ಜಿಲ್ಲೆಗಳು

ಗೋಪಾಲಸ್ವಾಮಿಗೆ ಯಾವತ್ತೂ ಒಂದೇಟು ಹೊಡೆಯುವ ಅಗತ್ಯ ಬಂದಿರಲಿಲ್ಲ…

ಮೈಸೂರು: ಆತ ಎಷ್ಟು ವಿಧೇಯ ಆಗಿದ್ದ ಎಂದರೆ, ಯಾವತ್ತೂ ಒಂದೇಟು ಹೊಡೆಯುವ ಅಗತ್ಯ ಬಂದಿರಲಿಲ್ಲ, ಗದರಿದ ಪ್ರಸಂಗವೂ ಇಲ್ಲ. ಹುಲಿ, ಆನೆ ಹಿಡಿಯುವ ಕಾರ್ಯಾಚರಣೆಯಲ್ಲಿ ಆತ ಯಾವತ್ತೂ ಮುಂದಿರುತ್ತಿದ್ದ. ನಾವು ಹೇಳುವುದನ್ನು ಸನ್ನೆ ಮೂಲಕವೇ ಅರ್ಥ ಮಾಡಿಕೊಂಡು ಇತರ ಆನೆಗಳನ್ನು ಜತೆಗೆ ಕರೆದೊಯ್ಯುತ್ತಿದ್ದ ಎಂದು ಕಣ್ಣೀರಾಗುತ್ತಾರೆ ಕಾವಾಡಿ ಮಂಜ.

ಅಭಿಮನ್ಯು ಆನೆಯ ಉತ್ತರಾಧಿಕಾರಿಯಾಗಿ ಮುಂದೊಂದು ದಿನ ದಸರಾ ಮೆರವಣಿಗೆಯಲ್ಲಿ ಅಂಬಾರಿ ಹೊರಬೇಕಿದ್ದ ಗೋಪಾಲಸ್ವಾಮಿ ಆನೆ ಈಗ ನೆನಪು ಮಾತ್ರ. ಕಾಡಾನೆಯೊಂದಿಗಿನ ಕಾದಾಟದಲ್ಲಿ ದಾರುಣ ಸಾವು ಕಂಡ ಈ ಆನೆಯ ಗುಣ ವಿಶೇಷಗಳು ಒಂದೆರಡಲ್ಲ. ಗಾತ್ರದಲ್ಲಿ ದೈತ್ಯನಾದರೂ ತನ್ನ ಸೌಮ್ಯ ಮತ್ತು ಸ್ನೇಹಪೂರ್ಣ ನಡವಳಿಕೆಯಿಂದ ಮಾವುತರು ಕಾವಾಡಿಗರು ಮತ್ತು ಅಧಿಕಾರಿ ವರ್ಗದ ಪ್ರೀತಿಗೆ ಪಾತ್ರವಾಗಿದ್ದ ಆನೆಯಿದು.


ಪುಂಡಾನೆಯ ಜತೆಗಿನ ಕಾದಾಟದಲ್ಲಿ ಗೋಪಾಲಸ್ವಾಮಿಯ ಸಾವಿಗೆ ಈ ಸೌಮ್ಯ ಸ್ವಭಾವವೇ ಕಾರಣವಾಗಿರಬಹುದು ಎನ್ನುವ ಮಾತುಗಳು ಈಗ ಕೇಳಿ ಬರುತ್ತಿವೆ. ಆನೆಯ ಮಾವುತ ಮಂಜು ಮತ್ತು ಕಾವಾಡಿ ಮಂಜ ಗೋಪಾಲಸ್ವಾಮಿಯ ಸಾವಿನ ದು:ಖದಿಂದ ಇನ್ನೂ ಹೊರಗೆ ಬಂದಿಲ್ಲ. ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಮಾವುತ ಮಂಜು ಅಂಬಾರಿ ಆನೆಯಾಗಿ ಗೋಪಾಲಸ್ವಾಮಿಯನ್ನು ಮುನ್ನಡೆಸಬೇಕಿತ್ತು.
“ ಆತ ಒಂದು ಆನೆ ಮಾತ್ರವಲ್ಲ, ನಮ್ಮ ಮನೆಯ ಸದಸ್ಯನಂತೆ ಇದ್ದ. ನಮ್ಮ ಜತೆ ಕಣ್ಣಾಮುಚ್ಚಾಲೆ ಆಟವಾಡುತ್ತಿದ್ದ. ವಾಲಿಬಾಲ್‌ ಆಟವಾಡುತ್ತಿದ್ದ. ಮಕ್ಕಳ ಜತೆ ತುಂಟಾಟವಾಡುತ್ತಿದ್ದʼʼ ಎಂದು ಗೋಪಾಲಸ್ವಾಮಿಯನ್ನು ನೆನಪಿಸಿಕೊಂಡು ಈಗಲೂ ದು:ಖಿಸುತ್ತಾರೆ ಮಾವುತ ಮಂಜು.

