ಜಿಲ್ಲೆಗಳು

ಪದೇಪದೇ ಅಮೆರಿಕಾಕ್ಕೆ ಹೋಗುತ್ತಿರುವುದಕ್ಕೆ ಕಾರಣ ಕೊಟ್ಟ ಶಾಸಕ ದರ್ಶನ್‌ ಪುಟ್ಟಣ್ಣಯ್ಯ

ಮಂಡ್ಯದ ಮೇಲುಕೋಟೆಯ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಪದೇಪದೇ ಅಮೆರಿಕಾಕ್ಕೆ ತೆರಳುತ್ತಾರೆ ಎಂದು ಕ್ಷೇತ್ರದ ಮತದಾರರು ಕೆಲ ದಿನಗಳ ಹಿಂದೆ ಅಸಮಾಧಾನ ಹೊರಹಾಕಿದ್ದರು. ಶಾಸಕನಾಗಿ ಆಯ್ಕೆಯಾದ ಮೇಲೆ ನಾಲ್ಕನೇ ಬಾರಿಗೆ ಅಮೆರಿಕಾಗೆ ತೆರಳಿದ್ದಾಗ ಮಾಧ್ಯಮದಲ್ಲಿಯೂ ಸುದ್ದಿಯಾಗಿತ್ತು.

ಈ ಕುರಿತು ಇದೀಗ ದರ್ಶನ್‌ ಪುಟ್ಟಣ್ಣಯ್ಯ ಮಾತನಾಡಿದ್ದು ಶಾಸಕನಾಗಿ ಆಯ್ಕೆಯಾದ ಬಳಿಕ ನಾಲ್ಕು ಬಾರಿ ಅಮೆರಿಕಾಕ್ಕೆ ಹೋಗಿರುವುದು ನಿಜ ಎಂದು ಒಪ್ಪಿಕೊಂಡಿದ್ದಾರೆ. ಅಲ್ಲದೇ ಹೀಗೆ ಮಾಡುವುದು ತಪ್ಪೆಂದು ತಿಳಿದಿದೆ, ನನ್ನ ಕೆಲ ವೈಯಕ್ತಿಕ ಸಮಸ್ಯೆಗಳಿದ್ದು ಅವುಗಳನ್ನು ಪರಿಹರಿಸಿಕೊಳ್ಳಲು ಹೋಗುತ್ತಿದ್ದೇನೆ ಅಷ್ಟೇ ಎಂದೂ ಸಹ ದರ್ಶನ್‌ ಪುಟ್ಟಣ್ಣಯ್ಯ ತಿಳಿಸಿದ್ದಾರೆ. ಈ ಮೂಲಕ ಕಂಪನಿ ಕೆಲಸದ ನಿಮಿತ್ತ ಅಮೆರಿಕಾಗೆ ತೆರಳುತ್ತಿಲ್ಲ ಎಂಬ ಸ್ಪಷ್ಟನೆಯನ್ನು ನೀಡಿದರು.

ಅಮೆರಿಕಾದಲ್ಲಿ ತನ್ನ ಹೆಂಡತಿ ಹಾಗೂ ಮಕ್ಕಳಿದ್ದು ಅಲ್ಲಿಗೆ ತೆರಳಬೇಕಾಗಿರುವುದು ಅನಿವಾರ್ಯವಾಗಿದೆ. ಮುಂದಿನ ದಿನಗಳಲ್ಲಿ ಇದನ್ನು ಸರಿಪಡಿಸಿಕೊಳ್ಳಲಿದ್ದೇನೆ. ನಾನು ಅಮೆರಿಕಾಗೆ ಹೋಗುತ್ತಿರುವುದನ್ನು ಸಮರ್ಥಿಸಿಕೊಳ್ಳುತ್ತಿಲ್ಲ ಎಂದು ತಿಳಿಸಿದರು.

ಅಲ್ಲದೇ ನಾನು ಅಮೆರಿಕಾಗೆ ತೆರಳಿದರೂ ಇಲ್ಲಿ ಕೆಲಸ ಮಾಡಲು ತಂಡವನ್ನು ಇಟ್ಟಿದ್ದೇನೆ. ಇಲ್ಲಿ ನನ್ನ ತಂಡದವರು ಕೆಲಸಗಳನ್ನು ನೋಡಿಕೊಳ್ಳುತ್ತಿದ್ದಾರೆ. ನಮ್ಮ ಕ್ಷೇತ್ರದಲ್ಲಿ ಫೋನ್‌ ಮಾಡಿ ಹೇಳಿದ್ರೆ ಮಾತ್ರ ಕೆಲಸ ಆಗೋದು. ಜನರು ನನ್ನ ಬಳಿ ಸಮಸ್ಯೆ ಹೇಳಿಕೊಳ್ಳುತ್ತಾರೆ. ನಾನು ಅದನ್ನು ಅಧಿಕಾರಿಗಳಿಗೆ ತಿಳಿಸಿ ಮಾಡಿಸುತ್ತೇನೆ. ಜನರ ಸಮಸ್ಯೆಗಳು ಬೇಗ ಪರಿಹಾರ ಆಗಬೇಕು. ಶಾಸಕನ ಬಳಿ ಬರುವುದಕ್ಕಿಂತ ಸರ್ಕಾರಿ ಕಚೇರಿಗಳ ಬಳಿ ಹೋಗಬೇಕು. ವ್ಯವಸ್ಥೆ ಬದಲಾಗಬೇಕು ಎಂದು ಅವರು ಹೇಳಿದರು.

