ಜಿಲ್ಲೆಗಳು

ದಸರಾ ಅಂಗವಾಗಿ ʼಗ್ರ್ಯಾಂಡ್ ಸಿತಾರ್ ಸಿಂಫೋನಿʼ ಕಾರ್ಯಕ್ರಮ

ಮೈಸೂರು: ದಸರಾ ಮಹೋತ್ಸವ ಅಂಗವಾಗಿ ಅರಮನೆ ವೇದಿಕೆಯಲ್ಲಿ ಅ.1ರಂದು ರಾತ್ರಿ 8 ಗಂಟೆಗೆ ಗ್ರ್ಯಾಂಡ್ ಸಿತಾರ್ ಸಿಂಫೋನಿ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಬೆಂಗಳೂರಿನ ಮನೋ ಮ್ಯೂಸಿಕ್ ಲೈನ್ಸ್ ತಂಡ ಈ ವಿಶಿಷ್ಟ ಕಾರ್ಯಕ್ರಮವನ್ನು ಒಂದೂವರೆ ಗಂಟೆಯವರೆಗೆ ಪ್ರಸ್ತುತಪಡಿಸಲಿದೆ. ಸುಮಾರಾಣಿ, ಶ್ರುತಿ ಕಾಮತ್, ಜ್ಯೋತಿ ಶ್ಯಾಮ್, ಸಿ.ಎಸ್. ಸರ್ವಮಂಗಳಾ, ಹಂಸಿಣಿ ಭಾರದ್ವಾಜ್, ಎಚ್.ಪಿ. ಶ್ರೀನಿವಾಸನ್, ವಿಜಯ್ ಗೋನಾಳ ಹಾಗೂ ಋತ್ವಿಕ್‌ ರಾವ್ ಅವರು ಸಿತಾರ್ ನುಡಿಸುವರು. ಇವರಿಗೆ ಕೊಳಲಿನಲ್ಲಿ ಗಣೇಶ್, ತಬಲಾದಲ್ಲಿ ಪ್ರದ್ಯುಮ್ನ ಸೊರಬ ಹಾಗೂ ಕಾರ್ತೀಕ್ ಭಟ್ ಸಾಥ್ ನೀಡುವರು.
ಪ್ರವೀಣ್ ಷಣ್ಮುಗಂ ಅವರು ಡ್ರಮ್, ಕೀಬೋರ್ಡ್ ನಲ್ಲಿ ವೇಣುಗೋಪಾಲ್ ಸಹಕರಿಸುವರು. ಸುಮುಖ್ ರವಿಶಂಕರ್ ಅವರು ಇತರ ಲಯವಾದ್ಯಗಳನ್ನು ನುಡಿಸುವರು.
ಸಿತಾರ್ ಜೊತೆಗೆ ತಬಲಾ, ಕೊಳಲು, ಡ್ರಮ್ ಹಾಗೂ ಕೀ ಬೋರ್ಡ್ ವಾದ್ಯಗಳ‌ ಮೂಲಕ
ಶಾಸ್ತ್ರೀಯವಾಗಿ ರಾಗಗಳನ್ನು ಸಂಯೋಜಿಸಿ ಭಿನ್ನವಾದ ಸಂಗೀತ ನೀಡುವ ಮೂಲಕ ಎಲ್ಲ ವರ್ಗದ ಅದರಲ್ಲೂ ಯುವ ತಲೆಮಾರು ತಲುಪುವ ಉದ್ದೇಶ ತಂಡಕ್ಕಿದೆ.
ಈಗಾಗಲೇ ರಾಜ್ಯ ಹಾಗೂ ಅಂತರರಾಜ್ಯಗಳಲ್ಲಿ ಕಾರ್ಯಕ್ರಮ ನೀಡಿದ ಹೆಗ್ಗಳಿಕೆ ಈ ತಂಡದ್ದು.
ಸಿತಾರ್ ಸಿಂಫೋನಿಯ ರೂವಾರಿ ಸಂದೀಪ್ ವಸಿಷ್ಠ. ಅವರು ಕೊಳಲು ಹಾಗೂ ಸ್ಯಾಕ್ಸ್ ಫೋನ್ ನುಡಿಸುವ ಕಲಾವಿದರು.
ಕನ್ನಡಿಗರೇ ಇರುವ, ಎಲ್ಲ ವಯೋಮಾನದವರು ಇರುವ ಈ ತಂಡದಲ್ಲಿ ಸಿತಾರ್ ಸಂಗೀತವನ್ನು ಹೆಚ್ಚು ಜನರ ಬಳಿಗೆ ಕೊಂಡೊಯ್ಯಲು ಹಾಗೂ ಆಕರ್ಷಿಸಲು ಈ ತಂಡ ಸಜ್ಜಾಗಿದೆ.

