ಜಿಲ್ಲೆಗಳು

ನೃತ್ಯ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

ಹನೂರು: ಶೈಕ್ಷಣಿಕ ವಲಯದ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ರಾಮಾಪುರ ಶಾಲೆಯ ಮಕ್ಕಳು ಜಿಲ್ಲಾ ಮಟ್ಟದ ಜಾನಪದ ನೃತ್ಯ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿ ಶೈಕ್ಷಣಿಕ ವಲಯಕ್ಕೆ ಕೀರ್ತಿ ತಂದಿದ್ದಾರೆ.

ರಾಷ್ಟ್ರೀಯ ಜನಸಂಖ್ಯಾ ಶಿಕ್ಷಣ ಯೋಜನೆಯ ಕಾರ್ಯಕ್ರಮದ ಅಂಗವಾಗಿ ಡಯಟ್ ಚಾಮರಾಜನಗರ ಇಲ್ಲಿ ನಡೆದ ಗಂಡು ಮತ್ತು ಹೆಣ್ಣು ಮಕ್ಕಳಿಗೆ ಸಮಾನ ಅವಕಾಶ ಎಂಬ ವಿಷಯದ ಜಿಲ್ಲಾ ಮಟ್ಟದ ಜಾನಪದ ಸ್ಪರ್ಧೆಯಲ್ಲಿ ಈ ಸಾಧನೆಗೈದಿದ್ದಾರೆ.

ಬಹುಮುಖ ಪ್ರತಿಭೆ ಶಿಕ್ಷಕ ಕೆಂಚಪ್ಪ ಮಾರ್ಗದರ್ಶನದಲ್ಲಿ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನಗಳಿಸಿರುವ ವಿದ್ಯಾರ್ಥಿಗಳು ಬಳ್ಳಾರಿಯಲಿ ನಡೆಯುವ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ಈ ಸಾಧನೆಗೆ ಕಾರಣೀಭೂತರಾದ ಶಿಕ್ಷಕ ಕೆಂಚಪ್ಪ ಹಾಗೂ ವಿದ್ಯಾರ್ಥಿಗಳನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಶಿವರಾಜು ಸೇರಿದಂತೆ ಶೈಕ್ಷಣಿಕ ವಲಯದ ಅನೇಕರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಶಾಲಾ ಆಡಳಿತ ಮಂಡಳಿ ವತಿಯಿಂದ ಅಭಿನಂದನೆಯನ್ನು ಸಲ್ಲಿಸಿದ್ದಾರೆ.

andolanait

Recent Posts

ಓದುಗರ ಪತ್ರ: ಕುಂಭೇಶ್ವರ ಕಾಲೋನಿ ರೈತರ ಜಮೀನು ವಿವಾದ ಪರಿಹರಿಸಿ

ಚಾಮರಾಜನಗರ ತಾಲ್ಲೂಕಿನ ಆಲೂರು ಗ್ರಾಮದ ಪರಿಶಿಷ್ಟ ಜಾತಿಯ ಕುಟುಂಬಗಳಿಗೆ ದಿ.ಬಿ.ರಾಚಯ್ಯ ಅವರು ಸಚಿವರಾಗಿದ್ದಾಗ ಹರದನಹಳ್ಳಿ ಡಿಸ್ಟ್ರಿಕ್ಟ್ ಫಾರೆಸ್ಟ್ ಸರ್ವೆ ನಂ.೩ರಲ್ಲಿ…

53 seconds ago

ಓದುಗರ ಪತ್ರ: ರೈಲು ನಿಲ್ದಾಣದಲ್ಲಿ ಅರ್ಧ ಲೀಟರ್ ನೀರಿನ ಬಾಟಲಿ ಕೊರತೆ

ಮೈಸೂರಿನ ರೈಲು ನಿಲ್ದಾಣ ಸೇರಿದಂತೆ, ರಾಜ್ಯದ ಯಾವುದೇ ರೈಲು ನಿಲ್ದಾಣ ಮತ್ತು ರೈಲು ಗಾಡಿಗಳಲ್ಲಿ ಕುಡಿಯುವ ನೀರಿನ ಅರ್ಧ ಲೀಟರ್…

4 mins ago

ಓದುಗರ ಪತ್ರ: ಮೈಸೂರು ಮಹಾನಗರ ಪಾಲಿಕೆ ಚುನಾವಣೆ ಯಾವಾಗ?

ಮೈಸೂರು ಮಹಾ ನಗರ ಪಾಲಿಕೆ ಚುನಾಯಿತ ಸದಸ್ಯರ ಅವಧಿ ಮುಗಿದು ಎರಡು ವರ್ಷಗಳೆ ಕಳೆದಿದೆ. ಆದರೆ ಸರ್ಕಾರ ಚುನಾವಣೆ ನಡೆಸಲು ಮುಂದಾಗುತ್ತಿಲ್ಲ.…

6 mins ago

ಓದುಗರ ಪತ್ರ: ಅಡ್ಡಾದಿಡ್ಡಿ ವಾಹನ ಚಾಲನೆಗೆ ಕಡಿವಾಣ ಹಾಕಿ

ಮೈಸೂರಿನ ಶಿವರಾಮ್ ಪೇಟೆ ರಸ್ತೆಯಲ್ಲಿರುವ ನಂಜರಾಜ ಬಹದ್ದೂರ್ ಛತ್ರ ಹಾಗೂ ರಾಜ್ ಕಮಲ್ ಥಿಯೇಟರ್ ನಡುವೆ ಬರುವ ವೃತ್ತದಲ್ಲಿ ದಿನನಿತ್ಯ…

9 mins ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ವಿಶಾಲ್ ಸಿಂಗ್ ಎಂಬ ಬಡರೋಗಿಗಳ ಅನ್ನದಾತ

ಪಂಜುಗಂಗೊಳ್ಳಿ  ಊಟವಿಲ್ಲದೆ ಪರದಾಡಿದ ಘಟನೆಯೇ ನಿರಂತರ ದಾಸೋಹಕ್ಕೆ ಪ್ರೇರಣೆ ಇತ್ತೀಚಿನ ದಿನಗಳಲ್ಲಿ ಹಲವು ಸರ್ಕಾರಿ ಆಸ್ಪತ್ರೆಗಳಲ್ಲಿ ಬಡ ರೋಗಿಗಳಿಗೆ ಉಚಿತ…

12 mins ago

ಬೊಮ್ಮೇನಹಳ್ಳಿ ಬಡಾವಣೆ ರಚನೆ; ರೈತರಿಗೆ ಓಪನ್ ಆಫರ್

ಕೆ.ಬಿ.ರಮೇಶನಾಯಕ ಮೈಸೂರು: ಮೈಸೂರು ಮಹಾನಗರ ಪಾಲಿಕೆಯನ್ನು ಗ್ರೇಡ್-೧ ನಗರಪಾಲಿಕೆಯನ್ನಾಗಿ ರಚಿಸಲು ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡ ಬೆನ್ನಲ್ಲೇ ಹೊರವಲಯದಲ್ಲಿ…

19 mins ago