ಜಿಲ್ಲೆಗಳು

ದಸರಾ ಗಜಪಡೆಗಳಿಗೆ ನಾಳೆಯಿಂದ ಮರದ ಅಂಬಾರಿ ತಾಲೀಮು!

ಮೈಸೂರು : ವಿಶ್ವವಿಖ್ಯಾತಿಯ ಮೈಸೂರು ದಸರಾ ಗಜಪಡೆಗಳಿಗೆ ನಾಳೆಯಿಂದ ಮರದ ಅಂಬಾರಿಯ ತಾಲೀಮು ನಡೆಯಲಿದೆ.

ಆನೆಗೆ ಔಪಚಾರಿಕ ಪೂಜೆಯನ್ನು ಸಲ್ಲಿಸುವುದರ ಮೂಲಕ ಮರದ ಅಂಬಾರಿ ಹೊರುವ ತಾಲೀಮು ಆರಂಭವಾಗಲಿದ್ದು, ಮರದ ಅಂಬಾರಿಗೆ ಸಂಜೆ 4 ಗಂಟೆಗೆ ಪೂಜೆಯು ನಡೆಯಲಿದೆ. ಬಳಿಕ 4:30 ಕ್ಕೆ ಕ್ರೇನ್‌ ಮೂಲಕ ಆನೆಗಳಿಗೆ ಮರದ ಅಂಬಾರಿಯನ್ನು ಕಟ್ಟಿದ ನಂತರ ಅಂಬಾರಿಯನ್ನು ಹೊತ್ತ ಆನೆಗಳು ಸಂಜೆ 05.00 ಗಂಟೆಗೆ ಅರಮನೆಯ ಮೂಲಕವಾಗಿ  ಬನ್ನಿ ಮಂಟಪಕ್ಕೆ ಸಾಗಲಿವೆ. ಎಂದು ವನ್ಯಜೀವಿ ವಿಭಾಗದ ಡಿಸಿಎಫ್‌ ಕರಿಕಾಳನ್ ಅವರು ತಿಳಿಸಿದ್ದಾರೆ.

ಮರದ ಅಂಬಾರಿಯ ಟೈಮ್‌ ಟೇಬಲ್‌  ಇಲ್ಲಿದೆ ನೋಡಿ
ಸಂಜೆ 4 ಗಂಟೆ – ಮರದ ಅಂಬಾರಿಗೆ ಪೂಜೆ
ಸಂಜೆ  4 : 30 ಕ್ಕೆ – ಕ್ರೇನ್‌ ಮೂಲಕ ಆನೆಗಳಿಗೆ ಮರದ ಅಂಬಾರಿ ಕಟ್ಟಿವುದು
ಸಂಜೆ 5 ಗಂಟೆ – ಅರಮನೆಯ ಮೂಲಕವಾಗಿ  ಬನ್ನಿ ಮಂಟಪಕ್ಕೆ ಸಾಗಲಿವೆ ಆನೆಗಳು


ಭೀಮ ಮತ್ತು ಮಹೇಂದ್ರ

ಎಲ್ಲರ ಗಮನ ಸೆಳೆದಿದ್ದ  ಭೀಮ ಮತ್ತು ಮಹೇಂದ್ರ ಆನೆಗಳ ಸಂಭಾಷಣೆ !
ಮಧ್ಯಾಹ್ನದ ಹೊತ್ತು. ಬಿರುಬಿಸಿಲು ಬೇರೆ. ಇಂತಹ ಸಮಯದಲ್ಲಿ ತಮ್ಮ ಮುಂದೆ ರಾಶಿಗಟ್ಟಲೆ ಬಿದಿದ್ದ ಆಲದ ಸೊಪ್ಪು ಹಾಗೂ ಹಸಿರು ಹುಲ್ಲನ್ನು ಸೊಂಡಿಲಲ್ಲಿ ಎತ್ತುಕೊಂಡು ಬಾಯಿಗೆ ಹಾಕಿಕೊಳ್ಳುತ್ತಿದ್ದ ಭೀಮ-ಮಹೇಂದ್ರರು ಇದರ ಮಧ್ಯದಲ್ಲಿ ತುಸು ಮಾತುಕತೆಯಾಡಲು ಪ್ರಾರಂಭಿಸಿದರು.

