ಜಿಲ್ಲೆಗಳು

ದಲಿತರ ರ‍್ಯಾಲಿಗೆ 3 ಸಾವಿರ ಮಂದಿ: ಮಹದೇವ

ಹುಣಸೂರು : ಡಾ.ಬಾಬಾ ಸಾಹೇಬ್ ಅಂಬೇಡ್ಕರ್‌ರವರ ೬೬ನೇ ಪರಿನಿರ್ವಾಣ ದಿನದ ಅಂಗವಾಗಿ ದಲಿತ ಸಂಘಟನೆಗಳ ಐಕ್ಯತಾ ಸಮಿತಿಯು ‘ದಲಿತರ ಸಾಂಸ್ಕೃತಿಕ ಪ್ರತಿರೋಧ’ ಹೆಸರಿನಲ್ಲಿ ಬೆಂಗಳೂರಿನಲ್ಲಿ ಬೃಹತ್ ರ‍್ಯಾಲಿ ನಡೆಸಲಿದ್ದು, ಈ ರ‍್ಯಾಲಿಗೆ  ಹುಣಸೂರಿನಿಂದ ಸುಮಾರು ಮೂರು ಸಾವಿರ ಜನರು ತೆರಳಲಿದ್ದಾರೆ ಎಂದು ದಲಿತ ಸಂಘಟನೆಗಳ ಸಮನ್ವಯ ಸಮಿತಿಯ ಸಂಚಾಲಕರಾದ ಜೆ.ಮಹದೇವ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾನತೆ, ಸಹೋದರತೆ, ಸಾಮಾಜಿಕ ನ್ಯಾಯ ಮತ್ತು ಮೀಸಲಾತಿಯ ಆಶಯವನ್ನು ನಾಶಕ್ಕೆ ಮುಂದಾಗಿರುವ ಬಿಜೆಪಿ ಸರ್ಕಾರದ ದುರಾಡಳಿತ ವಿರುದ್ಧವಾಗಿ ಹಾಗೂ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ರಕ್ಷಣೆಗಾಗಿ ‘ದಲಿತರ ಸಾಂಸ್ಕೃತಿಕ ಪ್ರತಿರೋಧ’ ಹೆಸರಿನಲ್ಲಿ ದಲಿತರ ಬೃಹತ್ ಐತಿಹಾಸಿಕ ಸಮಾವೇಶ ನಡೆಸಲಾಗುತ್ತಿದೆ ಎಂದರು.
ಇಡೀ ದೇಶವನ್ನು ಕಾರ್ಪೊರೇಟ್ ಕಂಪನಿಗಳ ಕೈಗಿಟ್ಟು, ದೇಶವನ್ನೇ ಖಾಸಗೀಕರಣ ಮಾಡಿ ಮೀಸಲಾತಿಯ ಆಶಯವನ್ನೇ ನಿರ್ನಾಮ ಮಾಡಿ, ದಲಿತರ ಅಭಿವೃದ್ಧಿಯನ್ನು ಸಾರಾಸಗಟಾಗಿ ನಿರ್ಲಕ್ಷಿಸಲಾಗುತ್ತಿದೆ. ಹಾಗಾಗಿ ದಲಿತರು ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಉಳಿವಿಗಾಗಿ ಹೋರಾಟ ಮಾಡುವ ಅನಿವಾರ್ಯತೆ ಬಂದೊದಗಿದೆ ಎಂದರು.
ದಸಂಸ ಸಂಚಾಲಕರಾದ ರತ್ನಪುರಿ ಪುಟ್ಟಸ್ವಾಮಿ, ದೇವರಾಜ ಕಟ್ಟೆಮಳಲವಾಡಿ, ಕೃಷ್ಣ ಕೊಳಘಟ್ಟ, ರಾಮಕೃಷ್ಣ ಅತ್ತಿಗುಪ್ಪೆ, ಪ್ರಕಾಶ್ ಮುತ್ತುರಾಯನಹೊಸಳ್ಳಿ ಹಾಗೂ ಹಿರಿಯ ದಲಿತ ಮುಖಂಡರಾದ ವರದರಾಜು, ಶಿವರಾಜ್, ರಾಜು ಹಾಜರಿದ್ದರು.

andolanait

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಭಾಷೆ, ಬದುಕು ಕಲಿಸಿದ ನನ್ನಪ್ಪ

ಸಂತೋಷ ಕೌಲಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಅವನ ತಂದೆಯ ಪಾತ್ರ ಬಹಳ ದೊಡ್ಡದು. ಒಬ್ಬ ಆದರ್ಶ ಮನೋಭಾವದ, ಮಕ್ಕಳನ್ನು ಸಮಾನವಾಗಿ…

4 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಮತಗಳ ಪರಿಚಯ

ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…

4 hours ago

ರೆಟ್ರೋ ಫೋಟೋಗಳ ಹೊಸ ಅಲೆ

ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ…

4 hours ago

ಮಹಾಪಂಚ್‌ ಕಾರ್ಟೂನ್‌

  ಮಹಾಪಂಚ್‌ ಕಾರ್ಟೂನ್‌ | ಸೆಪ್ಟಂಬರ್‌ 12 ಶನಿವಾರ

4 hours ago

ಒಳ್ಳೆಯತನಕ್ಕೂ ಕೆಟ್ಟತನಕ್ಕೂ ಜಾತಿ ಮಾನದಂಡ ಅಲ್ಲ

ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…

5 hours ago

ಓದುಗರ ಪತ್ರ | ‘ಅಕ್ಕ’ ಸಮ್ಮೇಳನದಲ್ಲೂ ‘ನಂದಿನಿ’ ಮಿಂಚಿಂಗ್!

ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…

5 hours ago