ಜಿಲ್ಲೆಗಳು

ದಸರಾ ಗಜಪಡೆಗಳಿಗೆ ನಾಳೆಯಿಂದ ಮರದ ಅಂಬಾರಿ ತಾಲೀಮು!

ಮೈಸೂರು : ವಿಶ್ವವಿಖ್ಯಾತಿಯ ಮೈಸೂರು ದಸರಾ ಗಜಪಡೆಗಳಿಗೆ ನಾಳೆಯಿಂದ ಮರದ ಅಂಬಾರಿಯ ತಾಲೀಮು ನಡೆಯಲಿದೆ.

ಆನೆಗೆ ಔಪಚಾರಿಕ ಪೂಜೆಯನ್ನು ಸಲ್ಲಿಸುವುದರ ಮೂಲಕ ಮರದ ಅಂಬಾರಿ ಹೊರುವ ತಾಲೀಮು ಆರಂಭವಾಗಲಿದ್ದು, ಮರದ ಅಂಬಾರಿಗೆ ಸಂಜೆ 4 ಗಂಟೆಗೆ ಪೂಜೆಯು ನಡೆಯಲಿದೆ. ಬಳಿಕ 4:30 ಕ್ಕೆ ಕ್ರೇನ್‌ ಮೂಲಕ ಆನೆಗಳಿಗೆ ಮರದ ಅಂಬಾರಿಯನ್ನು ಕಟ್ಟಿದ ನಂತರ ಅಂಬಾರಿಯನ್ನು ಹೊತ್ತ ಆನೆಗಳು ಸಂಜೆ 05.00 ಗಂಟೆಗೆ ಅರಮನೆಯ ಮೂಲಕವಾಗಿ  ಬನ್ನಿ ಮಂಟಪಕ್ಕೆ ಸಾಗಲಿವೆ. ಎಂದು ವನ್ಯಜೀವಿ ವಿಭಾಗದ ಡಿಸಿಎಫ್‌ ಕರಿಕಾಳನ್ ಅವರು ತಿಳಿಸಿದ್ದಾರೆ.

ಮರದ ಅಂಬಾರಿಯ ಟೈಮ್‌ ಟೇಬಲ್‌  ಇಲ್ಲಿದೆ ನೋಡಿ
ಸಂಜೆ 4 ಗಂಟೆ – ಮರದ ಅಂಬಾರಿಗೆ ಪೂಜೆ
ಸಂಜೆ  4 : 30 ಕ್ಕೆ – ಕ್ರೇನ್‌ ಮೂಲಕ ಆನೆಗಳಿಗೆ ಮರದ ಅಂಬಾರಿ ಕಟ್ಟಿವುದು
ಸಂಜೆ 5 ಗಂಟೆ – ಅರಮನೆಯ ಮೂಲಕವಾಗಿ  ಬನ್ನಿ ಮಂಟಪಕ್ಕೆ ಸಾಗಲಿವೆ ಆನೆಗಳು


ಭೀಮ ಮತ್ತು ಮಹೇಂದ್ರ

ಎಲ್ಲರ ಗಮನ ಸೆಳೆದಿದ್ದ  ಭೀಮ ಮತ್ತು ಮಹೇಂದ್ರ ಆನೆಗಳ ಸಂಭಾಷಣೆ !
ಮಧ್ಯಾಹ್ನದ ಹೊತ್ತು. ಬಿರುಬಿಸಿಲು ಬೇರೆ. ಇಂತಹ ಸಮಯದಲ್ಲಿ ತಮ್ಮ ಮುಂದೆ ರಾಶಿಗಟ್ಟಲೆ ಬಿದಿದ್ದ ಆಲದ ಸೊಪ್ಪು ಹಾಗೂ ಹಸಿರು ಹುಲ್ಲನ್ನು ಸೊಂಡಿಲಲ್ಲಿ ಎತ್ತುಕೊಂಡು ಬಾಯಿಗೆ ಹಾಕಿಕೊಳ್ಳುತ್ತಿದ್ದ ಭೀಮ-ಮಹೇಂದ್ರರು ಇದರ ಮಧ್ಯದಲ್ಲಿ ತುಸು ಮಾತುಕತೆಯಾಡಲು ಪ್ರಾರಂಭಿಸಿದರು.