ಮಹೇಂದ್ರನ ಕಡೆಗೆ ತಿರುಗಿ, ತನ್ನ ಸೊಂಡಿಲನ್ನು ಆತನ ಸೊಂಡಿಲಿಗೆ ತಾಗಿಸುತ್ತಾ ಮಾತಿಗೆ ಶುರುಮಾಡಿದ ಭೀಮ, ‘ಅಣ್ಣ ನಿನಗೆ ಇದು ಮೊದಲ ದಸರಾವಂತೆ. ಈ ಅರಮನೆ, ಮೈಸೂರು ಬೀದಿ ನೋಡಿ ಏನು ಅನ್ನಿಸುತ್ತಿದೆ’ ಎನ್ನುತ್ತಾ ಪ್ರೀತಿಯಿಂದಲೇ ಕೊಂಬಿನಿಂದ ತಿವಿದ.
ಏನು ಹೇಳಲಿ ಭೀಮ. ಎಲ್ಲವೂ ಹೊಸತರದಂತೆ ಕಾಣುತ್ತಿದೆ. ನಮ್ಮ ಎದುರಿಗೆ ಇರುವ ದೊಡ್ಡ ಕಟ್ಟಡ. ಸಂಜೆ – ಬೆಳಿಗ್ಗೆ ಹೊತ್ತಿನಲ್ಲಿ ಹಾದಿಯಲ್ಲಿ ನಾವು ಹೋಗುವ ಸಮಯದಲ್ಲಿ ಕಾಣುವ ಬಣ್ಣ-ಬಣ್ಣದ ಉಡುಗೆ ತೊಟ್ಟ ಜನ, ಅವರ ಅರಚಾಟ- ಚೀರಾಟ, ವಾಹನಗಳ ಸದ್ದು ಎಲ್ಲವೂ ಮೊದಲಿಗೆ ಗಾಬರಿ ಪಡಿಸುತ್ತಿದ್ದವು. ಇನ್ನೇನು ಇಪ್ಪತ್ತು ದಿನಗಳಾಯಿತ್ತಲ್ಲ ಈಗ ಹೊಂದುಕೊಂಡಿದ್ದೇನೆ. ಅದು ಸರಿ ಮುಂದೆ ಇನ್ನೇನು ಮಾಡಬೇಕು ನಾವು’ ಎಂದು ಭೀಮನಿಗೆ ಮರು ಪ್ರಶ್ನೆ ಹಾಕಿದ ಮಹೇಂದ್ರ.
‘ಮುಂದೆ ಇರೋದು ಕನಾಣ್ಣ. ಇನ್ನೊಂದು ತಿಂಗಳು, ಜಂಬೂಸವಾರಿ ಅಂತ ಮಾಡ್ತಾರೆ. ಲಕ್ಷಾಂತರ ಜನ ಬಂದು ಸೇರುತ್ತಾರೆ. ನಮಗೆಲ್ಲ ಮಿಂಚು-ಮಿಂಚುವ ಬಟ್ಟೆಗಳನ್ನು ತೊಡಿಸಿ, ಬಣ್ಣಗಳಿಂದ ನಮ್ಮ ಮುಖ, ಕಾಲು, ಸೊಂಡಿಲಿಗೆಲ್ಲ ಚಿತ್ತಾರ ಬಿಡಿಸಿ ಸಿಂಗಾರ ಮಾಡುತ್ತಾರೆ. ಆ ವೈಭವ ನೋಡಬೇಕು ನೀನು. ಆಮೇಲೆ ವರ್ಷ-ವರ್ಷ ಇಲ್ಲಿಗೆ ಬರಬೇಕು ಎನ್ನುವೆ’ ಎಂದು ಖುಷಿಯಿಂದಲೇ ಹೇಳುತ್ತಿರಬೇಕಾದರೆ ಪಕ್ಕದಲ್ಲಿ ಗುರ್ರ‌್‌ ಎನ್ನುತ್ತಾ ನಿಂತಿದ್ದ ಅರ್ಜುನ, ‘ಮಧ್ಯಾಹ್ನದ ಹೊತ್ತು ಸ್ವಲ್ಪ ಸಮಾಧಾನವಾಗಿ ನಿದ್ದೆ ಮಾಡಲು ಬಿಡುವುದಿಲ್ಲ. ಮಾತನಾಡದೇ ಇರುವುದಕ್ಕೆ ಆಗುವುದಿಲ್ವ’ ಎಂದು ಗದರಿದ. ಭೀಮ-ಮಹೇಂದ್ರರು ಎದುರು ದಿಕ್ಕಿಗೆ ಮುಖ ಹಾಕಿ ನಿಂತರು.

 

 

andolanait

Recent Posts

ಓದುಗರ ಪತ್ರ: ಸುಂಕ ಕದನಕೆ ತೆರೆ!

