ಜಿಲ್ಲೆಗಳು

ಪದೇಪದೇ ಅಮೆರಿಕಾಕ್ಕೆ ಹೋಗುತ್ತಿರುವುದಕ್ಕೆ ಕಾರಣ ಕೊಟ್ಟ ಶಾಸಕ ದರ್ಶನ್‌ ಪುಟ್ಟಣ್ಣಯ್ಯ

ಮಂಡ್ಯದ ಮೇಲುಕೋಟೆಯ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಪದೇಪದೇ ಅಮೆರಿಕಾಕ್ಕೆ ತೆರಳುತ್ತಾರೆ ಎಂದು ಕ್ಷೇತ್ರದ ಮತದಾರರು ಕೆಲ ದಿನಗಳ ಹಿಂದೆ ಅಸಮಾಧಾನ ಹೊರಹಾಕಿದ್ದರು. ಶಾಸಕನಾಗಿ ಆಯ್ಕೆಯಾದ ಮೇಲೆ ನಾಲ್ಕನೇ ಬಾರಿಗೆ ಅಮೆರಿಕಾಗೆ ತೆರಳಿದ್ದಾಗ ಮಾಧ್ಯಮದಲ್ಲಿಯೂ ಸುದ್ದಿಯಾಗಿತ್ತು.

ಈ ಕುರಿತು ಇದೀಗ ದರ್ಶನ್‌ ಪುಟ್ಟಣ್ಣಯ್ಯ ಮಾತನಾಡಿದ್ದು ಶಾಸಕನಾಗಿ ಆಯ್ಕೆಯಾದ ಬಳಿಕ ನಾಲ್ಕು ಬಾರಿ ಅಮೆರಿಕಾಕ್ಕೆ ಹೋಗಿರುವುದು ನಿಜ ಎಂದು ಒಪ್ಪಿಕೊಂಡಿದ್ದಾರೆ. ಅಲ್ಲದೇ ಹೀಗೆ ಮಾಡುವುದು ತಪ್ಪೆಂದು ತಿಳಿದಿದೆ, ನನ್ನ ಕೆಲ ವೈಯಕ್ತಿಕ ಸಮಸ್ಯೆಗಳಿದ್ದು ಅವುಗಳನ್ನು ಪರಿಹರಿಸಿಕೊಳ್ಳಲು ಹೋಗುತ್ತಿದ್ದೇನೆ ಅಷ್ಟೇ ಎಂದೂ ಸಹ ದರ್ಶನ್‌ ಪುಟ್ಟಣ್ಣಯ್ಯ ತಿಳಿಸಿದ್ದಾರೆ. ಈ ಮೂಲಕ ಕಂಪನಿ ಕೆಲಸದ ನಿಮಿತ್ತ ಅಮೆರಿಕಾಗೆ ತೆರಳುತ್ತಿಲ್ಲ ಎಂಬ ಸ್ಪಷ್ಟನೆಯನ್ನು ನೀಡಿದರು.

ಅಮೆರಿಕಾದಲ್ಲಿ ತನ್ನ ಹೆಂಡತಿ ಹಾಗೂ ಮಕ್ಕಳಿದ್ದು ಅಲ್ಲಿಗೆ ತೆರಳಬೇಕಾಗಿರುವುದು ಅನಿವಾರ್ಯವಾಗಿದೆ. ಮುಂದಿನ ದಿನಗಳಲ್ಲಿ ಇದನ್ನು ಸರಿಪಡಿಸಿಕೊಳ್ಳಲಿದ್ದೇನೆ. ನಾನು ಅಮೆರಿಕಾಗೆ ಹೋಗುತ್ತಿರುವುದನ್ನು ಸಮರ್ಥಿಸಿಕೊಳ್ಳುತ್ತಿಲ್ಲ ಎಂದು ತಿಳಿಸಿದರು.

ಅಲ್ಲದೇ ನಾನು ಅಮೆರಿಕಾಗೆ ತೆರಳಿದರೂ ಇಲ್ಲಿ ಕೆಲಸ ಮಾಡಲು ತಂಡವನ್ನು ಇಟ್ಟಿದ್ದೇನೆ. ಇಲ್ಲಿ ನನ್ನ ತಂಡದವರು ಕೆಲಸಗಳನ್ನು ನೋಡಿಕೊಳ್ಳುತ್ತಿದ್ದಾರೆ. ನಮ್ಮ ಕ್ಷೇತ್ರದಲ್ಲಿ ಫೋನ್‌ ಮಾಡಿ ಹೇಳಿದ್ರೆ ಮಾತ್ರ ಕೆಲಸ ಆಗೋದು. ಜನರು ನನ್ನ ಬಳಿ ಸಮಸ್ಯೆ ಹೇಳಿಕೊಳ್ಳುತ್ತಾರೆ. ನಾನು ಅದನ್ನು ಅಧಿಕಾರಿಗಳಿಗೆ ತಿಳಿಸಿ ಮಾಡಿಸುತ್ತೇನೆ. ಜನರ ಸಮಸ್ಯೆಗಳು ಬೇಗ ಪರಿಹಾರ ಆಗಬೇಕು. ಶಾಸಕನ ಬಳಿ ಬರುವುದಕ್ಕಿಂತ ಸರ್ಕಾರಿ ಕಚೇರಿಗಳ ಬಳಿ ಹೋಗಬೇಕು. ವ್ಯವಸ್ಥೆ ಬದಲಾಗಬೇಕು ಎಂದು ಅವರು ಹೇಳಿದರು.

ಇನ್ನೂ ಮುಂದುವರಿದು ಮಾತನಾಡಿದ ಅವರು ನಾನು ಈಗಾಗಲೇ ನನ್ನ ಕಂಪನಿಗಳನ್ನು ಮಾರಾಟ ಮಾಡಿದ್ದೇನೆ. 2021ರ ಮೇ 21ರಂದು ಕಂಪನಿಗಳು ಮಾರಾಟವಾಗಿವೆ. ಗೂಗಲ್‌ನಲ್ಲಿ ಚೆಕ್‌ ಮಾಡಿ ನೋಡಿ. ಈಗ ನನಗೂ ಆ ಕಂಪನಿಗಳಿಗೂ ಸಂಬಂಧವಿಲ್ಲ. ಮೈಸೂರಿನಲ್ಲೂ ನನ್ನ ಆಫೀಸ್‌ ಇತ್ತು. ಈಗ ಅದು ಅದರ ಮಾಲೀಕರ ಹೆಸರು ಬೇರೆ ಇದೆ ಎಂದು ತಿಳಿಸಿದರು.

andolana

Recent Posts

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

5 hours ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

5 hours ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

5 hours ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

5 hours ago

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

17 hours ago