ಜಿಲ್ಲೆಗಳು

ದಲಿತರು ಹಿಂದುಳಿದವರು ಸಬಲರಾಗದಿದ್ದರೆ ದೇಶ ಪ್ರಗತಿ ಕಾಣಲ್ಲ: ಶಾಸಕ ಎನ್.ಮಹೇಶ್

ಮೈಸೂರು : ಗಾಂಧಿನಗರದ ಚಿಕ್ಕಗರಡಿ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಧನಶಕ್ತಿ ಕೋ ಆಪರೇಟಿವ್ ಸೊಸೈಟಿ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಶಾಸಕ ಎನ್‌  ಮಹೇಶ್  ಅವರು ಸಹಕಾರ ಕ್ಷೇತ್ರದಲ್ಲಿ ದಲಿತರು,ಹಿಂದುಳಿದ ವರ್ಗಗಳ ಜನರು ಸಕ್ರಿಯವಾಗಿ ಭಾಗಿಯಾದರೆ ಆರ್ಥಿಕವಾಗಿ ಸಬಲರಾಗಲು ನೆರವಾಗಲಿದೆ. ಸಮಾಜದ ಮನಸ್ಥಿತಿ, ಯುವಕರ ಮನಸ್ಥಿತಿ ಡಾ.ಬಿ.ಆರ್.ಅಂಬೇಡ್ಕರ್ ಸ್ವಾಭಿಮಾನ ಇಲ್ಲದ ಬದುಕು,ವ್ಯಕ್ತಿ ಜೀವಂತ ಶವ ಇದ್ದಾಗೆ. ಬರೀ‌ ಭಾಷಣ,ಸ್ಲೋಗನ್ ನಿಂದ ಸಾಧ್ಯವಿಲ್ಲ. ‌ಸ್ವಾಭಿಮಾನಕ್ಕೆ ಶಕ್ತಿ ಅರ್ಥ ಬರಬೇಕಾದರೆ ಆರ್ಥಿಕ ಶಕ್ತಿ ಬರಬೇಕು. ತನ್ನ ಊಟ‌ಬಟ್ಟೆ,ಮನೆ,ಮಕ್ಕಳ ಶಿಕ್ಷಣ, ಹಬ್ಬ ಹರಿದಿನವನ್ನು ನಿಭಾಯಿಸುವ ಶಕ್ತಿ ಇದ್ದರೆ ಆತ ಸ್ವಾವಲಂಬನೆ ಆಗಬೇಕು. ಅಕ್ಕಿ ಕೊಟ್ಟಿದ್ದು ಪರಾವಲಂಬಿ ಎನ್ನುತ್ತೇನೆ. ಆದರೆ ಅದಕ್ಕೆ ತಕ್ಕಂತೆ
ಮನೆ,ಊಟ ಕೊಡಿ ಎನ್ನುವ ಸ್ಥಿತಿ ಬಂದಿರುವುದು ಪರಾವಲಂಬಿ. ‌ಸ್ವಾವಲಂಬನೆ.‌ ಆರ್ಥಿಕವಾಗಿ ಸ್ವಾವಲಂಬನೆ ಹೊಂದಿದರೆ ದೇಶದ ಪ್ರಗತಿಗೆ ಕಾರಣವಾಗಲಿದೆ. ೧೯೮೦ರ ದಶಕದಲ್ಲಿ ಹೆಚ್ಚು ಗಳಗಳು,ಹೆಂಚು ಕೊಡುವುದೇ ಆಶ್ರಯ ಯೋಜನೆಯ ಕಲ್ಪನೆಯಾಗಿತ್ತು. ನನ್ನನ್ನು ಸೇರಿದಂತೆ ಅನೇಕರು ಕೊಠಡಿಯಲ್ಲಿ ‌ಹುಟ್ಟಿಲ್ಲ.ಹಾಲ್‌ನಲ್ಲಿ ಹುಟ್ಟಿಲ್ಲ. ನಿರಂತರ ಪರಾವಲಂಬಿ ಬದುಕಿಗೆ ಒಗ್ಗಿದ್ದೇವೆ. ಅದನ್ನು ಕಳಚಿ ಸ್ವಾವಲಂಬನೆ ಬದುಕಿನ ದಾರಿಯನ್ನು ಕಂಡುಕೊಳ್ಳಲು ಮುಂದಾಗಬೇಕು. ದೇಶದ ನೀತಿಗಳು ಬದಲಾವಣೆ ಆಗುತ್ತಿದೆ. ಕೇಂದ್ರದಲ್ಲಿ ನರೇಂದ್ರ ಮೋದಿ ಪ್ರಧಾನಮಂತ್ರಿಯಾದ ಮೇಲೆ ಸಾಕಷ್ಟು ವ್ಯವಸ್ಥೆ, ಸುಧಾರಣೆ ತರಲಾಗುತ್ತಿದೆ. ಜನರನ್ನು ಮತದಾರರೆಂದು ಪರಿಗಣಿಸದೆ ಒನ್ ನೇಷನ್ ಒನ್ ರೇಷನ್ ಎನ್ನುವ ಹೆಸರಿನಲ್ಲಿ ಗರೀಬ್ ಕಲ್ಯಾಣ್ ಯೋಜನ ಜಾರಿಗೆ ತಂದರು. ಸರ್ಕಾರದ ಯೋಜನೆಗಳನ್ನು ಬಳಸಿಕೊಂಡು ಬಡವರ ಸ್ಥಿತಿ ಬದಲಿಸಬೇಕು.‌ ಸ್ವಾಭಿಮಾನ ಕೆಲವೊಮ್ಮೆ ದುರಾಭಿಮಾನಕ್ಮೆ ಕಾರಣವಾಗಲಿದೆ.