ಇತ್ತೀಚೆಗೆ ದಸರಾ ಮಹೋತ್ಸವದಲ್ಲಿ ಭಾಗಿಯಾಗಿದ್ದ ಗೋಪಾಲಸ್ವಾಮಿಯನ್ನು ಮುಂದಿನ ಅಂಬಾರಿ ಆನೆ ಎಂದೇ ಪರಿಗಣಿಸಿ ವಿಶೇಷ ತರಬೇತಿ ನೀಡಲಾಗಿತ್ತು. ಮೈಸೂರಿನಲ್ಲಿ ದಸರಾ ಪೂರ್ವ ಕವಾಯತಿನಲ್ಲಿ ಗೋಪಾಲಸ್ವಾಮಿಗೆ ಮರದ ಅಂಬಾರಿ ಹೊರಿಸಿ ಕ್ಷಮತೆಯನ್ನು ಪರೀಕ್ಷಿಸಲಾಗಿತ್ತು.

ಶ್ರೀರಂಗಪಟ್ಟಣದ ದಸರಾ ಮಹೋತ್ಸವದಲ್ಲೂ ಈ ಆನೆಯನ್ನು ಬಳಸಿಕೊಳ್ಳಲಾಗಿತ್ತು. ಇದೆಲ್ಲವನ್ನೂ ಯಶಸ್ವಿಯಾಗಿ ಪೂರೈಸಿದ್ದ ಗೋಪಾಲಸ್ವಾಮಿ ಇನ್ನು ಮೂರು ವರ್ಷಗಳಲ್ಲಿ ಅಭಿಮನ್ಯುವಿನ ಉತ್ತರಾಧಿಕಾರಿಯಾಗಿ ಅಂಬಾರಿ ಹೊರಬೇಕಿತ್ತು. ಇದಕ್ಕೆ ಬೇಕಾದ ಎಲ್ಲ ಅರ್ಹತೆಗಳೂ ಗೋಪಾಲಸ್ವಾಮಿಗಿತ್ತು.

ದಸರಾ ಸಂದರ್ಭದಲ್ಲಿ ಅರ್ಜುನ ಬಿಟ್ಟರೆ ಅತಿ ಹೆಚ್ಚು ತೂಕದ ಆನೆಯಾಗಿ ಗುರುತಿಸಿಕೊಂಡಿದ್ದು ಗೋಪಾಲಸ್ವಾಮಿ. ಅಂಬಾರಿ ಆನೆಯಾಗಿದ್ದ ಅಭಿಮನ್ಯು 5000 ಕಿಲೋ ತೂಗಿದರೆ ಬರೋಬ್ಬರಿ 320 ಕಿಲೋ ಹೆಚ್ಚಿಸಿಕೊಂಡಿದ್ದ ಗೋಪಾಲಸ್ವಾಮಿ 5460 ಕಿಲೋ ತೂಕ ದಾಖಲಿಸಿ ಗಮನ ಸೆಳೆದಿದ್ದ.

ಸುಮಾರು ಮೂರು ಮೀಟರ್ ಎತ್ತರವಿದ್ದ ಗೋಪಾಲಸ್ವಾಮಿಗೆ ದಸರಾ ಗಜಪಡೆಯಲ್ಲಿ ಅತಿ ಎತ್ತರದ ಆನೆಯೆಂಬ ಹೆಗ್ಗಳಿಕೆಯೂ ಇತ್ತು. 41 ವರ್ಷದ ಗೋಪಾಲಸ್ವಾಮಿ ಅಂಬಾರಿ ಹೊರುವ ಅವಕಾಶ ಪಡೆದಿದ್ದರೆ ಸತತ 16 ವರ್ಷಗಳ ಕಾಲ ಜಂಬೂಸವಾರಿಗೆ ನಾಯಕನಾಗುವ ಅವಕಾಶವಿತ್ತು. ಆದರೆ ಹುಣಸೂರು ತಾಲ್ಲೂಕಿನ ಮತ್ತಿಗೋಡು ಆನೆ ಶಿಬಿರದಲ್ಲಿದ್ದ ಗೋಪಾಲಸ್ವಾಮಿ ಯಾರೂ ನಿರೀಕ್ಷಿಸದ ರೀತಿಯಲ್ಲಿ ಅಕಾಲಿಕ ಸಾವು ಕಂಡಿದ್ದಾನೆ.

andolana

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

6 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

8 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

8 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

9 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

10 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

10 hours ago