ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ 2022 ರ ಅಂಗವಾಗಿ ದಸರಾ ಗಜಪಡೆಗಳಿಗೆ ಆ.14 ರಿಂದ ಪ್ರತಿನಿತ್ಯ (ಬನ್ನಿಮಂಟಪದ ವರೆಗೆ ) ತಾಲೀಮು ಆರಂಭವಾಗಲಿದೆ ಎಂದು ಡಿಸಿಎಫ್ ಕರಿಕಾಳನ್ ಅವರು ಇಂದು ಆಂದೋಲನಕ್ಕೆ ತಿಳಿಸಿದ್ದಾರೆ.
ಮಾಧ್ಯಮದೊಟ್ಟಿಗೆ ಮಾತನಾಡಿದ ಅವರು ದಸರಾ ಆನೆಗಳಿಗೆ ಮೈಸೂರಿನ ಧನ್ವಂತ್ರಿ ರಸ್ತೆಯಲ್ಲಿರುವ ತೂಕ ಹಾಕುವ ವೇವ್ ಬ್ರಿಡ್ಜ್ ನಲ್ಲಿ ಆನೆಗಳಿಗೆ ತೂಕ ಹಾಕಲಾಯಿತು. ಇಲ್ಲಿಗೆ ಆನೆಗಳನ್ನು ಬಲರಾಮ ಗೇಟ್ ನಿಂದ ವಾರ್ತಾಭವನದ ಪಕ್ಕದಲ್ಲಿರುವ ಸಾಯಿರಾಮ್ ವೇ ಬ್ರಿಡ್ಜ್ ಮಾರ್ಗವಾಗಿ ಮೆಡಿಕಲ್ ಕಾಲೇಜಿಗೆ ಬಂದು ಕೆ. ಆರ್. ಸರ್ಕಲ್ ಬಳಿ ವಾಪಸ್ ಕರೆದುಕೊಂಡು ಬರಲಾಯಿತು ಈ ಮೂಲಕ ಆನೆಗಳಿಗೆ ಮೂರುವರೆ ಕಿ.ಮೀ ವಾಕ್ ಮಾಡಿಲಾಯಿತು ಎಂದರು.
ಇನ್ನೂ ಆನೆಗಳ ಆರೈಕೆಯ ಬಗ್ಗೆ ಮಾತನಾಡಿ ಆನೆಗಳಿಗೆ ಆರೈಕೆಯು ಬಹಳ ಚೆನ್ನಾಗಿ ನಡೆಯುತ್ತಿದೆ. ನೆನ್ನೆಯಿಂದ ಮೂರುವರೆ ಕಿ.ಮೀ ನಡೆದುಕೊಂಡು ಬಂದಿವೆ. ಅನೆಗಳಿಗೆ ಆ.14 ನೇ ತಾರೀಖಿನಿಂದ ಪ್ರತಿನಿತ್ಯ ಜಂಬೂಸವಾರಿಯ ತಾಲೀಮು ಮಾಡಿಸಲಾಗುವುದು ಎಂದರು. ಈಗ ಆನೆಗಳಿಗೆ ಆಹಾರ ನೀಡುತ್ತಿರುವುದರಿಂದ ಅವುಗಳಿಗೆ ವ್ಯಾಯಾಮದ ಅಗತ್ಯ ಬಹಳಷ್ಟಿದೆ ಹೀಗಾಗಿ ನಾಳೆ ಮತ್ತು ನಾಳಿಂದು ಅರಮನೆ ಒಳಗಡೆ ಬೆಳಿಗ್ಗೆ 2 ರಿಂದ 3 ಕಿ.ಮೀ ಮತ್ತು ಸಂಜೆ 3 ಕಿ.ಮೀ ಆನೆಗಳನ್ನು ಹೊರಗೆ ಕರೆದುಕೊಂಡು ಹೋಗಲಾಗುವುದು ಎಂದರು.
ಬೆಂಗಳೂರು: ಸೈಬರ್ ಅಪರಾಧಗಳು ಸೇರಿದಂತೆ ನಾನಾ ಅಪರಾಧಗಳಲ್ಲಿ ನಮ್ಮ ರಾಜ್ಯ ರಾಷ್ಟ್ರೀಯ ಸರಾಸರಿಗಿಂತ ಹೆಚ್ಚಾಗಿದ್ದು ಇದನ್ನು ಕಟ್ಟುನಿಟ್ಟಾಗಿ ತಡೆಗಟ್ಟಿ ಎಂದು…
ಹಾಸನ: ಕಾರೊಂದು ನಿಯಂತ್ರಣ ತಪ್ಪಿ ಅಡಿಕೆ ತೋಟಕ್ಕೆ ನುಗ್ಗಿ ಪಲ್ಟಿಯಾದ ಪರಿಣಾಮ ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆ…
ವಾಷಿಂಗ್ಟನ್: ಯುದ್ಧಕ್ಕೆ ಸಂಬಂಧಿಸಿದಂತೆ ಅಮೇರಿಕಾ ಪ್ರಜೆಗಳನ್ನು ಉದ್ದೇಶಿಸಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾಷಣ ಮಾಡಿದ ಬೆನ್ನಲ್ಲೇ ಕಚ್ಚಾ ತೈಲದ ಬೆಲೆ…
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಇಂದು ವಿಶ್ವ ಹಿಂದೂ ಪರಿಷತ್ ವತಿಯಿಂದ ಶೋಭಾಯಾತ್ರೆ ಹಮ್ಮಿಕೊಳ್ಳಲಾಗಿದೆ. ನಗರದಾದ್ಯಂತ ಕೇಸರಿ ಬಾವುಟ, ಬ್ಯಾನರ್,…
ವಾಷಿಂಗ್ಟನ್: ಇನ್ನು ಎರಡು ಅಥವಾ ಮೂರು ವಾರಗಳಲ್ಲಿ ಯುದ್ಧ ಅಂತ್ಯಗೊಳ್ಳಲಿದೆ ಎಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ದೇಶವನ್ನು…
ಲಕ್ಷ್ಮಿಕಾಂತ್ ಕೊಮಾರಪ್ಪ ಗ್ರಾಮೀಣ ಭಾಗದಲ್ಲಿ ಮನೆಮಾಡಿದ ಸಂಭ್ರಮ; ಭಕ್ತಿ ಭಾವದಿಂದ ಪ್ರಕೃತಿ-ಗ್ರಾಮದೇವಿಗೆ ಪೂಜೆ ಸೋಮವಾರಪೇಟೆ: ಗ್ರಾಮೀಣ ಪ್ರದೇಶದ ಜನಪದದ ಪ್ರಮುಖ…