ಜಿಲ್ಲೆಗಳು

ದಲಿತರು ಹಿಂದುಳಿದವರು ಸಬಲರಾಗದಿದ್ದರೆ ದೇಶ ಪ್ರಗತಿ ಕಾಣಲ್ಲ: ಶಾಸಕ ಎನ್.ಮಹೇಶ್

ಮೈಸೂರು : ಗಾಂಧಿನಗರದ ಚಿಕ್ಕಗರಡಿ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಧನಶಕ್ತಿ ಕೋ ಆಪರೇಟಿವ್ ಸೊಸೈಟಿ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಶಾಸಕ ಎನ್‌  ಮಹೇಶ್  ಅವರು ಸಹಕಾರ ಕ್ಷೇತ್ರದಲ್ಲಿ ದಲಿತರು,ಹಿಂದುಳಿದ ವರ್ಗಗಳ ಜನರು ಸಕ್ರಿಯವಾಗಿ ಭಾಗಿಯಾದರೆ ಆರ್ಥಿಕವಾಗಿ ಸಬಲರಾಗಲು ನೆರವಾಗಲಿದೆ. ಸಮಾಜದ ಮನಸ್ಥಿತಿ, ಯುವಕರ ಮನಸ್ಥಿತಿ ಡಾ.ಬಿ.ಆರ್.ಅಂಬೇಡ್ಕರ್ ಸ್ವಾಭಿಮಾನ ಇಲ್ಲದ ಬದುಕು,ವ್ಯಕ್ತಿ ಜೀವಂತ ಶವ ಇದ್ದಾಗೆ. ಬರೀ‌ ಭಾಷಣ,ಸ್ಲೋಗನ್ ನಿಂದ ಸಾಧ್ಯವಿಲ್ಲ. ‌ಸ್ವಾಭಿಮಾನಕ್ಕೆ ಶಕ್ತಿ ಅರ್ಥ ಬರಬೇಕಾದರೆ ಆರ್ಥಿಕ ಶಕ್ತಿ ಬರಬೇಕು. ತನ್ನ ಊಟ‌ಬಟ್ಟೆ,ಮನೆ,ಮಕ್ಕಳ ಶಿಕ್ಷಣ, ಹಬ್ಬ ಹರಿದಿನವನ್ನು ನಿಭಾಯಿಸುವ ಶಕ್ತಿ ಇದ್ದರೆ ಆತ ಸ್ವಾವಲಂಬನೆ ಆಗಬೇಕು. ಅಕ್ಕಿ ಕೊಟ್ಟಿದ್ದು ಪರಾವಲಂಬಿ ಎನ್ನುತ್ತೇನೆ. ಆದರೆ ಅದಕ್ಕೆ ತಕ್ಕಂತೆ
ಮನೆ,ಊಟ ಕೊಡಿ ಎನ್ನುವ ಸ್ಥಿತಿ ಬಂದಿರುವುದು ಪರಾವಲಂಬಿ. ‌ಸ್ವಾವಲಂಬನೆ.‌ ಆರ್ಥಿಕವಾಗಿ ಸ್ವಾವಲಂಬನೆ ಹೊಂದಿದರೆ ದೇಶದ ಪ್ರಗತಿಗೆ ಕಾರಣವಾಗಲಿದೆ. ೧೯೮೦ರ ದಶಕದಲ್ಲಿ ಹೆಚ್ಚು ಗಳಗಳು,ಹೆಂಚು ಕೊಡುವುದೇ ಆಶ್ರಯ ಯೋಜನೆಯ ಕಲ್ಪನೆಯಾಗಿತ್ತು. ನನ್ನನ್ನು ಸೇರಿದಂತೆ ಅನೇಕರು ಕೊಠಡಿಯಲ್ಲಿ ‌ಹುಟ್ಟಿಲ್ಲ.ಹಾಲ್‌ನಲ್ಲಿ ಹುಟ್ಟಿಲ್ಲ. ನಿರಂತರ ಪರಾವಲಂಬಿ ಬದುಕಿಗೆ ಒಗ್ಗಿದ್ದೇವೆ. ಅದನ್ನು ಕಳಚಿ ಸ್ವಾವಲಂಬನೆ ಬದುಕಿನ ದಾರಿಯನ್ನು ಕಂಡುಕೊಳ್ಳಲು ಮುಂದಾಗಬೇಕು. ದೇಶದ ನೀತಿಗಳು ಬದಲಾವಣೆ ಆಗುತ್ತಿದೆ. ಕೇಂದ್ರದಲ್ಲಿ ನರೇಂದ್ರ ಮೋದಿ ಪ್ರಧಾನಮಂತ್ರಿಯಾದ ಮೇಲೆ ಸಾಕಷ್ಟು ವ್ಯವಸ್ಥೆ, ಸುಧಾರಣೆ ತರಲಾಗುತ್ತಿದೆ. ಜನರನ್ನು ಮತದಾರರೆಂದು ಪರಿಗಣಿಸದೆ ಒನ್ ನೇಷನ್ ಒನ್ ರೇಷನ್ ಎನ್ನುವ ಹೆಸರಿನಲ್ಲಿ ಗರೀಬ್ ಕಲ್ಯಾಣ್ ಯೋಜನ ಜಾರಿಗೆ ತಂದರು. ಸರ್ಕಾರದ ಯೋಜನೆಗಳನ್ನು ಬಳಸಿಕೊಂಡು ಬಡವರ ಸ್ಥಿತಿ ಬದಲಿಸಬೇಕು.‌ ಸ್ವಾಭಿಮಾನ ಕೆಲವೊಮ್ಮೆ ದುರಾಭಿಮಾನಕ್ಮೆ ಕಾರಣವಾಗಲಿದೆ.