ಮಹೇಂದ್ರನ ಕಡೆಗೆ ತಿರುಗಿ, ತನ್ನ ಸೊಂಡಿಲನ್ನು ಆತನ ಸೊಂಡಿಲಿಗೆ ತಾಗಿಸುತ್ತಾ ಮಾತಿಗೆ ಶುರುಮಾಡಿದ ಭೀಮ, ‘ಅಣ್ಣ ನಿನಗೆ ಇದು ಮೊದಲ ದಸರಾವಂತೆ. ಈ ಅರಮನೆ, ಮೈಸೂರು ಬೀದಿ ನೋಡಿ ಏನು ಅನ್ನಿಸುತ್ತಿದೆ’ ಎನ್ನುತ್ತಾ ಪ್ರೀತಿಯಿಂದಲೇ ಕೊಂಬಿನಿಂದ ತಿವಿದ.
ಏನು ಹೇಳಲಿ ಭೀಮ. ಎಲ್ಲವೂ ಹೊಸತರದಂತೆ ಕಾಣುತ್ತಿದೆ. ನಮ್ಮ ಎದುರಿಗೆ ಇರುವ ದೊಡ್ಡ ಕಟ್ಟಡ. ಸಂಜೆ – ಬೆಳಿಗ್ಗೆ ಹೊತ್ತಿನಲ್ಲಿ ಹಾದಿಯಲ್ಲಿ ನಾವು ಹೋಗುವ ಸಮಯದಲ್ಲಿ ಕಾಣುವ ಬಣ್ಣ-ಬಣ್ಣದ ಉಡುಗೆ ತೊಟ್ಟ ಜನ, ಅವರ ಅರಚಾಟ- ಚೀರಾಟ, ವಾಹನಗಳ ಸದ್ದು ಎಲ್ಲವೂ ಮೊದಲಿಗೆ ಗಾಬರಿ ಪಡಿಸುತ್ತಿದ್ದವು. ಇನ್ನೇನು ಇಪ್ಪತ್ತು ದಿನಗಳಾಯಿತ್ತಲ್ಲ ಈಗ ಹೊಂದುಕೊಂಡಿದ್ದೇನೆ. ಅದು ಸರಿ ಮುಂದೆ ಇನ್ನೇನು ಮಾಡಬೇಕು ನಾವು’ ಎಂದು ಭೀಮನಿಗೆ ಮರು ಪ್ರಶ್ನೆ ಹಾಕಿದ ಮಹೇಂದ್ರ.
‘ಮುಂದೆ ಇರೋದು ಕನಾಣ್ಣ. ಇನ್ನೊಂದು ತಿಂಗಳು, ಜಂಬೂಸವಾರಿ ಅಂತ ಮಾಡ್ತಾರೆ. ಲಕ್ಷಾಂತರ ಜನ ಬಂದು ಸೇರುತ್ತಾರೆ. ನಮಗೆಲ್ಲ ಮಿಂಚು-ಮಿಂಚುವ ಬಟ್ಟೆಗಳನ್ನು ತೊಡಿಸಿ, ಬಣ್ಣಗಳಿಂದ ನಮ್ಮ ಮುಖ, ಕಾಲು, ಸೊಂಡಿಲಿಗೆಲ್ಲ ಚಿತ್ತಾರ ಬಿಡಿಸಿ ಸಿಂಗಾರ ಮಾಡುತ್ತಾರೆ. ಆ ವೈಭವ ನೋಡಬೇಕು ನೀನು. ಆಮೇಲೆ ವರ್ಷ-ವರ್ಷ ಇಲ್ಲಿಗೆ ಬರಬೇಕು ಎನ್ನುವೆ’ ಎಂದು ಖುಷಿಯಿಂದಲೇ ಹೇಳುತ್ತಿರಬೇಕಾದರೆ ಪಕ್ಕದಲ್ಲಿ ಗುರ್ರ‌್‌ ಎನ್ನುತ್ತಾ ನಿಂತಿದ್ದ ಅರ್ಜುನ, ‘ಮಧ್ಯಾಹ್ನದ ಹೊತ್ತು ಸ್ವಲ್ಪ ಸಮಾಧಾನವಾಗಿ ನಿದ್ದೆ ಮಾಡಲು ಬಿಡುವುದಿಲ್ಲ. ಮಾತನಾಡದೇ ಇರುವುದಕ್ಕೆ ಆಗುವುದಿಲ್ವ’ ಎಂದು ಗದರಿದ. ಭೀಮ-ಮಹೇಂದ್ರರು ಎದುರು ದಿಕ್ಕಿಗೆ ಮುಖ ಹಾಕಿ ನಿಂತರು.