ಇನ್ನೂ ಮುಂದುವರಿದು ಮಾತನಾಡಿದ ಅವರು ನಾನು ಈಗಾಗಲೇ ನನ್ನ ಕಂಪನಿಗಳನ್ನು ಮಾರಾಟ ಮಾಡಿದ್ದೇನೆ. 2021ರ ಮೇ 21ರಂದು ಕಂಪನಿಗಳು ಮಾರಾಟವಾಗಿವೆ. ಗೂಗಲ್‌ನಲ್ಲಿ ಚೆಕ್‌ ಮಾಡಿ ನೋಡಿ. ಈಗ ನನಗೂ ಆ ಕಂಪನಿಗಳಿಗೂ ಸಂಬಂಧವಿಲ್ಲ. ಮೈಸೂರಿನಲ್ಲೂ ನನ್ನ ಆಫೀಸ್‌ ಇತ್ತು. ಈಗ ಅದು ಅದರ ಮಾಲೀಕರ ಹೆಸರು ಬೇರೆ ಇದೆ ಎಂದು ತಿಳಿಸಿದರು.

andolana

Recent Posts

ಕೇರಳ ಸಿಎಂ ಪಿಣರಾಯಿ ವಿಜಯನ್‌ಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ತಿರುಗೇಟು

ಬೆಂಗಳೂರು: ಇಲ್ಲಿನ ಯಲಹಂಕ, ಫಕೀರ್‌ ಕಾಲೋನಿ ಹಾಗೂ ವಸೀಮ್‌ ಲೇಔಟ್‌ನಲ್ಲಿರುವ ಮುಸ್ಲಿಂ ವಸತಿಗಳ ತೆರವು ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಬುಲ್ಡೋಜರ್‌…

14 mins ago

ಪೈರಸಿ ಬಗ್ಗೆ ಮತ್ತೊಮ್ಮೆ ಖಡಕ್‌ ಪ್ರತಿಕ್ರಿಯೆ ನೀಡಿದ ಕಿಚ್ಚ ಸುದೀಪ್‌

ಬೆಂಗಳೂರು: ನಟ ಕಿಚ್ಚ ಸುದೀಪ್‌ ಅಭಿನಯದ ಮಾರ್ಕ್‌ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ನಡುವೆ ಮಾರ್ಕ್‌ ಚಿತ್ರಕ್ಕೂ ಪೈರಸಿ…

46 mins ago

ಜೆಡಿಎಸ್‌ ಜೊತೆ ಮೈತ್ರಿ ವಿಚಾರ: ವರಿಷ್ಠರ ತೀರ್ಮಾನಕ್ಕೆ ಬದ್ಧ ಎಂದ ವಿಜಯೇಂದ್ರ

ಬೆಂಗಳೂರು: ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಬಿಜೆಪಿ ಜೊತೆ ಜೆಡಿಎಸ್‌ ಮೈತ್ರಿ ಕಷ್ಟ ಎಂದು ಮಾಜಿ ಎಚ್‌ಡಿಡಿ ಹೇಳಿಕೆ ಕುರಿತು ಬಿಜೆಪಿ…

1 hour ago

ಹೆಸರುಘಟ್ಟ ನೈಸರ್ಗಿಕ ಹುಲ್ಲುಗಾವಲು ಸಂರಕ್ಷಣೆಗೆ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು: ಸರ್ಕಾರ ಕೆಲವು ತಿಂಗಳ ಹಿಂದೆ ಸಂರಕ್ಷಿತ ಹುಲ್ಲುಗಾವಲು ಎಂದು ಘೋಷಿಸಿರುವ ಹೆಸರುಘಟ್ಟ ಕೆರೆ ಸೇರಿದಂತೆ 5678 ಎಕರೆ ಹುಲ್ಲುಗಾವಲು…

3 hours ago

ಕಾಸರಗೋಡು| ಹಳಿ ದಾಟುವಾಗ ರೈಲು ರಿಕ್ಕಿ: ಕೊಡಗು ಮೂಲದ ಯುವಕ ಸಾವು

ಕಾಸರಗೋಡು: ಹಳಿ ದಾಟುವಾಗ ಯುವಕ ಸಾವನ್ನಪ್ಪಿರುವ ಘಟನೆ ಕಾಸರಗೋಡು ನಿಲ್ದಾಣದಲ್ಲಿ ನಡೆದಿದೆ. ಕೊಡಗು ಜಿಲ್ಲೆ ಗೋಣಿಮಾಗೂರಿನ ಸೋಮವಾರಪುರದ ಚೆನ್ನಯ್ಯ ಅವರ…

3 hours ago

ಉತ್ತರ ಪ್ರದೇಶದಂತೆ ಬುಲ್ಡೋಜರ್‌ ಬಳಸಿ ಮುಸ್ಲಿಮರ ಮನೆ ಧ್ವಂಸ: ಕರ್ನಾಟಕದ ವಿರುದ್ಧ ಪಿಣರಾಯಿ ವಿಜಯನ್‌ ಆಕ್ರೋಶ

ಬೆಂಗಳೂರು: ಕರ್ನಾಟಕದಲ್ಲಿ ಬುಲ್ಡೋಜರ್‌ ಬಳಸಿ ಮುಸ್ಲಿಮರ ಮನೆಗಳನ್ನು ಧ್ವಂಸ ಮಾಡಲಾಗಿದೆ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್‌ ಕಾಂಗ್ರೆಸ್‌ ಸರ್ಕಾರದ…

3 hours ago