ಹುಣಸೂರು : ಡಾ.ಬಾಬಾ ಸಾಹೇಬ್ ಅಂಬೇಡ್ಕರ್ರವರ ೬೬ನೇ ಪರಿನಿರ್ವಾಣ ದಿನದ ಅಂಗವಾಗಿ ದಲಿತ ಸಂಘಟನೆಗಳ ಐಕ್ಯತಾ ಸಮಿತಿಯು ‘ದಲಿತರ ಸಾಂಸ್ಕೃತಿಕ ಪ್ರತಿರೋಧ’ ಹೆಸರಿನಲ್ಲಿ ಬೆಂಗಳೂರಿನಲ್ಲಿ ಬೃಹತ್ ರ್ಯಾಲಿ ನಡೆಸಲಿದ್ದು, ಈ ರ್ಯಾಲಿಗೆ ಹುಣಸೂರಿನಿಂದ ಸುಮಾರು ಮೂರು ಸಾವಿರ ಜನರು ತೆರಳಲಿದ್ದಾರೆ ಎಂದು ದಲಿತ ಸಂಘಟನೆಗಳ ಸಮನ್ವಯ ಸಮಿತಿಯ ಸಂಚಾಲಕರಾದ ಜೆ.ಮಹದೇವ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾನತೆ, ಸಹೋದರತೆ, ಸಾಮಾಜಿಕ ನ್ಯಾಯ ಮತ್ತು ಮೀಸಲಾತಿಯ ಆಶಯವನ್ನು ನಾಶಕ್ಕೆ ಮುಂದಾಗಿರುವ ಬಿಜೆಪಿ ಸರ್ಕಾರದ ದುರಾಡಳಿತ ವಿರುದ್ಧವಾಗಿ ಹಾಗೂ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ರಕ್ಷಣೆಗಾಗಿ ‘ದಲಿತರ ಸಾಂಸ್ಕೃತಿಕ ಪ್ರತಿರೋಧ’ ಹೆಸರಿನಲ್ಲಿ ದಲಿತರ ಬೃಹತ್ ಐತಿಹಾಸಿಕ ಸಮಾವೇಶ ನಡೆಸಲಾಗುತ್ತಿದೆ ಎಂದರು.
ಇಡೀ ದೇಶವನ್ನು ಕಾರ್ಪೊರೇಟ್ ಕಂಪನಿಗಳ ಕೈಗಿಟ್ಟು, ದೇಶವನ್ನೇ ಖಾಸಗೀಕರಣ ಮಾಡಿ ಮೀಸಲಾತಿಯ ಆಶಯವನ್ನೇ ನಿರ್ನಾಮ ಮಾಡಿ, ದಲಿತರ ಅಭಿವೃದ್ಧಿಯನ್ನು ಸಾರಾಸಗಟಾಗಿ ನಿರ್ಲಕ್ಷಿಸಲಾಗುತ್ತಿದೆ. ಹಾಗಾಗಿ ದಲಿತರು ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಉಳಿವಿಗಾಗಿ ಹೋರಾಟ ಮಾಡುವ ಅನಿವಾರ್ಯತೆ ಬಂದೊದಗಿದೆ ಎಂದರು.
ದಸಂಸ ಸಂಚಾಲಕರಾದ ರತ್ನಪುರಿ ಪುಟ್ಟಸ್ವಾಮಿ, ದೇವರಾಜ ಕಟ್ಟೆಮಳಲವಾಡಿ, ಕೃಷ್ಣ ಕೊಳಘಟ್ಟ, ರಾಮಕೃಷ್ಣ ಅತ್ತಿಗುಪ್ಪೆ, ಪ್ರಕಾಶ್ ಮುತ್ತುರಾಯನಹೊಸಳ್ಳಿ ಹಾಗೂ ಹಿರಿಯ ದಲಿತ ಮುಖಂಡರಾದ ವರದರಾಜು, ಶಿವರಾಜ್, ರಾಜು ಹಾಜರಿದ್ದರು.
ನವದೆಹಲಿ: ಜಂತರ್ ಮಂತರ್ ಹಾಗೂ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳ ಮೇಲೆ ನಡೆದ ಪೊಲೀಸರ ದೌರ್ಜನ್ಯ ಮತ್ತು…
ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ನಂತೆ 15…
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…
ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…
ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…