ಜಿಲ್ಲೆಗಳು

ದಲಿತರ ರ‍್ಯಾಲಿಗೆ 3 ಸಾವಿರ ಮಂದಿ: ಮಹದೇವ

ಹುಣಸೂರು : ಡಾ.ಬಾಬಾ ಸಾಹೇಬ್ ಅಂಬೇಡ್ಕರ್‌ರವರ ೬೬ನೇ ಪರಿನಿರ್ವಾಣ ದಿನದ ಅಂಗವಾಗಿ ದಲಿತ ಸಂಘಟನೆಗಳ ಐಕ್ಯತಾ ಸಮಿತಿಯು ‘ದಲಿತರ ಸಾಂಸ್ಕೃತಿಕ ಪ್ರತಿರೋಧ’ ಹೆಸರಿನಲ್ಲಿ ಬೆಂಗಳೂರಿನಲ್ಲಿ ಬೃಹತ್ ರ‍್ಯಾಲಿ ನಡೆಸಲಿದ್ದು, ಈ ರ‍್ಯಾಲಿಗೆ  ಹುಣಸೂರಿನಿಂದ ಸುಮಾರು ಮೂರು ಸಾವಿರ ಜನರು ತೆರಳಲಿದ್ದಾರೆ ಎಂದು ದಲಿತ ಸಂಘಟನೆಗಳ ಸಮನ್ವಯ ಸಮಿತಿಯ ಸಂಚಾಲಕರಾದ ಜೆ.ಮಹದೇವ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾನತೆ, ಸಹೋದರತೆ, ಸಾಮಾಜಿಕ ನ್ಯಾಯ ಮತ್ತು ಮೀಸಲಾತಿಯ ಆಶಯವನ್ನು ನಾಶಕ್ಕೆ ಮುಂದಾಗಿರುವ ಬಿಜೆಪಿ ಸರ್ಕಾರದ ದುರಾಡಳಿತ ವಿರುದ್ಧವಾಗಿ ಹಾಗೂ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ರಕ್ಷಣೆಗಾಗಿ ‘ದಲಿತರ ಸಾಂಸ್ಕೃತಿಕ ಪ್ರತಿರೋಧ’ ಹೆಸರಿನಲ್ಲಿ ದಲಿತರ ಬೃಹತ್ ಐತಿಹಾಸಿಕ ಸಮಾವೇಶ ನಡೆಸಲಾಗುತ್ತಿದೆ ಎಂದರು.
ಇಡೀ ದೇಶವನ್ನು ಕಾರ್ಪೊರೇಟ್ ಕಂಪನಿಗಳ ಕೈಗಿಟ್ಟು, ದೇಶವನ್ನೇ ಖಾಸಗೀಕರಣ ಮಾಡಿ ಮೀಸಲಾತಿಯ ಆಶಯವನ್ನೇ ನಿರ್ನಾಮ ಮಾಡಿ, ದಲಿತರ ಅಭಿವೃದ್ಧಿಯನ್ನು ಸಾರಾಸಗಟಾಗಿ ನಿರ್ಲಕ್ಷಿಸಲಾಗುತ್ತಿದೆ. ಹಾಗಾಗಿ ದಲಿತರು ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಉಳಿವಿಗಾಗಿ ಹೋರಾಟ ಮಾಡುವ ಅನಿವಾರ್ಯತೆ ಬಂದೊದಗಿದೆ ಎಂದರು.
ದಸಂಸ ಸಂಚಾಲಕರಾದ ರತ್ನಪುರಿ ಪುಟ್ಟಸ್ವಾಮಿ, ದೇವರಾಜ ಕಟ್ಟೆಮಳಲವಾಡಿ, ಕೃಷ್ಣ ಕೊಳಘಟ್ಟ, ರಾಮಕೃಷ್ಣ ಅತ್ತಿಗುಪ್ಪೆ, ಪ್ರಕಾಶ್ ಮುತ್ತುರಾಯನಹೊಸಳ್ಳಿ ಹಾಗೂ ಹಿರಿಯ ದಲಿತ ಮುಖಂಡರಾದ ವರದರಾಜು, ಶಿವರಾಜ್, ರಾಜು ಹಾಜರಿದ್ದರು.

andolanait

Recent Posts

ಮಳವಳ್ಳಿ | ಚಿರತೆ ಪ್ರತ್ಯಕ್ಷ ; ಆತಂಕ

ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…

5 hours ago

ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…

9 hours ago

ಮಲ್ಲಿಕಾರ್ಜುನ್‌ ಖರ್ಗೆ, ಎಂ.ನಾಗರಾಜ್‌ ಸಹಿತ ನಾಲ್ವರು ರಾಜ್ಯಸಭೆಗೆ ಅವಿರೋಧ ಆಯ್ಕೆ

ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…

10 hours ago

ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ 11ನೇ ನೀತಿ ಆಯೋಗದ ಸಭೆ

ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…

10 hours ago

ಕಾಂಗ್ರೆಸ್‌ ಶಾಸಕ ಷಡಕ್ಷರಿ ಆರೋಗ್ಯ ಸ್ಥಿತಿ ಗಂಭೀರ

ನವದೆಹಲಿ: ತಿಪಟೂರು ಕಾಂಗ್ರೆಸ್‌ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…

15 hours ago

ಕೇರಳದಲ್ಲಿ ಮತ್ತೆ ನಿಫಾ ವೈರಸ್‌ ಪತ್ತೆ: ಆರೋಗ್ಯ ಇಲಾಖೆಯಿಂದ ಹೈಅಲರ್ಟ್‌

ಕೋಯಿಕ್ಕೋಡ್:‌ ವಯನಾಡು, ಕೋಯಿಕ್ಕೋಡ್‌ನಲ್ಲಿ ಶಿಗೆಲ್ಲಾ ವೈರಸ್‌ ಸೋಂಕು ಹರಡಿರುವ ನಡುವೆ ನಿಫಾ ವೈರಸ್‌ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ…

15 hours ago