ಕಾರ್ಯಕ್ರಮದಲ್ಲಿ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಎಚ್.ವಿ.ರಾಜೀವ್, ಎಂಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಬಿ.ಎನ್.ಸದಾನಂದ,ನಾಮ ನಿರ್ದೇಶಿತ ನಿರ್ದೇಶಕ ಪ್ರಭಾಕರ್ ಸಿಂಧ್ಯಾ, ರಾಜ್ಯ ಬಿಜೆಪಿ ಅಲ್ಪಸಂಖ್ಯಾತ ‌ಮೋರ್ಚಾ ಪ್ರಧಾನ ಕಾರ್ಯದರ್ಶಿ ಡಾ.ಅನಿಲ್ ಥಾಮಸ್, ಸಿಟಿ‌ ಕೋ ಆಪರೇಟಿವ್ ಬ್ಯಾಂಕ್ ಉಪಾಧ್ಯಕ್ಷ ರಾಜೇಶ್, ನಿರ್ದೇಶಕ ಸ್ವಾಮಿ, ಎಸ್ ಸಿ‌ ಮೋರ್ಚಾದ ಪರಮಾನಂದ ಹಾಜರಿದ್ದರು.

andolanait

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಸತ್ಯದ ಆರಾಧಕ ಮೌನವನ್ನು ಅವಲಂಬಿಸುವುದು ಅವಶ್ಯಕ

ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…

9 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 22 ಶನಿವಾರ  

9 hours ago

ಧಾವಂತ ಬದುಕಿಗೆ ಹೊಸ ಚೈತನ್ಯ ನೀಡುವ ಅರವಟ್ಟಿಗೆ

ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…

11 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧೀಜಿ ಆತ್ಮಕತೆಯ ಶತಮಾನೋತ್ಸವಕ್ಕೆ ಆಂದೋಲನ ಕೈಜೋಡಿಸಿರುವುದು ಐತಿಹಾಸಿಕ

ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…

11 hours ago

ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆಯಾದರೆ ಮಾತ್ರ ಎಸ್‌ಸಿ,ಎಸ್‌ಟಿ ಕಾಯ್ದೆ ಅನ್ವಯ ; ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…

1 day ago

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

1 day ago