 

 

andolanait

Recent Posts

ಅರಣ್ಯ ಕಾಯುವುದಕ್ಕೆ ರೆಡಿ ಆಯ್ತು ಬೆಲ್ಜಿಯಂ ಶ್ವಾನ

ಗುಂಡ್ಲುಪೇಟೆ: ಬಂಡೀಪುರ ರಾಜ್ಯದಲ್ಲೇ ಅತಿ ಹೆಚ್ಚು ಹುಲಿ, ಚಿರತೆ ಹಾಗೂ ಆನೆಗಳಿರುವ ತಾಣ. ಈ ಅರಣ್ಯದಲ್ಲಿ ದೇಶದಲ್ಲೇ ಮೊದಲ ಟ್ರ್ಯಾಕರ್…

19 mins ago

ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಮುಂದೂಡಿಕೆ

ಬೆಳಗಾವಿ: ಬೆಳಗಾವಿಯಲ್ಲಿ ನಾಳೆಯಿಂದ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಈ ಹಿನ್ನೆಲೆಯಲ್ಲಿ ನಿಗದಿಯಾಗಿದ್ದ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಮುಂದೂಡಿಕೆ…

21 mins ago

ಗೋವಾ ನೈಟ್‌ಕ್ಲಬ್‌ನಲ್ಲಿ ಬೆಂಕಿ ದುರಂತ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶ ನೀಡಿದ ಸಿಎಂ ಪ್ರಮೋದ್‌ ಸಾವಂತ್‌

ಪಣಜಿ: ಗೋವಾದ ನೈಟ್‌ಕ್ಲಬ್‌ನಲ್ಲಿ ಸಂಭವಿಸಿದ ಬೆಂಕಿ ದುರಂತದಲ್ಲಿ 25 ಜನರು ಸಾವನ್ನಪ್ಪಿರುವ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ತನಿಖೆಗೆ ಆದೇಶ…

34 mins ago

ನನ್ನದು ಕೃಷ್ಣತತ್ವ ಕಾಂಗ್ರೆಸ್ ಪಕ್ಷದ್ದು ಕಂಸತತ್ವ: ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು

ನವದೆಹಲಿ: ಭಗವದ್ಗೀತೆಯನ್ನು ಶಾಲಾ ಮಕ್ಕಳಿಗೆ ಬೋಧಿಸಬೇಕು ಎಂದು ಪುನರುಚ್ಚರಿಸಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು, ತಮ್ಮನ್ನು ಮನುವಾದಿ ಎಂದ ಮುಖ್ಯಮಂತ್ರಿ…

40 mins ago

ರಾಜ್ಯವನ್ನು ಡ್ರಗ್ಸ್ ಮಕ್ತಗೊಳಿಸುವವರೆಗೆ ವಿರಮಿಸುವುದಿಲ್ಲ: ಸಚಿವ ಡಾ.ಜಿ.ಪರಮೇಶ್ವರ್

ಬೆಂಗಳೂರು: ರಾಜ್ಯವನ್ನು ಮಾದಕ ವ್ಯಸನ ಮುಕ್ತಗೊಳಿಸುವ ನಿಟ್ಟಿನಲ್ಲಿ ಮಾದಕ ವಸ್ತುಗಳ ಮಾರಾಟಗಾರರು, ಬಳಕೆದಾರರ ವಿರುದ್ಧ ಸರ್ಕಾರ ಮತ್ತು ಪೊಲೀಸರು ಸಮರ…

1 hour ago

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣ: ಡಿಸಿಎಂ ಡಿಕೆಶಿ ಆಪ್ತ ಇನಾಯತ್‌ಗೆ ನೋಟಿಸ್‌ ಜಾರಿ

ಬೆಂಗಳೂರು: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಆಪ್ತನಿಗೂ ನೋಟಿಸ್‌ ನೀಡಲಾಗಿದೆ. ಮಂಗಳೂರಿನ ಕಾಂಗ್ರೆಸ್‌ ಮುಖಂಡ ಇನಾಯತ್‌ ಅಲಿ ಅವರಿಗೆ…

2 hours ago