ಮಂಡ್ಯದ ಮೇಲುಕೋಟೆಯ ಶಾಸಕ ದರ್ಶನ್ ಪುಟ್ಟಣ್ಣಯ್ಯ ಪದೇಪದೇ ಅಮೆರಿಕಾಕ್ಕೆ ತೆರಳುತ್ತಾರೆ ಎಂದು ಕ್ಷೇತ್ರದ ಮತದಾರರು ಕೆಲ ದಿನಗಳ ಹಿಂದೆ ಅಸಮಾಧಾನ ಹೊರಹಾಕಿದ್ದರು. ಶಾಸಕನಾಗಿ ಆಯ್ಕೆಯಾದ ಮೇಲೆ ನಾಲ್ಕನೇ ಬಾರಿಗೆ ಅಮೆರಿಕಾಗೆ ತೆರಳಿದ್ದಾಗ ಮಾಧ್ಯಮದಲ್ಲಿಯೂ ಸುದ್ದಿಯಾಗಿತ್ತು.
ಈ ಕುರಿತು ಇದೀಗ ದರ್ಶನ್ ಪುಟ್ಟಣ್ಣಯ್ಯ ಮಾತನಾಡಿದ್ದು ಶಾಸಕನಾಗಿ ಆಯ್ಕೆಯಾದ ಬಳಿಕ ನಾಲ್ಕು ಬಾರಿ ಅಮೆರಿಕಾಕ್ಕೆ ಹೋಗಿರುವುದು ನಿಜ ಎಂದು ಒಪ್ಪಿಕೊಂಡಿದ್ದಾರೆ. ಅಲ್ಲದೇ ಹೀಗೆ ಮಾಡುವುದು ತಪ್ಪೆಂದು ತಿಳಿದಿದೆ, ನನ್ನ ಕೆಲ ವೈಯಕ್ತಿಕ ಸಮಸ್ಯೆಗಳಿದ್ದು ಅವುಗಳನ್ನು ಪರಿಹರಿಸಿಕೊಳ್ಳಲು ಹೋಗುತ್ತಿದ್ದೇನೆ ಅಷ್ಟೇ ಎಂದೂ ಸಹ ದರ್ಶನ್ ಪುಟ್ಟಣ್ಣಯ್ಯ ತಿಳಿಸಿದ್ದಾರೆ. ಈ ಮೂಲಕ ಕಂಪನಿ ಕೆಲಸದ ನಿಮಿತ್ತ ಅಮೆರಿಕಾಗೆ ತೆರಳುತ್ತಿಲ್ಲ ಎಂಬ ಸ್ಪಷ್ಟನೆಯನ್ನು ನೀಡಿದರು.
ಅಮೆರಿಕಾದಲ್ಲಿ ತನ್ನ ಹೆಂಡತಿ ಹಾಗೂ ಮಕ್ಕಳಿದ್ದು ಅಲ್ಲಿಗೆ ತೆರಳಬೇಕಾಗಿರುವುದು ಅನಿವಾರ್ಯವಾಗಿದೆ. ಮುಂದಿನ ದಿನಗಳಲ್ಲಿ ಇದನ್ನು ಸರಿಪಡಿಸಿಕೊಳ್ಳಲಿದ್ದೇನೆ. ನಾನು ಅಮೆರಿಕಾಗೆ ಹೋಗುತ್ತಿರುವುದನ್ನು ಸಮರ್ಥಿಸಿಕೊಳ್ಳುತ್ತಿಲ್ಲ ಎಂದು ತಿಳಿಸಿದರು.
ಅಲ್ಲದೇ ನಾನು ಅಮೆರಿಕಾಗೆ ತೆರಳಿದರೂ ಇಲ್ಲಿ ಕೆಲಸ ಮಾಡಲು ತಂಡವನ್ನು ಇಟ್ಟಿದ್ದೇನೆ. ಇಲ್ಲಿ ನನ್ನ ತಂಡದವರು ಕೆಲಸಗಳನ್ನು ನೋಡಿಕೊಳ್ಳುತ್ತಿದ್ದಾರೆ. ನಮ್ಮ ಕ್ಷೇತ್ರದಲ್ಲಿ ಫೋನ್ ಮಾಡಿ ಹೇಳಿದ್ರೆ ಮಾತ್ರ ಕೆಲಸ ಆಗೋದು. ಜನರು ನನ್ನ ಬಳಿ ಸಮಸ್ಯೆ ಹೇಳಿಕೊಳ್ಳುತ್ತಾರೆ. ನಾನು ಅದನ್ನು ಅಧಿಕಾರಿಗಳಿಗೆ ತಿಳಿಸಿ ಮಾಡಿಸುತ್ತೇನೆ. ಜನರ ಸಮಸ್ಯೆಗಳು ಬೇಗ ಪರಿಹಾರ ಆಗಬೇಕು. ಶಾಸಕನ ಬಳಿ ಬರುವುದಕ್ಕಿಂತ ಸರ್ಕಾರಿ ಕಚೇರಿಗಳ ಬಳಿ ಹೋಗಬೇಕು. ವ್ಯವಸ್ಥೆ ಬದಲಾಗಬೇಕು ಎಂದು ಅವರು ಹೇಳಿದರು.
