ಜಿಲ್ಲೆಗಳು

ದಸರಾ ಕವಿಗೋಷ್ಠಿಯಲ್ಲಿ ಬ್ಯಾರಿ ಭಾಷೆಗಿಲ್ಲ ಸ್ಥಾನ : ಸರ್ಕಾರದ ಮಲತಾಯಿ ಧೋರಣೆಗೆ ಖಂಡನೆ!

ಮೈಸೂರು : ವಿಶ್ವವಿಖ್ಯಾ ಮೈಸೂರು ದಸರಾ 2022 ರ ಅಂಗವಾಗಿ ನಾಡಿ ಗಮನ ಸೆಳೆಯುವ ಕವಿಗೋಷ್ಠಿ ಕಾರ್ಯಕ್ರಮದಲ್ಲಿ ವಿವಿಧ ಬಾಷೆಗಳ ಕವಿಗಳು ಭಾಗವಹಿಸುವ ಕವಿಗೋಷ್ಠಿಯಲ್ಲಿ ತುಳು, ಕೊಂಕಣಿ, ಕೊಡವ, ಅರೆಭಾಷೆ ಮತ್ತು ಎರವ ಭಾಷೆಗಳ ಕವಿತೆಗಳಿಗೆ ಈ ವರ್ಷ ಅವಕಾಶ ನೀಡಲಾಗಿದೆ. ಆದರೆ ಈ ಬಾರಿ ಕರಾವಳಿಯ ಬಹುಮುಖ್ಯವಾದ ಭಾಷೆಯಾದ ಬ್ಯಾರಿ ಭಾಷೆಯನ್ನು ಕಡೆಗಣಿಸಲಾಗಿದೆ. ಬ್ಯಾರಿ ಭಾಷೆಯ ಯಾವೊಬ್ಬ ಕವಿಗಳಿಗೂ ಅವಕಾಶ ನೀಡಿಲ್ಲ ಎಂದು ಕವಿಗಳು ಹಾಗೂ ಬ್ಯಾರೀಸ್ ವೆಲ್ ಫೇರ್ ಅಸೋಸಿಯೇಷನ್ ನ ಪದಾಧಿಕಾರಿಗಳಾದ  ಬಿ.ಎಂ.ಹನೀಫ್ ಮತ್ತು ಟಿ.ಕೆ.ಷರೀಫ್ ಅವರು ಸರ್ಕಾರದ ನಡೆಗೆ ಬೇಸರವನ್ನು ವ್ಯಕ್ತಪಡಿಸಿದ್ದಾರೆ.

ಮುಂದುವರಿದು, ಬ್ಯಾರಿ ಭಾಷೆಯನ್ನು ರಾಜ್ಯದಲ್ಲಿ ಸುಮಾರು 12 ಲಕ್ಷಕ್ಕೂ ಅಧಿಕ ಮಂದಿ ಮಾತನಾಡುತ್ತಾರೆ. ನೂರಾರು ಕವಿಗಳು ಈ ಭಾಷೆಯಲ್ಲಿ ಕವಿತೆಗಳನ್ನು ರಚಿಸುತ್ತಿದ್ದಾರೆ. ಬ್ಯಾರಿ ಭಾಷೆಯ ಬೆಳವಣಿಗೆಗೆ ರಾಜ್ಯ ಸರಕಾರವೇ ಬ್ಯಾರಿ ಸಾಹಿತ್ಯ ಅಕಾಡೆಮಿಯನ್ನೂ ರಚಿಸಿದೆ. ಹೀಗಿರುವಾಗ ನಾಡಿನ ಪ್ರತಿಷ್ಠಿತ ದಸರಾ ಉತ್ಸವದ ಕವಿಗೋಷ್ಠಿಯಲ್ಲಿ ಬ್ಯಾರಿ ಭಾಷೆಗೆ ಈ ರೀತಿಯ ಅವಮಾನ ಮಾಡಿರುವುದು ಖಂಡಿತಾ ಸರಿಯಲ್ಲ.ಕನ್ನಡ ಸಾಹಿತ್ಯಕ್ಕೆ ಬ್ಯಾರಿ ಮಾತೃಭಾಷೆಯ ಹತ್ತಾರು ಲೇಖಕರು ಮಹತ್ವದ ಕೊಡುಗೆ ನೀಡಿದ್ದಾರೆ. ಕನ್ನಡದ ಮಹತ್ವದ ಮುಸ್ಲಿಂ ಹಿನ್ನೆಲೆಯ ಲೇಖಕರಲ್ಲಿ ಹೆಚ್ಚಿನವರು ಬ್ಯಾರಿ ಭಾಷಿಕರು. ದಸರಾ ಕವಿಗೋಷ್ಠಿ ಉಪಸಮಿತಿಗೆ ಇದ್ಯಾವುದೂ ಗೊತ್ತಿಲ್ಲವೇ? ಅಥವಾ ಗೊತ್ತಿದ್ದೂ ತಾರತಮ್ಯ ನೀತಿ ಅನುಸರಿಸಿದೆಯೆ? ಎಂದು ಪ್ರಶ್ನಿಸಿದ್ದಾರೆ.

