಲತಾ ಸೋಮಲ್ ಅವರು 2021ರ ನವೆಂಬರ್ 15ರಂದು ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು. ಒಂದು ವರ್ಷ ತುಂಬುವ ಮೊದಲೇ ಅವರನ್ನು ವರ್ಗಾವಣೆ ಮಾಡಲಾಗಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!