ಮೈಸೂರು: ದಸರಾ ಮಹೋತ್ಸವ ಅಂಗವಾಗಿ ಅರಮನೆ ವೇದಿಕೆಯಲ್ಲಿ ಅ.1ರಂದು ರಾತ್ರಿ 8 ಗಂಟೆಗೆ ಗ್ರ್ಯಾಂಡ್ ಸಿತಾರ್ ಸಿಂಫೋನಿ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಬೆಂಗಳೂರಿನ ಮನೋ ಮ್ಯೂಸಿಕ್ ಲೈನ್ಸ್ ತಂಡ ಈ ವಿಶಿಷ್ಟ ಕಾರ್ಯಕ್ರಮವನ್ನು ಒಂದೂವರೆ ಗಂಟೆಯವರೆಗೆ ಪ್ರಸ್ತುತಪಡಿಸಲಿದೆ. ಸುಮಾರಾಣಿ, ಶ್ರುತಿ ಕಾಮತ್, ಜ್ಯೋತಿ ಶ್ಯಾಮ್, ಸಿ.ಎಸ್. ಸರ್ವಮಂಗಳಾ, ಹಂಸಿಣಿ ಭಾರದ್ವಾಜ್, ಎಚ್.ಪಿ. ಶ್ರೀನಿವಾಸನ್, ವಿಜಯ್ ಗೋನಾಳ ಹಾಗೂ ಋತ್ವಿಕ್ ರಾವ್ ಅವರು ಸಿತಾರ್ ನುಡಿಸುವರು. ಇವರಿಗೆ ಕೊಳಲಿನಲ್ಲಿ ಗಣೇಶ್, ತಬಲಾದಲ್ಲಿ ಪ್ರದ್ಯುಮ್ನ ಸೊರಬ ಹಾಗೂ ಕಾರ್ತೀಕ್ ಭಟ್ ಸಾಥ್ ನೀಡುವರು.
ಪ್ರವೀಣ್ ಷಣ್ಮುಗಂ ಅವರು ಡ್ರಮ್, ಕೀಬೋರ್ಡ್ ನಲ್ಲಿ ವೇಣುಗೋಪಾಲ್ ಸಹಕರಿಸುವರು. ಸುಮುಖ್ ರವಿಶಂಕರ್ ಅವರು ಇತರ ಲಯವಾದ್ಯಗಳನ್ನು ನುಡಿಸುವರು.
ಸಿತಾರ್ ಜೊತೆಗೆ ತಬಲಾ, ಕೊಳಲು, ಡ್ರಮ್ ಹಾಗೂ ಕೀ ಬೋರ್ಡ್ ವಾದ್ಯಗಳ ಮೂಲಕ
ಶಾಸ್ತ್ರೀಯವಾಗಿ ರಾಗಗಳನ್ನು ಸಂಯೋಜಿಸಿ ಭಿನ್ನವಾದ ಸಂಗೀತ ನೀಡುವ ಮೂಲಕ ಎಲ್ಲ ವರ್ಗದ ಅದರಲ್ಲೂ ಯುವ ತಲೆಮಾರು ತಲುಪುವ ಉದ್ದೇಶ ತಂಡಕ್ಕಿದೆ.
ಈಗಾಗಲೇ ರಾಜ್ಯ ಹಾಗೂ ಅಂತರರಾಜ್ಯಗಳಲ್ಲಿ ಕಾರ್ಯಕ್ರಮ ನೀಡಿದ ಹೆಗ್ಗಳಿಕೆ ಈ ತಂಡದ್ದು.
ಸಿತಾರ್ ಸಿಂಫೋನಿಯ ರೂವಾರಿ ಸಂದೀಪ್ ವಸಿಷ್ಠ. ಅವರು ಕೊಳಲು ಹಾಗೂ ಸ್ಯಾಕ್ಸ್ ಫೋನ್ ನುಡಿಸುವ ಕಲಾವಿದರು.
ಕನ್ನಡಿಗರೇ ಇರುವ, ಎಲ್ಲ ವಯೋಮಾನದವರು ಇರುವ ಈ ತಂಡದಲ್ಲಿ ಸಿತಾರ್ ಸಂಗೀತವನ್ನು ಹೆಚ್ಚು ಜನರ ಬಳಿಗೆ ಕೊಂಡೊಯ್ಯಲು ಹಾಗೂ ಆಕರ್ಷಿಸಲು ಈ ತಂಡ ಸಜ್ಜಾಗಿದೆ.
ದೇಶದ ತುಂಬಾ ಇಂದು ಭಕ್ತ ಗಣ ಮಾಡುತ್ತಿದೆ ಜಪ ರಾಮ ರಾಮ... ಆ ಟ್ರಂಪಣ್ಣನೂ ಜಪಿಸುತ್ತಿದ್ದಾರಂತೆ ಯಾವಾಗ ಘೋಷಿಸುತ್ತದೆಯೋ ಇರಾನ್,…
ಕೆಲವು ತಿಂಗಳ ಹಿಂದೆ ಹೈದರಾಲಿರಸ್ತೆಯ ಎರಡೂ ಬದಿ ೪೦ ಮರಗಳನ್ನು ಹೊಂದಿ ಹಸಿರು ಕಂಗೊಳಿಸುತ್ತಿತ್ತು. ರಸ್ತೆ ಅಗಲೀಕರಣದ ನೆಪದಲ್ಲಿ ಅಹೋರಾತ್ರಿ…
ಇತ್ತೀಚಿನ ದಿನಗಳಲ್ಲಿ ಬೆಂಗಳೂರು, ಮೈಸೂರು, ಹೈದರಾಬಾದ್, ಮುಂಬೈನಂತಹ ನಗರ ಪ್ರದೇಶಗಳಲ್ಲಿ ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರೆ ಎಂಬ ಆಪ್…
ಕನ್ನಡ ಚಿತ್ರರಂಗ ಸದ್ದು ಮಾಡುತ್ತಿದೆ. ರಾಜ್ಯಮಟ್ಟದಲ್ಲಿ, ರಾಷ್ಟ್ರಮಟ್ಟದಲ್ಲಿ. ಅಭಿವ್ಯಕ್ತಿ ಸ್ವಾತಂತ್ರ್ಯದ ಎಲ್ಲ ಮುಖಗಳ ಪರಿಚಯವೂ ಈಗ ಆಗತೊಡಗಿದೆ. ನಿರ್ಮಾಪಕ ಕನಕಪುರ…
ಮಹಾದೇಶ್ ಎಂ.ಗೌಡ ಹನೂರು: ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ೨೪ ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ…
ಭೇರ್ಯ ಮಹೇಶ್ ಡಿಜಿಟಲ್ ಗ್ರಂಥಾಲಯ, ಸ್ವಚ್ಛತೆ, ನೈರ್ಮಲ್ಯ, ನೀರು ಸರಬರಾಜು, ಇನ್ನಿತರ ವಿಭಾಗಗಳಲ್ಲಿ ವಿಶೇಷ ಸಾಧನೆ ಭೇರ್ಯ: ಭಾರತದ ನಿಜವಾದ…