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಗೆ ಈಗ ಅಧ್ಯಕ್ಷರೂ ಇಲ್ಲದೆ, ಪೂರ್ಣಾವಧಿ ರಿಜಿಸ್ಟ್ರಾರ್ ಕೂಡಾ ಇಲ್ಲದೆ ಅಕಾಡೆಮಿಯ ಚಟುವಟಿಕೆಗಳು ಕುಂಠಿತಗೊಂಡಿವೆ. ಇದ್ದ ಅಧ್ಯಕ್ಷರನ್ನು ಸರಕಾರ ಹಠಾತ್ತಾಗಿ ವಜಾ ಮಾಡಿ ಹಲವು ತಿಂಗಳಾದವು. ಹೊಸ ಅಧ್ಯಕ್ಷರ ನೇಮಕದ ಬಗ್ಗೆಯೂ ಕನ್ನಡ ಸಂಸ್ಕೃತಿ ಇಲಾಖೆ ನಿರ್ಲಕ್ಷ್ಯ ಮನೋಭಾವ ಹೊಂದಿದೆ. ಬ್ಯಾರಿ ಭಾಷೆಯ ಕುರಿತ ಈ ತಾರತಮ್ಯವನ್ನು ನಾವು ಕಟುವಾಗಿ ಖಂಡಿಸಿದ್ದಾರೆ.

andolanait

Recent Posts

ಪರ್ಯಾಯ ವ್ಯವಸ್ಥೆ ಕಲ್ಪಿಸಿ ಫುಟ್‌ಪಾತ್ ವ್ಯಾಪಾರಿಗಳನ್ನು ತೆರವುಗೊಳಿಸಿ

ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ರಾಜ್ಯ ಸರ್ಕಾರದ ಸೂಚನೆಯ ಮೇರೆಗೆ ಮೈಸೂರು ಸೇರಿದಂತೆ ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳ ಆಡಳಿತ ಇದೀಗ…

20 mins ago

ಆರ್‌.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಸಂವಹನ ಕೊರತೆಯಿಂದ ಪಟ್ಟಕ್ಕೆ ಕುತ್ತು

ರಾಮಕೃಷ್ಣ ಹೆಗಡೆ, ದೇವೇಗೌಡರನ್ನು ನಿರ್ಲಕ್ಷಿಸಿ ಅಧಿಕಾರ ಕಳೆದುಕೊಂಡ ಎಸ್.ಆರ್.ಬೊಮ್ಮಾಯಿ ರಾಜಕಾರಣದಲ್ಲಿ ಸಂವಹನ ಬಹಳ ಮುಖ್ಯ.ಅದರಲ್ಲೂ ಮುಖ್ಯಮಂತ್ರಿ ಹುದ್ದೆಗೇರುವ ನಾಯಕರಿಗೆ ಸಂವಹನ…

23 mins ago

ಚಾಮರಾಜೇಶ್ವರ ರಥೋತ್ಸವಕ್ಕೆ ದ್ವಿಶತಮಾನದ ನವೋತ್ಸಾಹ

ಸಿ.ಎಂ.ನರಸಿಂಹಮೂರ್ತಿ  ಚಾಮರಾಜನಗರ ವನಸಿರಿ ಪ್ರಕೃತಿ ಮಾತೆಯ ತವರೂರು. ವನ್ಯ ಸಂಪತ್ತಿನ ತಾಣ. ಅಪ್ರತಿಮ ನೈಸರ್ಗಿಕ ಸಂಪತ್ತು ಹಾಗೂ ಶ್ರೀಮಂತ ಸಾಂಸ್ಕ…

29 mins ago

ಕೆ.ಆರ್.ಪೇಟೆ: ಶೇ.19ರಷ್ಟು ಮಳೆ ಕೊರತೆ

ಆರ್.ಶ್ರೀನಿವಾಸ್ ತಾಲ್ಲೂಕಿನಲ್ಲಿ ೩೭,೬೭೧ ಹೆಕ್ಟೇರ್ ಪೈಕಿ ೬,೨೯೦ ಹೆ.ನಲ್ಲಿ ಮಾತ್ರ ಬಿತ್ತನೆ ಕಾರ್ಯ ಕೆ.ಆರ್.ಪೇಟೆ: ತಾಲ್ಲೂಕಿನಲ್ಲಿ ಪ್ರಸಕ್ತ ಸಾಲಿನ ಜ.೧ರಿಂದ…

33 mins ago

ಯುಜಿ, ಎಬಿ ಕೇಬಲ್ ಅಳವಡಿಕೆಯೊಂದೇ ಪರಿಹಾರ

ನವೀನ್ ಡಿಸೋಜ ಕೊಡಗಿನಲ್ಲಿ ಮಳೆಗಾಲದಲ್ಲಿ ಎದುರಾಗುವ ವಿದ್ಯುತ್ ಸಮಸ್ಯೆ; ಶಾಶ್ವತ ಪರಿಹಾರಕ್ಕೆ ಬೇಕಿದೆ ಬಹುದೊಡ್ಡ ಮೊತ್ತ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ…

38 mins ago

ಮೂಲೆಹೊಳೆ ಚೆಕ್‌ಪೋಸ್ಟ್‌ನಲ್ಲಿ ಹಣ ವಸೂಲಿ ದಂಧೆ?

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಕರ್ನಾಟಕ-ಕೇರಳ ಗಡಿಭಾಗದಲ್ಲಿರುವ ಬಂಡೀಪುರ ಸಮೀಪದ ಮೂಲೆಹೊಳೆ ಚೆಕ್‌ಪೋಸ್ಟ್‌ನಲ್ಲಿ ಸರಕು ಸಾಗಣೆ ವಾಹನಗಳಿಂದ ಅಕ್ರಮವಾಗಿ ಹಣ ವಸೂಲಿ…

43 mins ago