ಮೈಸೂರು : ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ‘ಸಾವರ್ಕರ್ ರಥಯಾತ್ರೆ’ಗೆ ಚಾಲನೆ ನೀಡಿ ಬಳಿಕ ದಸರಾ ಗಜ ಪಡೆಗಳು ಇರುವ ಸ್ಥಳಕ್ಕೆ ಭೇಟಿ ನೀಡಿ ಆನೆಗಳಿಗೆ ಫಲತಾಂಬೂಲ ನೀಡಿದರು.
ಇಂದು ನಗರದ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿ ‘ಸಾವರ್ಕರ್ ರಥಯಾತ್ರೆ’ಗೆ ಚಾಲನೆ ನೀಡಿದ್ದಾರೆ. ಈ ಯಾತ್ರೆಯು ಸಾವರ್ಕರ್ ಅವರ ಬಗ್ಗೆ, ಅವರ ದೇಶಭಕ್ತಿ, ಹೋರಾಟಗಳ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ವೀರ್ ಸಾವರ್ಕರ್ ಪ್ರತಿಷ್ಠಾನದ ವತಿಯಿಂದ ಆಯೋಜಿಸಗಿದ್ದು, ಯಾತ್ರೆಯು ಟೆರಿಷಿಯನ್ ಕಾಲೇಜು ಮಾರ್ಗವಾಗಿ ಕ್ಯಾತಮಾರನಹಳ್ಳಿ, ತಿಲಕನಗರ, ಮಾತೃ ಮಂಡಳಿ ವೃತ್ತ, ಟೆಂಟ್ ವೃತ್ತ, ವಿವೇಕಾನಂದ ನಗರ, ಚಾಮುಂಡಿಪುರಂ ವೃತ್ತ ಸೇರಿದಂತೆ ಹಲವು ಪ್ರದೇಶಗಳಲ್ಲಿ ಸಂಚಾರ ಮಾಡಲಿದೆ.
ಆ.24 ರ ನಾಳೆ ಮೈಸೂರು ಜಿಲ್ಲೆಯ ಜಯಪುರ, ಹಂಪಾಪುರ, ಎಚ್.ಡಿ.ಕೋಟೆ, ಸರಗೂರು ಭಾಗಗಳಲ್ಲಿ ರಥಯಾತ್ರೆ ನಡೆಯಲಿದೆ. ಆ.೨೫ರಂದು ನಂಜನಗೂಡು, ಬೇಗೂರು, ಗುಂಡ್ಲುಪೇಟೆ, ತೆರಕಣಾಂಬಿ. ಆ.೨೬ರಂದು ಚಾಮರಾಜನಗರ, ಸಂತೇಮರಹಳ್ಳಿ, ಯಳಂದೂರು, ಕೊಳ್ಳೇಗಾಲ, ಹನೂರು, ಕೌದಳ್ಳಿ. ಆ.೨೭ರಂದು ತಿ.ನರಸೀಪುರ, ಬನ್ನೂರು, ಕಿರುಗಾವಲು, ಮಳವಳ್ಳಿ, ಹಲಗೂರು, ಕೆ.ಎಂ.ದೊಡ್ಡಿ, ಮದ್ದೂರು, ಬೇಸಗರಹಳ್ಳಿ. ಆ.೨೮ರಂದು ಕೊಪ್ಪ, ಮಂಡ್ಯ, ಶ್ರೀರಂಗಪಟ್ಟಣ, ಪಾಂಡವಪುರ. ಆ.೨೯ರಂದು ಕಿಕ್ಕೇರಿ, ಕೆ.ಆರ್.ಪೇಟೆ, ಸಾಲಿಗ್ರಾಮ, ಪಿರಿಯಾಪಟ್ಟಣದಲ್ಲಿ ರಥಯಾತ್ರೆ ನಡೆಯಲಿದ್ದು, ಆ.೩೦ರಂದು ಹುಣಸೂರು ಮಾರ್ಗವಾಗಿ ಮೈಸೂರಿಗೆ ಹಿಂದಿರುಗಲಿದೆ. ಬಳಿಕ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಬಳಿ ಸಮಾರೋಪ ಸಮಾರಂಭ ಜರುಗಲಿದೆ.
ನಂಜನಗೂಡು : ಹಾಡಾ ಹಗಲೇ ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಸ್ಕೂಟಿಯಿಂದ ಹಣ ಕದ್ದ ಘಟನೆ ಪಟ್ಟಣದ ಮಿನಿ ವಿಧಾನಸೌಧದ ಬಳಿ…
ಮೈಸೂರು : ದಸರಾ ವಸ್ತು ಪ್ರದರ್ಶನವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಆಕರ್ಷಣೀಯವಾಗಿಸಲು ಕರ್ನಾಟಕ ಪ್ರದರ್ಶನ ಪ್ರಾಧಿಕಾರವು ವಸ್ತು ಪ್ರದರ್ಶನ ಆವರಣವನ್ನು…
ಬೆಂಗಳೂರು: ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ…
ಮೈಸೂರು: ಇಂದು ಆಷಾಢ ಮಾಸದ ಮೊದಲ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡ ಅಧಿದೇವತೆ ಚಾಮುಂಡೇಶ್ವರಿಗೆ ಮಹಾಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಇಡೀ…
ಈ ವರ್ಷ ನಾಡ ಹಬ್ಬ ದಸರಾದಲ್ಲಿ ಕಂಬಳ ಕ್ರೀಡೆಯನ್ನು ಆಯೋಜಿಸಲು ಸರ್ಕಾರ ಹಠಕ್ಕೆ ಬಿದ್ದಂತೆ ವರ್ತಿಸುತ್ತಿದೆ. ಈಗಾಗಲೇ ಸಾರ್ವಜನಿಕರು ಹಾಗೂ…
ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನೆಲೆಸಿರುವ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆಯಲು ಪ್ರತಿ ವರ್ಷ ಆಷಾಢ ಮಾಸದ ಶುಕ್ರವಾರಗಳಂದು…