ಇನ್ನೂ ಮುಂದುವರಿದು ಮಾತನಾಡಿದ ಅವರು ನಾನು ಈಗಾಗಲೇ ನನ್ನ ಕಂಪನಿಗಳನ್ನು ಮಾರಾಟ ಮಾಡಿದ್ದೇನೆ. 2021ರ ಮೇ 21ರಂದು ಕಂಪನಿಗಳು ಮಾರಾಟವಾಗಿವೆ. ಗೂಗಲ್ನಲ್ಲಿ ಚೆಕ್ ಮಾಡಿ ನೋಡಿ. ಈಗ ನನಗೂ ಆ ಕಂಪನಿಗಳಿಗೂ ಸಂಬಂಧವಿಲ್ಲ. ಮೈಸೂರಿನಲ್ಲೂ ನನ್ನ ಆಫೀಸ್ ಇತ್ತು. ಈಗ ಅದು ಅದರ ಮಾಲೀಕರ ಹೆಸರು ಬೇರೆ ಇದೆ ಎಂದು ತಿಳಿಸಿದರು.
ಹಾಸನ: ಸಿಡಿಲು ಬಡಿದು ಮಹಿಳೆ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಆಲೂರು ತಾಲ್ಲೂಕಿನಲ್ಲಿ ನಡೆದಿದೆ. ನೀಲಮ್ಮ ಎಂಬುವವರೇ ಸಿಡಿಲು ಬಡಿದು ಸಾವನ್ನಪ್ಪಿರುವ…
ನವದೆಹಲಿ: ಬೈಸರನ್ ವ್ಯಾಲಿಗೆ ಪ್ರವಾಸಕ್ಕೆಂದು ಹೋಗಿದ್ದಾಗ 26 ಜನರು ಸಾವನ್ನಪ್ಪಿದ್ದ ಭಯೋತ್ಪಾದಕ ದಾಳಿಗೆ ನಾಳೆ ಒಂದು ವರ್ಷ. ಭಾರತೀಯ ಸೇನೆ…
ಪಿರಿಯಾಪಟ್ಟಣ: ಬಿಜೆಪಿಯ ಅಪಪ್ರಚಾರಕ್ಕೆ ಅಭಿವೃದ್ದಿ ಕಾರ್ಯಗಳ ಮೂಲಕವೇ ಉತ್ತರ ನೀಡುತ್ತಿದ್ದೇವೆ. ನಮ್ಮ ಅಭಿವೃದ್ಧಿ ಕಾರ್ಯಗಳು ಜನರಿಗೆ ಮುಟ್ಟಿವೆ. ಜನ ನಮ್ಮ…
ಶ್ರೀರಂಗಪಟ್ಟಣ: ಮಕ್ಕಳಲ್ಲಿರುವ ಪ್ರತಿಭೆಯನ್ನು ಹೊರತರಲು ಬೇಸಿಗೆ ಶಿಬಿರಗಳು ಅತ್ಯುತ್ತಮ ವೇದಿಕೆಯಾಗಿದ್ದು, ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಮಕ್ಕಳ ವ್ಯಕ್ತಿತ್ವ…
ತಿರುವನಂತಪುರಂ: ಕೇರಳದ ತ್ರಿಶೂರ್ ಪುರಂ ಉತ್ಸವಕ್ಕೆ ಸಿಡಿಮದ್ದು ತಯಾರಿಸುತ್ತಿದ್ದ ಕಾರ್ಖಾನೆಯಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು, ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ.…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಗ್ರಾಮದಲ್ಲಿ ನಡೆಯುತ್ತಿರುವ ಶ್ರೀ ಆದಿಶಕ್ತಿ ಮಾರಮ್ಮ ಜಾತ್ರಾ…