ಜಿಲ್ಲೆಗಳು

ಅಪಾಯದ ಅಂಚಿನಲ್ಲಿ ಕುಕ್ಕರಹಳ್ಳಿ ಕೆರೆ

ಮಳೆಯಿಂದಾಗಿ ಕೆರೆಗೆ ಭಾರೀ ಪ್ರಮಾಣದ ನೀರು ಹರಿದು ಬರುತ್ತಿರುವುದರಿಂದ ಕೆರೆಯ ಏರಿ ಕುಸಿಯುವ ಭೀತಿ

ಮೈಸೂರು: ಅತಿಯಾದ ನಗರೀಕರಣದ ಪ್ರಭಾವದಿಂದಾಗಿ ಮೈಸೂರಿನ ಹೃದಯ ಭಾಗದಲ್ಲಿರುವ ಕುಕ್ಕರಹಳ್ಳಿ ಕೆರೆ ಅಪಾಯ ಎದುರಿಸುತ್ತಿದೆ. ಹೆಚ್ಚಿನ ಮಳೆಯಿಂದಾಗಿ ಕೆರೆಗೆ ಭಾರೀ ಪ್ರಮಾಣದ ನೀರು ಹರಿದುಬರುತ್ತಿರುವುದರಿಂದ ಕೆರೆಯ ಏರಿ ಕುಸಿಯುವ ಭೀತಿ ಎದುರಾಗಿದೆ. ಇದರ ಪರಿಣಾಮ ಕಳೆದ ಎರಡು ದಿನಗಳಿಂದ ವಾಯು ವಿಹಾರವನ್ನು ತಾತ್ಕಾಲಿಕವಾಗಿ ಬಂದ್ ಮಾಡಿ, ಕೆರೆಗೆ ಹರಿದುಬರುತ್ತಿರುವ ಹೆಚ್ಚುವರಿ ನೀರನ್ನು ಹೊರಬಿಡುವ ಕೆಲಸ ಮಾಡಲಾಗುತ್ತಿದೆ.


ಕುಕ್ಕರಹಳ್ಳಿ ಕೆರೆಗೆ ಕೋಡಿ ಇಲ್ಲದಿರುವುದು ಹಾಗೂ ಒಂದು ಕೆರೆಯಿಂದ ಮತ್ತೊಂದು ಕೆರೆಗೆ ಸಂಪರ್ಕ ಇಲ್ಲದಿರುವುದೇ ಸಮಸ್ಯೆ. ಈ ಹಿಂದೆ ಕೆರೆಯು ಹೆಚ್ಚುವರಿ ನೀರು ಸುಮಾರು ೨೭ ಕಿಮೀಯಷ್ಟು ಉದ್ದವಿದ್ದ ಪೂರ್ಣಯ್ಯ ನಾಲೆಯಲ್ಲಿ ಹರಿದುಹೋಗುತ್ತಿತ್ತು. ಆದರೆ, ಒತ್ತುವರಿಯಿಂದಾಗಿ ನಾಲೆ ಸಂಪೂರ್ಣ ಮುಚ್ಚಿ ಹೋಗಿರುವುದರಿಂದ ಸಮಸ್ಯೆ ಎದುರಾಗಿದೆ.
ದಶಕಗಳ ಹಿಂದೆ ಹುಣಸೂರು ರಸ್ತೆಯ ಪಡುವಾರಹಳ್ಳಿ ಭಾಗದಲ್ಲಿನ ಒಳ ಚರಂಡಿ ನೀರು ಕೆರೆಗೆ ಸೇರುತ್ತಿತ್ತಲ್ಲದೆ, ಜನರು ಕಸ, ಕೋಳಿ ಮಾಂಸದ ಅಂಗಡಿಗಳ ತ್ಯಾಜ್ಯವನ್ನೂ ತಂದು ಸುರಿಯುತ್ತಿದ್ದರಿಂದ ದುರ್ವಾಸನೆ ಬೀರುತ್ತಿತ್ತು. ಒಳ ಚರಂಡಿ ನೀರನ್ನು ತಪ್ಪಿಸಲು ೨೦೦೮ರಲ್ಲಿ ಅಂದಿನ ಸರ್ಕಾರ ಸುಮಾರು ೫ ಕೋಟಿ ರೂ. ಮಂಜೂರು ಮಾಡಿತ್ತು. ಈ ಹಣದಲ್ಲಿ ನಗರಪಾಲಿಕೆ ಹಾಗೂ ಮುಡಾ ವತಿಯಿಂದ ಕುಕ್ಕರಹಳ್ಳಿ ಕೆರೆ ಅಭಿವೃದ್ಧಿಗೆ ೨ ಕೋಟಿ ರೂ. ಹಾಗೂ ಕಾರಂಜಿ ಕೆರೆ ಅಭಿವೃದ್ಧಿಗೆ ೩ ಕೋಟಿ ರೂ. ಬಳಸಿಕೊಂಡು ಒಳಚರಂಡಿ ನೀರು ಕೆರೆಯ ಒಡಲು ಸೇರಿ ಮಲಿನಗೊಳಿಸುವುದನ್ನು ತಪ್ಪಿಸಲಾಗಿದೆ.
ವಾಯುವಿಹಾರಕ್ಕೆ ಮುಕ್ತ: ನೀರು ಹೊರಹಾಕಲು ಕುಕ್ಕರಹಳ್ಳಿ ಕೆರೆಯ ಏರಿಯ ಮೇಲೆ ವಾಯುವಿಹಾರವನ್ನೇ ತಾತ್ಕಾಲಿಕವಾಗಿ ಬಂದ್ ಮಾಡಲಾಗಿತ್ತು. ಇದೀಗ ಹೆಚ್ಚುವರಿ ನೀರನ್ನು ಹೊರಹಾಕಿ ಗುರುವಾರದಿಂದ ಕೆರೆ ಏರಿಯ ಒಂದು ಭಾಗವನ್ನು ವಾಯುವಿಹಾರಕ್ಕೆ ಮುಕ್ತಗೊಳಿಸಲಾಗಿದೆ.