ಸುಂಕ ಕದನಕೆ ತೆರೆ! ಕೊನೆಗೂ ಭಾರತ ಅಮೆರಿಕ ಜಂಟಿಯಾಗಿ ಒಪ್ಪಂದಕೆ ಬಂದಿವೆ ಆಮದು ಸುಂಕ ಕಡಿತಗೊಳಿಸಲು ತೆರೆ ಬಿದ್ದಿದೆ ಸುಂಕ…

4 hours ago

ಓದುಗರ ಪತ್ರ: ಶಾಲೆಗೆ ಸುತ್ತುಗೋಡೆ ನಿರ್ಮಿಸಿ

ನಂಜನಗೂಡು ತಾಲ್ಲೂಕಿನ ಕಾರ್ಯ ಗ್ರಾಮದಲ್ಲಿ ರಸ್ತೆಯ ಪಕ್ಕದಲ್ಲೇ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಿದೆ. ಶಾಲೆಗೆ ಸುತ್ತುಗೋಡೆ ಇಲ್ಲದ ಕಾರಣ ಶಾಲೆಯಿಂದ…

4 hours ago

ಓದುಗರ ಪತ್ರ: ಜಿಲ್ಲಾ ನ್ಯಾಯಾಲಯಗಳಿಗೆ ಬಸ್ ಸೌಲಭ್ಯ ಕಲ್ಪಿಸಿ

ಮೈಸೂರಿನ ಜಿಲ್ಲಾ ನ್ಯಾಯಾಲಯಗಳಿಗೆ ಸಾಕಷ್ಟು ಬಸ್ ಸೌಲಭ್ಯವಿಲ್ಲದೆ ನ್ಯಾಯಾಲಯದ ಕಲಾಪಗಳಿಗೆ ಬರುವ ವಕೀಲರು ಹಾಗೂ ಕಕ್ಷಿದಾರರಿಗೆ ತೀವ್ರ ತೊಂದರೆಯಾಗಿದೆ. ನಗರ…

4 hours ago

ಓದುಗರ ಪತ್ರ: ಬೈಕ್ ವ್ಹೀಲಿಂಗ್ ಮಾಡುವವರಿಗೆ ಕಠಿಣ ಶಿಕ್ಷೆ ವಿಧಿಸಿ

ಬೈಕ್ ವ್ಹೀಲಿಂಗ್ ನಿಷೇಧಿಸಿದ್ದರೂ ಮೈಸೂರು ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ಬೈಕ್ ವ್ಹೀಲಿಂಗ್ ಮಾಡುವವರ ಸಂಖ್ಯೆ ಹೆಚ್ಚಾಗಿರುವುದು ಆತಂಕಕಾರಿ ಸಂಗತಿಯಾಗಿದೆ. ಯುವ…

4 hours ago

ಓದುಗರ ಪತ್ರ: ಮಹಾರಾಣಿ ಕಾಲೇಜಿನಲ್ಲಿ ಕ್ಯಾಂಟೀನ್ ಸೌಲಭ್ಯ ಕಲ್ಪಿಸಿ

ಮೈಸೂರಿನ ಮಹಾರಾಣಿ ಮಹಿಳಾ ಕಲಾ ಕಾಲೇಜಿನಲ್ಲಿ ಸಾವಿರಾರು ವಿದ್ಯಾರ್ಥಿನಿಯರು ವ್ಯಾಸಂಗ ಮಾಡುತ್ತಿದ್ದಾರೆ. ತರಗತಿಗಳು ಬೆಳಿಗ್ಗೆ ೮ ಗಂಟೆಗೆ ಪ್ರಾರಂಭವಾಗುವುದರಿಂದ ಬಹುತೇಕ…

4 hours ago

ಪಂಜು ಗಂಗೊಳ್ಳಿ ಅವರ ವಾರದ ಅಂಕಣ: ಸೆರೆಬ್ರಲ್ ಪಾಲ್ಸಿಯನ್ನು ಮಣಿಸಿ ಬದುಕು ಕಟ್ಟಿಕೊಂಡ ಸುಮಿತ್

‘ಪಿ.ಆರ್.ಸಿಗ್ನಲ್’ ಕಂಪೆನಿ ಸ್ಥಾಪಿಸಿ ವಿಶೇಷಚೇತನರಿಗೆ ನೆರವು ೩೪ ವರ್ಷ ಪ್ರಾಯದ ಸುಮಿತ್ ಅಗರ್ವಾಲ್ ಏಳನೇ ತಿಂಗಳಲ್ಲಿ ಅವಧಿಗೆ ಮೊದಲೇ ಹುಟ್ಟಿದವರು.…

4 hours ago