ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ 2022 ರ ಅಂಗವಾಗಿ ದಸರಾ ಗಜಪಡೆಗಳಿಗೆ ಆ.14 ರಿಂದ ಪ್ರತಿನಿತ್ಯ (ಬನ್ನಿಮಂಟಪದ ವರೆಗೆ ) ತಾಲೀಮು ಆರಂಭವಾಗಲಿದೆ ಎಂದು ಡಿಸಿಎಫ್ ಕರಿಕಾಳನ್ ಅವರು ಇಂದು ಆಂದೋಲನಕ್ಕೆ ತಿಳಿಸಿದ್ದಾರೆ.
ಮಾಧ್ಯಮದೊಟ್ಟಿಗೆ ಮಾತನಾಡಿದ ಅವರು ದಸರಾ ಆನೆಗಳಿಗೆ ಮೈಸೂರಿನ ಧನ್ವಂತ್ರಿ ರಸ್ತೆಯಲ್ಲಿರುವ ತೂಕ ಹಾಕುವ ವೇವ್ ಬ್ರಿಡ್ಜ್ ನಲ್ಲಿ ಆನೆಗಳಿಗೆ ತೂಕ ಹಾಕಲಾಯಿತು. ಇಲ್ಲಿಗೆ ಆನೆಗಳನ್ನು ಬಲರಾಮ ಗೇಟ್ ನಿಂದ ವಾರ್ತಾಭವನದ ಪಕ್ಕದಲ್ಲಿರುವ ಸಾಯಿರಾಮ್ ವೇ ಬ್ರಿಡ್ಜ್ ಮಾರ್ಗವಾಗಿ ಮೆಡಿಕಲ್ ಕಾಲೇಜಿಗೆ ಬಂದು ಕೆ. ಆರ್. ಸರ್ಕಲ್ ಬಳಿ ವಾಪಸ್ ಕರೆದುಕೊಂಡು ಬರಲಾಯಿತು ಈ ಮೂಲಕ ಆನೆಗಳಿಗೆ ಮೂರುವರೆ ಕಿ.ಮೀ ವಾಕ್ ಮಾಡಿಲಾಯಿತು ಎಂದರು.
ಇನ್ನೂ ಆನೆಗಳ ಆರೈಕೆಯ ಬಗ್ಗೆ ಮಾತನಾಡಿ ಆನೆಗಳಿಗೆ ಆರೈಕೆಯು ಬಹಳ ಚೆನ್ನಾಗಿ ನಡೆಯುತ್ತಿದೆ. ನೆನ್ನೆಯಿಂದ ಮೂರುವರೆ ಕಿ.ಮೀ ನಡೆದುಕೊಂಡು ಬಂದಿವೆ. ಅನೆಗಳಿಗೆ ಆ.14 ನೇ ತಾರೀಖಿನಿಂದ ಪ್ರತಿನಿತ್ಯ ಜಂಬೂಸವಾರಿಯ ತಾಲೀಮು ಮಾಡಿಸಲಾಗುವುದು ಎಂದರು. ಈಗ ಆನೆಗಳಿಗೆ ಆಹಾರ ನೀಡುತ್ತಿರುವುದರಿಂದ ಅವುಗಳಿಗೆ ವ್ಯಾಯಾಮದ ಅಗತ್ಯ ಬಹಳಷ್ಟಿದೆ ಹೀಗಾಗಿ ನಾಳೆ ಮತ್ತು ನಾಳಿಂದು ಅರಮನೆ ಒಳಗಡೆ ಬೆಳಿಗ್ಗೆ 2 ರಿಂದ 3 ಕಿ.ಮೀ ಮತ್ತು ಸಂಜೆ 3 ಕಿ.ಮೀ ಆನೆಗಳನ್ನು ಹೊರಗೆ ಕರೆದುಕೊಂಡು ಹೋಗಲಾಗುವುದು ಎಂದರು.
ಕಲಬುರಗಿ : ಮುಖ್ಯಮಂತ್ರಿಯಾಗಿ ನೇಮಕಗೊಂಡ ಡಿ.ಕೆ. ಶಿವಕುಮಾರ್ ನೇತೃತ್ವದ ಕರ್ನಾಟಕದಲ್ಲಿ ನೂತನ ಸಚಿವ ಸಂಪುಟ ರಚನೆಗೆ ಸಂಬಂಧಿಸಿದಂತೆ ಪಕ್ಷದ ನಾಯಕತ್ವಕ್ಕೆ…
ಬೆಂಗಳೂರು : ಡಿ.ಕೆ.ಶಿವಕುಮಾರ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಬೆನ್ನಲ್ಲೇ ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ಪ್ರಬಲ ನಾಯಕರ ನಡುವೆ…
ವರ್ಷಕ್ಕೊಮ್ಮೆ ಎದುರುಗೊಳ್ಳುವ ಈ ಸುಂದರ ಕಾಲ ಹೊಸತೊಂದು ಯುಗದ ಆರಂಭಕ್ಕೆ ಭಾಷ್ಯ ಬರೆದಂತೆ ಭಾಸವಾಗುತ್ತದೆ. ಮಕ್ಕಳ ಹುಮ್ಮಸ್ಸನ್ನು ನೋಡುವುದೇ ಒಂದು…
ಕನಸುಗಂಗಳ ಈ ಹುಡುಗಿಯರ ಕಲರವದಿಂದಾಗಿ ಜಡವಾಗಿದ್ದ ಕಟ್ಟಡಗಳಿಗೆ ಜೀವ ಬರುತ್ತದೆ. ಅವರ ನಡಿಗೆಯ ಚುರುಕುತನದಿಂದ ಸುತ್ತಲಿನ ಪರಿಸರ ಚಲನಶೀಲವಾಗುತ್ತದೆ. ಸುಧಾ…
ವರ್ಷವಿಡೀ ಪಾಠ ಮಾಡಿ ಸುಸ್ತಾದ ಶಿಕ್ಷಕರು ಬೇಸಿಗೆ ರಜಕ್ಕಾಗಿ ಎಷ್ಟೇ ಹಂಬಲಿಸಿದರೂ ಕೂಡ ರಜೆ ಮುಗಿಯುವ ಹೊತ್ತಿಗೆ ಬೇಸರವಾಗಿ ಎಷ್ಟು…