ಐನೂರು ಎಕರೆಯಲ್ಲಿ ಅರ್ಧ ಭಾಗವೂ ಇಲ್ಲ
ಮೈಸೂರು ನಗರದ ಜನತೆಗೆ ಕುಡಿಯುವ ನೀರು ಪೂರೈಸುವ ಉದ್ದೇಶದಿಂದ ಮಹಾರಾಜರು ಕಟ್ಟಿಸಿದ್ದ ಕುಕ್ಕರಹಳ್ಳಿ ಕೆರೆ ಅಂದಿನ ಕಾಲಕ್ಕೆ ಸುಮಾರು ೫೦೦ ಎಕರೆ ಪ್ರದೇಶವನ್ನು ಒಳಗೊಂಡಿತ್ತು. ಆದರೆ, ಕಾಲ ಕ್ರಮೇಣ ಅಭಿವೃದ್ಧಿ ಕಾಮಗಾರಿಗಳ ಪರಿಣಾಮ ಕುಕ್ಕರಹಳ್ಳಿ ಕೆರೆಯ ಪ್ರದೇಶ ಸದ್ಯ ೨೫೦ ಎಕರೆ ಮಾತ್ರ ಇದ್ದು, ೧೦೯ ಎಕರೆ ಪ್ರದೇಶದಲ್ಲಿ ಮಾತ್ರ ನೀರು ನಿಂತಿದೆ.


ಗೇಟ್ ವಾಲ್ವ್ ನಿರ್ವಹಣೆ ಕೊರತೆ

ಮೈಸೂರು: ಕೆರೆಗೆ ಹೆಚ್ಚುವರಿಯಾಗಿ ಬಂದು ಸೇರುವ ನೀರನ್ನು ಹೊರಬಿಡಲು ಇರುವ ಗೇಟ್ ವಾಲ್ವ್ ನಿರ್ವಹಣೆ ಕೊರತೆಯಿಂದ ಕೆಟ್ಟು ನಿಂತಿದೆ. ಇದರ ಪರಿಣಾಮ ಹೆಚ್ಚುವರಿ ನೀರನ್ನು ಹೊರಹಾಕಲು ಹರ ಸಾಹಸ ಪಡುವಂತಾಗಿದೆ. ೧೫ ವರ್ಷಗಳ ಹಿಂದೆಯೂ ಇದೇ ರೀತಿಯ ಸಮಸ್ಯೆ ಎದುರಾಗಿದ್ದಾಗ ಹೊರಗಿನಿಂದ ಮೆಕ್ಯಾನಿಕ್ ಕರೆತಂದು ಸರಿಪಡಿಸಲಾಗಿತ್ತು. ಪ್ರತಿ ಆರು ತಿಂಗಳಿಗೊಮ್ಮೆ ಗೇಟ್‌ವಾಲ್ವ್‌ಗೆ ಆಯಿಲ್ ಹಾಕಿ ನಿರ್ವಹಣೆ ಮಾಡಿದಾಗ ಇಂತಹ ಸಮಸ್ಯೆ ತಲೆದೋರುವುದಿಲ್ಲ ಎನ್ನುತ್ತಾರೆ ತಜ್ಞರು.


ಕೆರೆ ಏರಿ ಬಹಳ ಹಳೆಯದು. ಜಾಗರೂಕತೆಯಿಂದ ಅದನ್ನು ನೋಡಿಕೊಳ್ಳಬೇಕು. ಪೂರ್ಣಯ್ಯ ನಾಲೆ ಸರಿ ಇದ್ದಿದ್ದರೆ ಕುಕ್ಕರಹಳ್ಳಿ ಕೆರೆಗೆ ಈ ಸಮಸ್ಯೆ ಎದುರಾಗುತ್ತಿರಲಿಲ್ಲ. ಮುಖ್ಯವಾಗಿ ಜನರು ಮನಸ್ಸು ಮಾಡಿದರೆ ಕೆರೆಯನ್ನೂ ಉಳಿಸಬಹುದು. ಸುತ್ತಲಿನ ಪರಿಸರವನ್ನೂ ಕಾಪಾಡಿಕೊಳ್ಳಬಹುದು.
ಕೆ.ಎಂ.ಜಯರಾಮಯ್ಯ, ಪರಿಸರ ಪ್ರೇಮಿ

 

andolanait

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

8 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

9 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

10 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

11 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

15 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

15 hours ago