ಮೈಸೂರು : ವಿಶ್ವವಿಖ್ಯಾ ಮೈಸೂರು ದಸರಾ 2022 ರ ಅಂಗವಾಗಿ ನಾಡಿ ಗಮನ ಸೆಳೆಯುವ ಕವಿಗೋಷ್ಠಿ ಕಾರ್ಯಕ್ರಮದಲ್ಲಿ ವಿವಿಧ ಬಾಷೆಗಳ ಕವಿಗಳು ಭಾಗವಹಿಸುವ ಕವಿಗೋಷ್ಠಿಯಲ್ಲಿ ತುಳು, ಕೊಂಕಣಿ, ಕೊಡವ, ಅರೆಭಾಷೆ ಮತ್ತು ಎರವ ಭಾಷೆಗಳ ಕವಿತೆಗಳಿಗೆ ಈ ವರ್ಷ ಅವಕಾಶ ನೀಡಲಾಗಿದೆ. ಆದರೆ ಈ ಬಾರಿ ಕರಾವಳಿಯ ಬಹುಮುಖ್ಯವಾದ ಭಾಷೆಯಾದ ಬ್ಯಾರಿ ಭಾಷೆಯನ್ನು ಕಡೆಗಣಿಸಲಾಗಿದೆ. ಬ್ಯಾರಿ ಭಾಷೆಯ ಯಾವೊಬ್ಬ ಕವಿಗಳಿಗೂ ಅವಕಾಶ ನೀಡಿಲ್ಲ ಎಂದು ಕವಿಗಳು ಹಾಗೂ ಬ್ಯಾರೀಸ್ ವೆಲ್ ಫೇರ್ ಅಸೋಸಿಯೇಷನ್ ನ ಪದಾಧಿಕಾರಿಗಳಾದ ಬಿ.ಎಂ.ಹನೀಫ್ ಮತ್ತು ಟಿ.ಕೆ.ಷರೀಫ್ ಅವರು ಸರ್ಕಾರದ ನಡೆಗೆ ಬೇಸರವನ್ನು ವ್ಯಕ್ತಪಡಿಸಿದ್ದಾರೆ.
ಮುಂದುವರಿದು, ಬ್ಯಾರಿ ಭಾಷೆಯನ್ನು ರಾಜ್ಯದಲ್ಲಿ ಸುಮಾರು 12 ಲಕ್ಷಕ್ಕೂ ಅಧಿಕ ಮಂದಿ ಮಾತನಾಡುತ್ತಾರೆ. ನೂರಾರು ಕವಿಗಳು ಈ ಭಾಷೆಯಲ್ಲಿ ಕವಿತೆಗಳನ್ನು ರಚಿಸುತ್ತಿದ್ದಾರೆ. ಬ್ಯಾರಿ ಭಾಷೆಯ ಬೆಳವಣಿಗೆಗೆ ರಾಜ್ಯ ಸರಕಾರವೇ ಬ್ಯಾರಿ ಸಾಹಿತ್ಯ ಅಕಾಡೆಮಿಯನ್ನೂ ರಚಿಸಿದೆ. ಹೀಗಿರುವಾಗ ನಾಡಿನ ಪ್ರತಿಷ್ಠಿತ ದಸರಾ ಉತ್ಸವದ ಕವಿಗೋಷ್ಠಿಯಲ್ಲಿ ಬ್ಯಾರಿ ಭಾಷೆಗೆ ಈ ರೀತಿಯ ಅವಮಾನ ಮಾಡಿರುವುದು ಖಂಡಿತಾ ಸರಿಯಲ್ಲ.ಕನ್ನಡ ಸಾಹಿತ್ಯಕ್ಕೆ ಬ್ಯಾರಿ ಮಾತೃಭಾಷೆಯ ಹತ್ತಾರು ಲೇಖಕರು ಮಹತ್ವದ ಕೊಡುಗೆ ನೀಡಿದ್ದಾರೆ. ಕನ್ನಡದ ಮಹತ್ವದ ಮುಸ್ಲಿಂ ಹಿನ್ನೆಲೆಯ ಲೇಖಕರಲ್ಲಿ ಹೆಚ್ಚಿನವರು ಬ್ಯಾರಿ ಭಾಷಿಕರು. ದಸರಾ ಕವಿಗೋಷ್ಠಿ ಉಪಸಮಿತಿಗೆ ಇದ್ಯಾವುದೂ ಗೊತ್ತಿಲ್ಲವೇ? ಅಥವಾ ಗೊತ್ತಿದ್ದೂ ತಾರತಮ್ಯ ನೀತಿ ಅನುಸರಿಸಿದೆಯೆ? ಎಂದು ಪ್ರಶ್ನಿಸಿದ್ದಾರೆ.
ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಗೆ ಈಗ ಅಧ್ಯಕ್ಷರೂ ಇಲ್ಲದೆ, ಪೂರ್ಣಾವಧಿ ರಿಜಿಸ್ಟ್ರಾರ್ ಕೂಡಾ ಇಲ್ಲದೆ ಅಕಾಡೆಮಿಯ ಚಟುವಟಿಕೆಗಳು ಕುಂಠಿತಗೊಂಡಿವೆ. ಇದ್ದ ಅಧ್ಯಕ್ಷರನ್ನು ಸರಕಾರ ಹಠಾತ್ತಾಗಿ ವಜಾ ಮಾಡಿ ಹಲವು ತಿಂಗಳಾದವು. ಹೊಸ ಅಧ್ಯಕ್ಷರ ನೇಮಕದ ಬಗ್ಗೆಯೂ ಕನ್ನಡ ಸಂಸ್ಕೃತಿ ಇಲಾಖೆ ನಿರ್ಲಕ್ಷ್ಯ ಮನೋಭಾವ ಹೊಂದಿದೆ. ಬ್ಯಾರಿ ಭಾಷೆಯ ಕುರಿತ ಈ ತಾರತಮ್ಯವನ್ನು ನಾವು ಕಟುವಾಗಿ ಖಂಡಿಸಿದ್ದಾರೆ.
ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…
ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…
ಲಕ್ಷ್ಮೀಕಾಂತ್ ಕೊಮಾರಪ್ಪ ಮಣ್ಣಿನೊಂದಿಗೆ ಯುವಜನರ ನಂಟು ಬೆಸೆಯುವ ಉದ್ದೇಶ ನಾಳೆ ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ವತಿಯಿಂದ ಗದ್ದೆ ನಾಟಿ…
ಎಂ.ನಾರಾಯಣ ತಿ.ನರಸೀಪುರ: ಹೂ ಕಚ್ಚದ ಕಡಲೆಕಾಯಿ, ಸೂರ್ಯಕಾಂತಿ, ಮುಸುಕಿನ ಜೋಳದ ಬೆಳೆಗಳು ತಿ.ನರಸೀಪುರ: ತಾಲ್ಲೂಕಿನಲ್ಲಿ ಸಮರ್ಪಕ ಮಳೆ ಬಾರದಿರುವುದರಿಂದ ರೈತರು…
ಭೇರ್ಯ ಮಹೇಶ್ ಭೇರ್ಯ: ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಮಳಿಗೆಗಳು ತೆರೆಯದೆ ಪ್ರಯಾಣಿಕರಿಗೆ ಸಮಸ್ಯೆ ಭೇರ್ಯ: ಭೇರ್ಯ ಗ್ರಾಮದ ಬಸ್ ನಿಲ್ದಾಣದಲ್ಲಿ…