ಜಿಲ್ಲೆಗಳು

ದಸರಾ ದರ್ಶನದಲ್ಲಿ ಜನರ ಸಡಗರ!

ಮೈಸೂರು: ಗ್ರಾಮಾಂತರ ಪ್ರದೇಶದ ಜನರಿಗೆ ಅರಮನೆ ಸೇರಿದಂತೆ ಇನ್ನಿತರ ಕಾರ್ಯಕ್ರಮಗಳನ್ನು ವೀಕ್ಷಿಸಲು ಆಯೋಜಿಸಿರುವ ದಸರಾ ದರ್ಶನ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಅರಮನೆ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನ ಆವರಣದಲ್ಲಿ ಸಾರಿಗೆ ಬಸ್ ಗಳಿಗೆ ಪೂಜೆ ಸಲ್ಲಿಸಿದ ನಂತರ ಹಸಿರು ನಿಶಾನೆ ತೋರಲಾಯಿತು. ಜಿಲ್ಲೆಯ ಒಂಬತ್ತು ತಾಲ್ಲೂಕುಗಳಿಂದ ತಲಾ ಮೂರು ಬಸ್ ಗಳಂತೆ ೮೧ ಬಸ್ ಗಳಲ್ಲಿ ಸಾರ್ವಜನಿಕರನ್ನು ಕರೆತಂದು ದರ್ಶನ ಮಾಡಿಸಲಾಯಿತು. ಅರಮನೆ,ಚಾಮುಂಡಿ ಬೆಟ್ಟ,ವಸ್ತುಪ್ರದರ್ಶನ ಮೊದಲಾದ ಸ್ಥಳಗಳನ್ನು ತೋರಿಸಲಾಗುತ್ತದೆ. ಸಂಜೆ ಅರಮನೆಯ ಆವರಣದಲ್ಲಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮ ವೀಕ್ಷಣೆ ಮಾಡಿದ ಬಳಿಕ ವಾಪಸು ಊರಿಗೆ ಕರೆದೊಯ್ಯಲಾಗುತ್ತದೆ.ಸಾರ್ವಜನಿಕರು ೫೦ ರೂಪಾಯಿ ಕೊಟ್ಟು ಪಾಸ್ ಪಡೆಯುವುದು ಬಿಟ್ಟರೆ ಉಳಿದಂತೆ ತಿಂಡಿ,ಊಟ ಉಚಿತವಾಗಿ ಕಲ್ಪಿಸಲಾಗುತ್ತದೆ.

ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಶಾಸಕ ಎಸ್.ಎ.ರಾಮದಾಸ್, ಸಾರಿಗೆ ವಿಭಾಗೀಯ ನಿಯಂತ್ರಣಾಧಿಕಾರಿ‌‌ ಆಶೋಕ್ ಕುಮಾರ್ ದಸರಾ ದರ್ಶನಕ್ಕೆ ಚಾಲನೆ ನೀಡಿದರು. ಮೈಸೂರು ತಾಲ್ಲೂಕಿನ ವಿವಿಧ ಹಳ್ಳಿಗಳಿಂದ ಬಂದಿದವರು ಬಹಳ‌ಸಂತೋಷವಾಗಿ ವೀಕ್ಷಣೆಗೆ ಹೊರಟರು

andolanait

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

17 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

21 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

21 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

21 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

21 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

21 hours ago