ಮೈಸೂರು: ದಸರಾ ಮಹೋತ್ಸವ ಅಂಗವಾಗಿ ಅರಮನೆ ವೇದಿಕೆಯಲ್ಲಿ ಅ.1ರಂದು ರಾತ್ರಿ 8 ಗಂಟೆಗೆ ಗ್ರ್ಯಾಂಡ್ ಸಿತಾರ್ ಸಿಂಫೋನಿ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಬೆಂಗಳೂರಿನ ಮನೋ ಮ್ಯೂಸಿಕ್ ಲೈನ್ಸ್ ತಂಡ ಈ ವಿಶಿಷ್ಟ ಕಾರ್ಯಕ್ರಮವನ್ನು ಒಂದೂವರೆ ಗಂಟೆಯವರೆಗೆ ಪ್ರಸ್ತುತಪಡಿಸಲಿದೆ. ಸುಮಾರಾಣಿ, ಶ್ರುತಿ ಕಾಮತ್, ಜ್ಯೋತಿ ಶ್ಯಾಮ್, ಸಿ.ಎಸ್. ಸರ್ವಮಂಗಳಾ, ಹಂಸಿಣಿ ಭಾರದ್ವಾಜ್, ಎಚ್.ಪಿ. ಶ್ರೀನಿವಾಸನ್, ವಿಜಯ್ ಗೋನಾಳ ಹಾಗೂ ಋತ್ವಿಕ್ ರಾವ್ ಅವರು ಸಿತಾರ್ ನುಡಿಸುವರು. ಇವರಿಗೆ ಕೊಳಲಿನಲ್ಲಿ ಗಣೇಶ್, ತಬಲಾದಲ್ಲಿ ಪ್ರದ್ಯುಮ್ನ ಸೊರಬ ಹಾಗೂ ಕಾರ್ತೀಕ್ ಭಟ್ ಸಾಥ್ ನೀಡುವರು.
ಪ್ರವೀಣ್ ಷಣ್ಮುಗಂ ಅವರು ಡ್ರಮ್, ಕೀಬೋರ್ಡ್ ನಲ್ಲಿ ವೇಣುಗೋಪಾಲ್ ಸಹಕರಿಸುವರು. ಸುಮುಖ್ ರವಿಶಂಕರ್ ಅವರು ಇತರ ಲಯವಾದ್ಯಗಳನ್ನು ನುಡಿಸುವರು.
ಸಿತಾರ್ ಜೊತೆಗೆ ತಬಲಾ, ಕೊಳಲು, ಡ್ರಮ್ ಹಾಗೂ ಕೀ ಬೋರ್ಡ್ ವಾದ್ಯಗಳ ಮೂಲಕ
ಶಾಸ್ತ್ರೀಯವಾಗಿ ರಾಗಗಳನ್ನು ಸಂಯೋಜಿಸಿ ಭಿನ್ನವಾದ ಸಂಗೀತ ನೀಡುವ ಮೂಲಕ ಎಲ್ಲ ವರ್ಗದ ಅದರಲ್ಲೂ ಯುವ ತಲೆಮಾರು ತಲುಪುವ ಉದ್ದೇಶ ತಂಡಕ್ಕಿದೆ.
ಈಗಾಗಲೇ ರಾಜ್ಯ ಹಾಗೂ ಅಂತರರಾಜ್ಯಗಳಲ್ಲಿ ಕಾರ್ಯಕ್ರಮ ನೀಡಿದ ಹೆಗ್ಗಳಿಕೆ ಈ ತಂಡದ್ದು.
ಸಿತಾರ್ ಸಿಂಫೋನಿಯ ರೂವಾರಿ ಸಂದೀಪ್ ವಸಿಷ್ಠ. ಅವರು ಕೊಳಲು ಹಾಗೂ ಸ್ಯಾಕ್ಸ್ ಫೋನ್ ನುಡಿಸುವ ಕಲಾವಿದರು.
ಕನ್ನಡಿಗರೇ ಇರುವ, ಎಲ್ಲ ವಯೋಮಾನದವರು ಇರುವ ಈ ತಂಡದಲ್ಲಿ ಸಿತಾರ್ ಸಂಗೀತವನ್ನು ಹೆಚ್ಚು ಜನರ ಬಳಿಗೆ ಕೊಂಡೊಯ್ಯಲು ಹಾಗೂ ಆಕರ್ಷಿಸಲು ಈ ತಂಡ ಸಜ್ಜಾಗಿದೆ.
ಬೆಂಗಳೂರು : ವ್ಯಕ್ತಿ, ಕುಟುಂಬ, ಕುಟುಂಬದ ಸದಸ್ಯರನ್ನು ಸಾಮಾಜಿಕವಾಗಿ ಬಹಿಷ್ಕರಿಸಿದರೆ ರೂ.1 ಲಕ್ಷದವರೆಗೆ ದಂಡ, ಮೂರು ವರ್ಷದವರೆಗೆ ಜೈಲು ಶಿಕ್ಷೆ…
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಒಟ್ಟಿಗೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್…
ಬೆಂಗಳೂರು : ಎಸ್ಎಸ್ಎಲ್ಸಿ ಪೂರ್ವಸಿದ್ಧತಾ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಿಧ ಜಿಲ್ಲೆಗಳ ಶಾಲಾ ಶಿಕ್ಷಕರು, ಸಹ ಶಿಕ್ಷಕರು,…
ಹನೂರು : ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಸನಿಹದಲ್ಲಿರುವ ತೊಳಸಿಕೆರೆ ಗ್ರಾಮದ ದುಮ್ಮತಂಬಡಿ ಅವರಿಗೆ ಸೇರಿದ ಹಸು ಜಮೀನಿನಲ್ಲಿ ಮೇಯುತ್ತಿದ್ದಾಗ…
ನಂಜನಗೂಡು : ʻಹತ್ತೂರು ಜಾತ್ರೆಗೆ ಸುತ್ತೂರು ಜಾತ್ರೆʼ ಸಮ ಎಂಬ ಗಾದೆ ಹೊಂದಿರುವ ಜಗದ್ಗುರು ಶ್ರೀ ಶಿವರಾತ್ರಿಶ್ವರ ಶಿವಯೋಗಿಗಳ ಜಾತ್ರಾ…
ಕಿಕ್ಕೇರಿ : ಗ್ರಾಮೀಣ ಬದುಕಿನ ಸವಾಲುಗಳ ನಡುವೆ ಬೆಳೆದ ರೈತನ ಮಗಳು ತನ್ನ ಅಕ್ಷರಾಸಕ್ತಿಯಿಂದ ಇಡೀ ತಾಲ್ಲೂಕಿನ ಹೆಮ್ಮೆಯ ಮಗಳಾಗಿ…