ಕಾರ್ಯಕ್ರಮದಲ್ಲಿ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಎಚ್.ವಿ.ರಾಜೀವ್, ಎಂಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಬಿ.ಎನ್.ಸದಾನಂದ,ನಾಮ ನಿರ್ದೇಶಿತ ನಿರ್ದೇಶಕ ಪ್ರಭಾಕರ್ ಸಿಂಧ್ಯಾ, ರಾಜ್ಯ ಬಿಜೆಪಿ ಅಲ್ಪಸಂಖ್ಯಾತ ‌ಮೋರ್ಚಾ ಪ್ರಧಾನ ಕಾರ್ಯದರ್ಶಿ ಡಾ.ಅನಿಲ್ ಥಾಮಸ್, ಸಿಟಿ‌ ಕೋ ಆಪರೇಟಿವ್ ಬ್ಯಾಂಕ್ ಉಪಾಧ್ಯಕ್ಷ ರಾಜೇಶ್, ನಿರ್ದೇಶಕ ಸ್ವಾಮಿ, ಎಸ್ ಸಿ‌ ಮೋರ್ಚಾದ ಪರಮಾನಂದ ಹಾಜರಿದ್ದರು.

andolanait

Recent Posts

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಏಳು ದಿನ ಭಾರೀ ಮಳೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಪರಿಣಾಮ ರಾಜ್ಯದಲ್ಲಿ ಏಳು ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

4 hours ago

ಜೈಲಿನಲ್ಲಿ ಪವಿತ್ರಾಗೌಡಗೆ ರಾಜಾತಿಥ್ಯ ಆರೋಪ: ಸಂಧ್ಯಾ ನಾಗರಾಜ್‌ ವಿರುದ್ಧ ದೂರು

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಎ1 ಆರೋಪಿ ಪವಿತ್ರಾಗೌಡಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.…

5 hours ago

ಓದುಗರ ಪತ್ರ: ಕಿಡಿಗೇಡಿಗಳಿಗೆ ಕಠಿಣ ಶಿಕ್ಷೆ ಆಗಲಿ

ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲ್ಲೂಕಿನ ಮಸಣಾಪುರ ಚಾಟಿಪುರ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರದ ಫಲಕಕ್ಕೆ ಕಿಡಿಗೇಡಿಗಳು ಅಪಮಾನ…

9 hours ago

ಓದುಗರ ಪತ್ರ: ಒಡೆಯರ್ ಪೋಸ್ಟ್ ಕಾರ್ಡ್ ಬಿಡುಗಡೆ ಶ್ಲಾಘನೀಯ

ಭಾರತೀಯ ಅಂಚೆ ಹಾಗೂ ಕರ್ನಾಟಕ ಅಂಚೆ ಚೀಟಿ ಸಂಗ್ರಹಣಾ ಸಂಘವು ಆಧುನಿಕ ಮೈಸೂರು ನಿರ್ಮಾಣಕ್ಕೆ ಮಹತ್ವದ ಕೊಡುಗೆ ನೀಡಿರುವ ಮೈಸೂರು…

9 hours ago

ಓದುಗರ ಪತ್ರ: ಮೈಸೂರು ದಟ್ಟಗಳ್ಳಿಯ ಪಿನ್ ಕೋಡ್ ಸಮಸ್ಯೆ ನಿವಾರಿಸಿ

ಮೈಸೂರಿನ ದಟ್ಟಗಳ್ಳಿ ೩ ನೇ ಹಂತದ ಕನಕದಾಸನಗರವು, ಬಡಾವಣೆ ನಿರ್ಮಾಣವಾದ ಆರಂಭದಲ್ಲಿ ರಾಮಕೃಷ್ಣ ನಗರ ಉಪ ಅಂಚೆ ಕಚೇರಿಗೆ ಸೇರಿತ್ತು.…

9 hours ago

ಮಳೆಗಾಲದ ಸವಾಲು ಎದುರಿಸಲು ಸೆಸ್ಕ್ ಸಜ್ಜು

ಪುನೀತ್ ಮಡಿಕೇರಿ ಹೆಚ್ಚುವರಿ ಸಿಬ್ಬಂದಿಗಳ ನಿಯೋಜನೆ; ಅಗತ್ಯವಿರುವಷ್ಟು ವಿದ್ಯುತ್ ಕಂಬಗಳು, ಪರಿವರ್ತಕಗಳು, ವಾಹಕಗಳ ದಾಸ್ತಾನು ಮಡಿಕೇರಿ: ಗುಡ್ಡಗಾಡು ಪ್ರದೇಶವಾಗಿರುವ ಕೊಡಗು…

10 hours ago