andolanait

Recent Posts

ಮೇ.3ರಂದು ನಡೆದಿದ್ದ ನೀಟ್‌ ಪರೀಕ್ಷೆ ರದ್ದು

ನವದೆಹಲಿ: ಮೇ.3ರಂದು ನಡೆದಿದ್ದ ನೀಟ್‌ ಯುಜಿ ಪರೀಕ್ಷೆಯನ್ನು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ರದ್ದುಗೊಳಿಸಿದೆ. ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಎನ್‌ಜಿಎ…

35 mins ago

ಅಸ್ಸಾಂ ಸಿಎಂ ಆಗಿ ಹಿಮಂತ ಬಿಸ್ವಾ ಶರ್ಮಾ ಪ್ರಮಾಣವಚನ ಸ್ವೀಕಾರ

ಗುವಾಹಟಿ: ಹಿಮಂತ ಬಿಸ್ವಾ ಶರ್ಮಾ ಅವರು ಸತತ ಎರಡನೇ ಬಾರಿಗೆ ಅಸ್ಸಾಂನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಗುವಾಹಟಿಯ ಖಾನಾಪಾರಾದಲ್ಲಿರುವ ಪಶುವೈದ್ಯಕೀಯ…

2 hours ago

SIR ಮೂಲಕ ರಾಜ್ಯದ 86 ಲಕ್ಷ ಮತದಾರರ ಹಕ್ಕಿಗೆ ಕನ್ನ: ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಆರೋಪ

ಮೈಸೂರು: SIR ಮೂಲಕ ರಾಜ್ಯದ 86 ಲಕ್ಷ ಮತದಾರರ ಹಕ್ಕಿಗೆ ಕನ್ನ ಹಾಕುವ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಕೆಪಿಸಿಸಿ ವಕ್ತಾರ…

2 hours ago

ತಮಿಳುನಾಡು ಸ್ಪೀಕರ್‌ ಆಗಿ ಶಾಸಕ ಪ್ರಭಾಕರ್‌ ಅವಿರೋಧ ಆಯ್ಕೆ

ಚೆನ್ನೈ: ತಮಿಳುನಾಡು ವಿಧಾನಸಭಾ ಸ್ಪೀಕರ್‌ ಆಗಿ ಶಾಸಕ ಜೆಸಿಡಿ ಪ್ರಭಾಕರ್‌ ಅವರಿಂದು ಸರ್ವಾನುಮತದಿಂದ ಆಯ್ಕೆಯಾದರು. ಸಿಎಂ ವಿಜಯ್‌ ಅವರು ಪ್ರಭಾಕರ್‌…

4 hours ago

90 ಅಡಿಗೆ ಕುಸಿದ ಕೆಆರ್‌ಎಸ್‌ ನೀರಿನ ಮಟ್ಟ

ಮಂಡ್ಯ: ರಾಜ್ಯದಲ್ಲಿ ತಾಪಮಾನ ಏರಿಕೆಯಾಗುತ್ತಿದ್ದಂತೆ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ 90 ಅಡಿಗೆ ಕುಸಿದಿದೆ. 124.80 ಅಡಿ ಗರಿಷ್ಠ ಮಟ್ಟವನ್ನು…

4 hours ago

ವಿಜಯ್ ಸಿಎಂ ಆದ ಹಿನ್ನೆಲೆ: ಗೋಪಿನಾಥಂನಲ್ಲಿ ಅಭಿಮಾನಿಗಳಿಂದ ಸಂಭ್ರಮಾಚರಣೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ…

4 hours ago